No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

kalpa News by kalpa News
November 23, 2018
in ಶಿವಮೊಗ್ಗ
0
ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

Internet Image

Share on FacebookShare on TwitterShare on WhatsApp

ಶಿವಮೊಗ್ಗ: ಪಿಯುಸಿ, ಪದವಿ ಹಾಗೂ ಐಎಎಸ್ ಕನಸು ಕಂಡಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯ ತೇಜಸ್ ಸಂಸ್ಥೆಯ ವತಿಯಿಂದ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ ಅವಕಾಶ ಕಲ್ಪಿಸಲಾಗುತ್ತಿದೆ.
ಈ ಯೋಜನೆ ಕುರಿತಾಗಿ ಮಾಹಿತಿ ಇಂತಿದೆ.
ಜಿಲ್ಲೆಯ ಎಲ್ಲಾ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಪ್ರತಿಭಾವಂತ ಬಾಲಕರಿಗೆ ಇದೊಂದು ಸದವಕಾಶ. ಬಾಲಕರಿಗೆ ಮಾತ್ರ ಅವಕಾಶವಿದೆ.
* ಪ್ರಸಕ್ತ ಸಾಲಿನಲ್ಲಿ ಹತ್ತನೇ ತರಗತಿ ಪೂರೈಸುವ ಸುಮಾರು 20 ಪ್ರತಿಭಾವಂತ ಬಾಲಕರನ್ನು ಆರಿಸಲಾಗುವುದು.
* ಎರಡು ವರ್ಷಗಳ ಪಿಯುಸಿ, 3 ವರ್ಷಗಳ ಪದವಿ ಶಿಕ್ಷಣವನ್ನು ಉಚಿತವಾಗಿ ನೀಡುವುದರೊಂದಿಗೆ ಅವರನ್ನು ಐಎಎಸ್ ಪ್ರವೇಶ ಪರೀಕ್ಷೆಗೆ 2 ವರ್ಷಗಳ ಕಾಲ ತರಬೇತುಗೊಳಿಸಲಾಗುವುದು.
* ಪ್ರಸಕ್ತ ಸಾಲಿನಲ್ಲಿ 11 ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣವನ್ನು, 11 ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ಅರ್ಹತೆ:
* ಕಳೆದ ಸಾಲಿನಲ್ಲಿ 9 ನೇ ತರಗತಿ ಅಂತಿಮ ಪರೀಕ್ಷೆಯಲ್ಲಿ ಶೇ. 80 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿರಬೇಕು.
* ಹತ್ತನೇತರಗತಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 85 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿರಬೇಕು
* ಆರ್ಥಿಕವಾಗಿ ಹಿಂದುಳಿವರಿಗೆ ಆದ್ಯತೆ
ಆಯ್ಕೆ ವಿಧಾನ:
* ಅರ್ಜಿ ಸಲ್ಲಿಸಲು ಕೊನೆಯ ಡಿಸೆಂಬರ್ 10, 2018 (ಮುಖ್ಯಶಿಕ್ಷಕರ ಶಿಫಾರಸ್ಸಿನೊಂದಿಗೆ)
* ಲಿಖಿತ ಪರೀಕ್ಷೆ ಜನವರಿ 6, 2019 ರ ಭಾನುವಾರದಂದು ನಡೆಯಲಿದೆ.
* ಕೇಂದ್ರಗಳು- ಶಿವಮೊಗ್ಗ, ಭದ್ರಾವತಿ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪ, ಕಳಸ ಪರೀಕ್ಷೆ ನಡೆಯುವ ಸ್ಥಳಗಳನ್ನು ಮುಂದೆ ತಿಳಿಸಲಾಗುವುದು.
* ವಿದ್ಯಾರ್ಥಿಯ ಆಯ್ಕೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯುತ್ತದೆ.
* ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು.
ಮನವಿ:
* ಅರ್ಹ ವಿದ್ಯಾರ್ಥಿಗಳು ಆಯ್ಕೆ ಪರೀಕ್ಷೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ಅಣಿಗೊಳಿಸಿ.
* ಆಯ್ಕೆ ಪರೀಕ್ಷೆಗೆ ಯಾವುದೇ ಶುಲ್ಕವಿಲ್ಲ.
* ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.
* ದೇಶದ ಸೇವೆಯಲ್ಲಿ ದಕ್ಷ, ಪ್ರಾಮಾಣಿಕ ಮತ್ತು ದೇಶನಿಷ್ಠ ಅಧಿಕಾರಿಗಳು ಇರಬೇಕೆಂಬ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ತೇಜಸ್ ನ ಉದ್ದೇಶಗಳು:
ನಮ್ಮ ದೇಶದ ಭವ್ಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ, ದೂರದೃಷ್ಟಿಯುಳ್ಳ ರಾಷ್ಟ್ರೀಯತೆಯ ಸುಸ್ಪಷ್ಟ ಕಲ್ಪನೆ ಹೊಂದಿರುವ ಅಪರಿಮಿತ ಉತ್ಸಾಹಿಗಳಾದ ನಾಗರಿಕ ಸೇವಾ ಅಧಿಕಾರಿಗಳಾಗಬೇಕೆಂಬ ಇಚ್ಛಾಶಕ್ತಿಯುಳ್ಳ ಆಕಾಂಕ್ಷಿಗಳನ್ನು ಗುರುತಿಸಿ, ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ತರಬೇತಿಯಿಂದ ಯುಪಿಎಸ್‌ಸಿ ಪರೀಕ್ಷೆಯನ್ನು ಉತ್ತೀರ್ಣ ಮಾಡಿಸಿ ಅವರು ಭಾರತೀಯ ಆಡಳಿತಾತ್ಮಕ ಸೇವೆಯನ್ನು ಕೈಗೊಳ್ಳುವಂತೆ ಮಾಡುವ ಉದ್ದೇಶವನ್ನು ಹೊಂದೆ.
ತೇಜಸ್ ನ ಯೋಜನೆ:
* ಇದರಲ್ಲಿ 10 ನೆಯ ತರಗತಿ ಓದುತ್ತಿರುವ ಮಕ್ಕಳಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆಯುವ ಹಂಬಲ ಮತ್ತು ಸಂಕಲ್ಪ ಇರುವ ಮಕ್ಕಳನ್ನು ಪ್ರವೇಶ ಪರೀಕ್ಷೆ, ಸಂದರ್ಶನ ಮತ್ತು ಪೋಷಕರ ಒಪ್ಪಿಗೆ ಇಚ್ಛೆಯನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ.
* ಆಯ್ಕೆಯಾದಂತಹ ಮಕ್ಕಳಿಗೆ ವಸತಿ ಸೌಲಭ್ಯದೊಡನೆ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣವನ್ನು ಪ್ರತಿಷ್ಠಿತ ಕಾಲೇಜುಗಳಲ್ಲಿ ಕೊಡಿಸಲಾಗುತ್ತದೆ. ಮತ್ತು ಇದರೊಂದಿಗೆ ಅವರನ್ನು ಕೇಂದ್ರಿಯ ಆಡಳಿತಾತ್ಮಕ ಸೇವೆಗಳ ಪ್ರವೇಶ ಪರೀಕ್ಷೆಯನ್ನು ಎದುರಿಸಲು ಅನುಭವಿ ಮಾರ್ಗದರ್ಶಕರಿಂದ ತರಬೇತುಗೊಳಿಸಲಾಗುತ್ತದೆ. ಅವರ ಶಕ್ತಿ ಸಾಮರ್ಥ್ಯಗಳನ್ನು ಅಳೆದು ಅವರು ಯಶಸ್ವಿಯಾಗುವಂತೆ ಅವರಿಗೆ ಶಿಕ್ಷಣ ತರಬೇತಿ ಮಾರ್ಗದರ್ಶನ ವ್ಯವಸ್ಥೆಯನ್ನು ಮಾಡಲಾಗುತ್ತದೆ.
* ಪ್ರತೀ ವರ್ಷ 30 ಜನ ವಿದ್ಯಾರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಆದ್ಯತೆಯೊಂದಿಗೆ ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪ್ರವೇಶ ಪರೀಕ್ಷೆಯನ್ನು ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾಡಲಾಗುತ್ತದೆ.
* ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ, ತರಬೇತಿ, ಊಟದ ವ್ಯವಸ್ಥೆ ಹಾಗೂ ವಸತಿ ವ್ಯವಸ್ಥೆಯನ್ನು ಸಂಪೂರ್ಣ ಉಚಿತವಾಗಿ ಕಲ್ಪಿಸಲಾಗಿದೆ. 2 ವರ್ಷದ ಪದವಿ ಪೂರ್ವ ಶಿಕ್ಷಣ, 3 ವರ್ಷದ ಪದವಿ ಶಿಕ್ಷಣ ಹಾಗೂ ನಂತರ 2 ವರ್ಷಗಳ ಪರೀಕ್ಷಾ ತಯಾರಿ ಒಟ್ಟು 7 ವರ್ಷಗಳ ಕಾಲ ಪ್ರತಿಯೊಬ್ಬ ವಿದ್ಯಾರ್ಥಿಯೂ ‘ತೇಜಸ್’ ನೆಲೆಯಲ್ಲಿ ಇದ್ದು ತಜ್ಞ ತರಬೇತುದಾರರಿಂದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಮಾರ್ಗದರ್ಶನ ಪಡೆದು ಪರೀಕ್ಷೆ ಎದುರಿಸುವಂತೆ ಸಜ್ಜುಗೊಳಿಸುವ ಯೋಜನೆ ನಮ್ಮದು.
* ಎಲ್ಲಾ ವಿದ್ಯಾರ್ಥಿ. ಅಭ್ಯರ್ಥಿಗಳಿಗೆ ಪರೀಕ್ಷೆಗೆ ಬೇಕಾದ ವಿಷಯ ಮತ್ತು ತಂತ್ರದ ತರಬೇತಿಯೊಂದಿಗೆ ಅವರಿಗೆ ನಾಡಿನ ನುರಿತ ಸಾಧಕರಿಂದ ಸಮಾಜ ಸೇವಕರಿಂದ ನಾಯಕತ್ವ, ಸಮಾಜ ಸೇವೆ, ದೇಶಭಕ್ತಿ, ಸಾಮಾಜಿಕ ಕಳಕಳಿ ಮತ್ತು ಬದ್ದತೆ, ಸಾಮಾನ್ಯ ಜ್ಞಾನ ಇತ್ಯಾದಿ ವಿಷಯಗಳಲ್ಲಿ ಅವರಿಗೆ ಮಾರ್ಗದರ್ಶನ ಮತ್ತು ತರಬೇತಿಯನ್ನು ಸಂವಾದ ಪ್ರಯೋಗಿಕ ಪ್ರದರ್ಶನ ಅನುಭವ ಕಥನ, ವಿಡಿಯೋ/ಸಿಡಿ/ಪಿಪಿಡಿ ಪ್ರದರ್ಶನ ಇತ್ಯಾದಿ ಮಾಧ್ಯಮಗಳ ಮೂಲಕ ಕೊಡಲಾಗುತ್ತದೆ.
* ಈ ಸಾಲಿನ ಲಿಖಿತ ಆಯ್ಕೆ ಪರೀಕ್ಷೆಯನ್ನು ಮುಂದಿನ ಜನವರಿಯಲ್ಲಿ ನಡೆಸಲಾಗುತ್ತದೆ ಇದಕ್ಕಾಗಿ 4 ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳನ್ನೂ ಪತ್ರ ಮುಖೇನ ಸಂಪರ್ಕ ಮಾಡಲಾಗುತ್ತದೆ.
ಮಾಹಿತಿಗಾಗಿ:
ಸಂಯೋಜಕರು: ತೇಜಸ್ ಪ್ರಕಲ್ಪ
ಮಾಧವ ನೆಲೆ, ಕೆಎಚ್‌ಬಿ ಕಾಲೋನಿ
ಕಲ್ಲಹಳ್ಳಿ ಶಿವಮೊಗ್ಗ- 577204
ಹೆಚ್ಚಿನ ವಿವರಕ್ಕಾಗಿ ಸಂಪರ್ಕಿಸಿ
ಮಧುಕರ : 9980052300
ಸತೀಶ್ : 9480431811

Tags: IAS Entrance TestKannada NewsShivamoggaಉಚಿತ ತರಬೇತಿತೇಜಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಸ್ಮಶಾನ ಜಾಗದಲ್ಲಿ ಮರ ಬೆಳೆಸಿದರೆ ಹೆಣ ಎಲ್ಲಿ ಹೂಳುವುದು?

Next Post

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

kalpa News

kalpa News

Next Post
ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL