ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಮಹತ್ವದ ಬೆಳವಣಿಗೆಯೊಂದರಲ್ಲಿ ಖಚಿತ ಮಾಹಿತಿ ಆಧರಿಸಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭಾರೀ ಪ್ರಮಾಣದ ಅಕ್ರಮ ದಂತವನ್ನು ವಶಕ್ಕೆ ಪಡೆದು, ಅಂತಾರಾಜ್ಯ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ.

ಹೊನ್ನಾವರದ ಮುಜಾಫರ್, ಕುಮಟಾ ಮೂಲದ ಮೊಹಮ್ಮದ್ ಡ್ಯಾನಿಶ್ ಮತ್ತು ಸೊರಬ ಮೂಲದ ಜಹೀರ್ ಅವರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಶಿವಮೊಗ್ಗ ಗಡಿಯಲ್ಲಿ ಸಕ್ರಿಯವಾಗಿರುವ ಒಂದೆರಡು ವಾರಗಳಿಂದ ಈ ಕಳ್ಳಸಾಗಣೆ ಗ್ಯಾಂಗ್ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು, ವಿಚಾರಣೆ ನಡೆದಿದೆ ಎಂದು ಮಾಹಿತಿ ತಿಳಿದುಬಂದಿದ್ದು, ಈವರೆಗೂ ಅರಣ್ಯ ಇಲಾಖೆ ಇದನ್ನು ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿಲ್ಲ.
(ವರದಿ: ಮಧುರಾಮ್, ಸೊರಬ)
Get In Touch With Us info@kalpa.news Whatsapp: 9481252093








Discussion about this post