ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಖಾತ್ರಿಪಡಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.
ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಿಟಿ ಬಸ್ ಮಾಲೀಕರು, ಚಾಲಕರು ಹಾಗೂ ನಿರ್ವಾಹಕರೊಂದಿಗೆ ವಿಶೇಷ ಸಭೆ ನಡೆಯಿತು.
ಸಭೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಎಲ್ಲಾ ಸಿಟಿ ಬಸ್ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಯಿತು. ಜೊತೆಗೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ನಿಗದಿತ ಬಸ್ ನಿಲ್ದಾಣಗಳಲ್ಲೇ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಕಡ್ಡಾಯ ಎಂದು ತಿಳಿಸಲಾಯಿತು.
Also read: Bengaluru | ರಾಜ್ಯ ಮಹತ್ವದ ಮೈಲಿಗಲ್ಲು | SIR ಪರಿಷ್ಕರಣೆ 92.95% ಪೂರ್ಣ
ಇದೇ ವೇಳೆ, ಚಾಲನೆ ವೇಳೆ ಮೊಬೈಲ್ ಬಳಕೆ, ಅನುಚಿತ ವರ್ತನೆ ಮತ್ತು ಅಸಭ್ಯ ಹಾಡುಗಳ ಪ್ರಸಾರದ ವಿರುದ್ಧ ಸಾರ್ವಜನಿಕರು ತಕ್ಷಣ ದೂರು ನೀಡಲು ಅನುಕೂಲವಾಗುವಂತೆ “Public Eye” ಅಪ್ಲಿಕೇಶನ್, ಸಂಚಾರ ಪೊಲೀಸ್ ಸಹಾಯವಾಣಿ ಮತ್ತು ತುರ್ತು ಸಂಖ್ಯೆ 112 ಕುರಿತು ಜಾಗೃತಿ ಪೋಸ್ಟರ್ಗಳನ್ನು ಬಸ್ಗಳಲ್ಲಿ ಪ್ರದರ್ಶಿಸುವಂತೆ ಸೂಚನೆ ನೀಡಲಾಯಿತು.
“ಸಾರ್ವಜನಿಕರ ಸುರಕ್ಷತೆಯೇ ನಮ್ಮ ಆದ್ಯತೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಸಭೆಯಲ್ಲಿ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








