ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘದ ಸದಸ್ಯರ ಸಾಲದ ಮೊಬಲಗನ್ನು ಖಜಾನೆ-2ರಲ್ಲಿ ಕಡಿತಗೊಳಿಸಲು ಎಚ್.ಆರ್.ಎಂ.ಎಸ್.ನಲ್ಲಿ ಅಳವಡಿಸಿಕೊಡುವಂತೆ ಆಗ್ರಹಿಸಿ ಅನುದಾನಿತ ನೌಕರರ ಸಹಕಾರ ಸಂಘದ ಅಧ್ಯಕ್ಷ ಯೋಗೇಶ ಅವರ ನೇತೃತ್ವದ ನಿಯೋಗ ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಈ ಮೊದಲು ಸಹಕಾರ ಸಂಘದಿಂದ ತೆಗೆದುಕೊಂಡ ಸಾಲಗಳ ಕಂತನ್ನು ಎಚ್.ಆರ್.ಎಂ.ಎಸ್.ಮೂಲಕ ಪ್ರತಿ ತಿಂಗಳೂ ಕಟಾಯಿಸುವ ಸೌಲಭ್ಯ ಇತ್ತು. ಖಜಾನೆ-2 ವ್ಯವಸ್ಥೆ ಬಂದಾಗಿನಿಂಗ ಸಾಲಗಳ ಕಂತನ್ನು ಕಟಾಯಿಸುವ ಸೌಲಭ್ಯ ಇಲ್ಲವಾಗಿದೆ. ಆ ಕಾರಣಕ್ಕೆ ಸಹಕಾರ ಸಂಘದಲ್ಲಿ ಸುಸ್ತಿದಾರರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಈಗಾಗಲೇ ಹಲವಾರು ಸಹಕಾರ ಸಂಘಗಳ, ಸಹಕಾರ ಬ್ಯಾಂಕುಗಳ, ತಾಲೂಕು ಪ್ರಾಥಮಿಕ ಶಿಕ್ಷಕರ ಪತ್ತಿನ ಸಹಕಾರ ಸಂಘ, ನಿ., ಹಾಗೂ ಸರಕಾರಿ ನೌಕರರ ಸೌಹಾರ್ದ ಪತ್ತಿನ ಸಹಕಾರ ಸಂಘದ ಸದಸ್ಯರ ಸಾಲದ ಕಂತಿನ ಕಡಿತಗಳು ಎಚ್.ಆರ್.ಎಂ.ಎಸ್.ನಲ್ಲಿ ಅಳವಡಿಕೆಯಾಗಿ ಖಜಾನೆ-2ರಲ್ಲಿ ಕಡಿತವಾಗುವಂತೆ ಎಚ್.ಆರ್.ಎಂ.ಎಸ್.ನಲ್ಲಿ ಕಡಿತಗೊಳಿಸಲು ಅವಕಾಶವಿರುತ್ತದೆ ಎಂಬುದನ್ನು ಅಧಿಕಾರಿಗಳ ಗಮನಕ್ಕೆ ಈ ನಿಯೋಗ ತಂದಿತು.
Also read: ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಉದ್ದೇಶ, ಪ್ರಯೋಜನವೇನು ಗೊತ್ತಾ? ಇಲ್ಲಿದೆ ಮಾಹಿತಿ
ಈ ನಿಟ್ಟಿನಲ್ಲಿ ತಕ್ಷಣ ಕಾರ್ಯೋನ್ಮುಖರಾಗಿ ಅನುದಾನಿತರ ಸಹಕಾರ ಸಂಘದ ಬೆಳವಣಿಗೆಗೆ ಸಹಕರಿಸಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷರಾದ ಬಿ.ಎಂ.ರಘು, ಮಾಜಿ ಅಧ್ಯಕ್ಷರಾದ ಡಿ.ಕೆ. ದಿವಾಕರ, ಡಾ. ಬಾಲಕೃಷ್ಣ ಹೆಗಡೆ, ಎಸ್.ಎಚ್. ಪ್ರಶಾಂತ, ನಿರ್ದೇಶಕರಾದ ಪರಶುರಾಮಪ್ಪ, ಸುರೇಶ, ಜ್ಯೋತಿ, ಸದಸ್ಯರಾದ ಶಿವ್ಯಾ ನಾಯಕ, ಬಸವರಾಜ ಮೊದಲಾದವರು ನಿಯೋಗದಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post