ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭ ಕಾರ್ಯಕ್ರಮದ ಪೂರ್ವ ಸಿದ್ಧತೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಕು. ಭವ್ಯ, ರಾಜ್ಯಕಾರ್ಯದರ್ಶಿ ಆರ್ ಕಿರಣ್, ನವೀನ್, ಸಮತಾ ಅವರು ಪದಗ್ರಹಣ ಕಾರ್ಯಕ್ರಮದ ಮಾಹಿತಿಯನ್ನು ನೀಡಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಶಿವಮೊಗ್ಗ ನಗರಾಧ್ಯಕ್ಷ ಎಚ್.ಪಿ. ಗಿರೀಶ್ ಶಿಕಾರಿಪುರ, ಅಧ್ಯಕ್ಷ ದರ್ಶನ್ ಉಳ್ಳಿ, ಭದ್ರಾವತಿ ಅಧ್ಯಕ್ಷ ವಿನೋದ್ ಕುಮಾರ್, ತೀರ್ಥಹಳ್ಳಿ ಅಧ್ಯಕ್ಷ ಪ್ರದೀಪ್, ಪದಾಧಿಕಾರಿಗಳಾದ ಬಿ. ಲೋಕೇಶ್, ಶರವಣ ಡಿ.ಆರ್. ಗಿರೀಶ್, ಕುಮರೇಶ್ ಸಚಿನ್ ಶಿಂಧೆ ಇತರರು ಇದ್ದರು.
Get In Touch With Us info@kalpa.news Whatsapp: 9481252093
Discussion about this post