ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೈಲ್ವೆ ನಿಲ್ದಾಣದ #RailwayStation ಬಳಿಯಲ್ಲಿ ಸಂಜೆ ಪತ್ತೆಯಾಗಿರುವ ಅನುಮಾನಾಸ್ಪದ ಎರಡು ಬಾಕ್ಸ್’ಗಳ #Box ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಆಗಮಿಸಿರುವ ಬಾಂಬ್ ನಿಷ್ಕ್ರಿಯದಳ ಕಾರ್ಯಾಚರಣೆ ನಡೆಸುತ್ತಿದೆ.
ರೈಲ್ವೆ ನಿಲ್ದಾಣದ ಸಮೀಪ ಎರಡು ಅನುಮಾನಾಸ್ಪದವಾಗಿ ಗೋಣಿ ಚೀಲದಿಂದ ಸುತ್ತಿರುವ ಕಬ್ಬಿಣದ ಬಾಕ್ಸ್ ಪತ್ತೆಯಾಗಿದೆ.

ಈ ಬಾಕ್ಸ್’ಗಳಲ್ಲಿ ಸ್ಪೋಟ ಇರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ್ದು ಕಾರ್ಯಾಚರಣೆ ಆರಂಭಿಸಿದೆ. ಆದರೆ, ಧೋ ಎಂದು ಸುರಿಯುತ್ತಿರುವ ಮಳೆ ಕಾರ್ಯಾಚರಣೆ ಅಡ್ಡಿಯಾಗಿ ಪರಿಣಮಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post