No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಕೌಶಲ್ಯ ವೃದ್ಧಿಸಿಕೊಂಡು ಉದ್ಯೋಗ ಪಡೆದುಕೊಳ್ಳಲು ಮಾಹಿತಿ ಶಿಬಿರಗಳು ಸಹಕಾರಿ

ಶಿರಾಳಕೊಪ್ಪ | ತಾಲೂಕಿನ ಉದ್ಯೋಗ ಆಕಾಂಕ್ಷಿಗಳಿಗಾಗಿ ಪೂರ್ವಭಾವಿ ಉದ್ಯೋಗ ಮಾಹಿತಿ ಶಿಬಿರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2026
in ಶಿಕಾರಿಪುರ
0
ಕೌಶಲ್ಯ ವೃದ್ಧಿಸಿಕೊಂಡು ಉದ್ಯೋಗ ಪಡೆದುಕೊಳ್ಳಲು ಮಾಹಿತಿ ಶಿಬಿರಗಳು ಸಹಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  |

ನಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಉದ್ಯೋಗವನ್ನು ಪಡೆದುಕೊಳ್ಳಲು ಉದ್ಯೋಗ ಮಾಹಿತಿ ಶಿಬಿರಗಳು ಸಹಕಾರಿ ಆಗುತ್ತವೆ. ಈ ನಿಟ್ಟಿನಲ್ಲಿ ಮುಂಬರುವ ಶಿಕಾರಿಪುರ ಉದ್ಯೋಗ ಮೇಳದ ಅಂಗವಾಗಿ ಈ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಪ್ರತಿನಿಧಿಗಳು ಮತ್ತು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜಿ.ಎಸ್ ಶಿವಕುಮಾರ್ ಅವರು ತಿಳಿಸಿದರು.

ನಗರದ ನೇರಲಗಿ ವೀರಭದ್ರೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ತಾಳಗುಂದ, ಉಡುಗಣಿ ಹೋಬಳಿಗಳ ಮತ್ತು ಶಿರಾಳಕೊಪ್ಪ ನಗರದ ಉದ್ಯೋಗ ಆಕಾಂಕ್ಷಿಗಳ ಪೂರ್ವಭಾವಿ ಉದ್ಯೋಗ ಮಾಹಿತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.
ನಿಜವಾದ ದಾನವೆಂದರೆ ನಮಗೆ ಪರಿಚಯವಿಲ್ಲದ ವ್ಯಕ್ತಿಗಳ ಜೀವನವನ್ನು ರೂಪಿಸಲು ಸಹಾಯ ಮಾಡುವುದು. ನಮ್ಮ ಜೀವನವನ್ನು ರೂಪಿಸಿಕೊಳ್ಳುವುದು ಸುಲಭ ಆದರೆ ನಮ್ಮವರ ಜೀವನವನ್ನು ರೂಪಿಸುವುದು ಕಷ್ಟ. ನಾವು ನಮಗಾಗಿ ಜೀವಿಸುವ ಬದಲು, ನಮ್ಮವರಿಗಾಗಿ ಬಾಳಬೇಕು. ಅಂತಹ ಮನೋಭಾವ ಇಟ್ಟುಕೊಂಡು ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಹೆಮ್ಮೆಯ ಸಂಸದ ಬಿ ವೈ ರಾಘವೇಂದ್ರ ಅವರು ಮತ್ತು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರರವರು ಆಳ್ವಾಸ್ ಎಜುಕೇಶನಲ್ ಫೌಂಡೇಶನ್ ಇವರ ಸಂಯೋಗದೊಂದಿಗೆ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ನೇತೃತ್ವದಲ್ಲಿ ಈ ಭಾಗದ ಯುವಕರಿಗೆ ಉದ್ಯೋಗವನ್ನು ಒದಗಿಸಿಕೊಡಲು ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ತಾವುಗಳು ಆತ್ಮವಿಶ್ವಾಸದಿಂದ ಭಾಗವಹಿಸಿ ಉದ್ಯೋಗಗಳನ್ನು ಪಡೆದುಕೊಳ್ಳಬೇಕು ಎಂದರು.

ತಮ್ಮಲ್ಲಿರುವ ಪ್ರತಿಭೆ, ತಂತ್ರಜ್ಞಾನ ಮತ್ತು ಎಲ್ಲವನ್ನು ಸ್ವೀಕರಿಸುವ ಮನೋಭಾವದಿಂದ ಮುನ್ನಡೆಯಬೇಕು. ನಾವು ಮಾಡ ಬಲ್ಲೆವು ಎಂಬ ಆತ್ಮವಿಶ್ವಾಸ, ಮನೋಭಾವ ಇಚ್ಛಾಶಕ್ತಿ ನಮ್ಮಲ್ಲಿದ್ದರೆ ಎಂತಹದಾದರೂ ಉದ್ಯೋಗವನ್ನು ಪಡೆದುಕೊಳ್ಳಬಹುದು ಮತ್ತು ಸಾಧನೆ ಮಾಡಬಹುದು.ಪ್ರತಿನಿತ್ಯದ ತಮ್ಮ ಆತ್ಮವಿಶ್ವಾಸವಾದ ಬೆಳವಣಿಗೆಯಿಂದ ಮುಂದೆ ಉನ್ನತ ಮಟ್ಟದ ಹುದ್ದೆಯನ್ನು ಪಡೆದುಕೊಳ್ಳಬಹುದು.
ಈ ಉದ್ಯೋಗ ಮೇಳದಲ್ಲಿ ಎಲ್ಲಾ ಎಲ್ಲಾ ರೀತಿಯ ವಿದ್ಯಾರ್ಹತೆಗಳಿಗೆ ಅನುಗುಣವಾಗಿ ಉದ್ಯೋಗಗಳು ಇವೆ. ಆಳ್ವಾಸ್ ಪ್ರಗತಿ ರಾಷ್ಟ್ರಾದ್ಯಂತ ಈ ರೀತಿಯ ಉದ್ಯೋಗ ಮೇಳಗಳನ್ನು ಆಯೋಜಿಸಿ ಯಶಸ್ವಿಗೊಂಡು ಸಾವಿರಾರು ಯುವಕರಿಗೆ ಉದ್ಯೋಗಗಳನ್ನು ಒದಗಿಸಿಕೊಟ್ಟಿದೆ. ತಾವುಗಳು ಈ ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಉದ್ಯೋಗ ಆಕಾಂಕ್ಷಿಗಳಿಗೆ ತಿಳಿಸಿದರು.
ಕಾರ್ಯಕ್ರಮ ಆಡಳಿತ ಮಂಡಳಿಯ ಸಂಯೋಜನಾಧಿಕಾರಿಗಳಾದ ಕುಬೇರಪ್ಪ ಮಾತನಾಡಿ, ಈ ಉದ್ಯೋಗ ಮೇಳವನ್ನು ಸಂಸದ ಬಿ.ವೈ ರಾಘವೇಂದ್ರ ಮತ್ತು ಶಾಸಕ ಬಿ.ವೈ . ವಿಜೇಂದ್ರ ರವರ ಸಾಮಾಜಿಕ ಕಳಕಳಿಯ ಕಾರ್ಯಕ್ರಮವಾಗಿದೆ. ಶಿಕಾರಿಪುರ ತಾಲ್ಲೂಕಿನ ಪ್ರತಿಭಾವಂತ ಯುವಕರಿಗೆ ಒಂದೆ ನೆಲೆಯಲ್ಲಿ ಉದ್ಯೋಗ ಒದಗಿಸಿಕೊಡುವ ಉದ್ದೇಶವನ್ನು ಹೊಂದಿದೆ. ಉದ್ಯೋಗಾಕಾಂಕ್ಷಿಗಳಿಗೆ ಇದು ಸುವರ್ಣ ಅವಕಾಶ .ಈ ಉದ್ಯೋಗ ಮೇಳದಲ್ಲಿ 75ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು ಸಾವಿರಾರು ಉದ್ಯೋಗಗಳನ್ನು ನೀಡಲು ಸಿದ್ಧವಾಗಿವೆ. ಯುವಕರು ತಮ್ಮ ವಿದ್ಯಾಭ್ಯಾಸ ಮತ್ತು ಆಸಕ್ತಿಯ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಸಂದರ್ಶನಕ್ಕೂ ಮೊದಲು ಅವರು ಪೂರ್ವ ತಯಾರಿ ನಡೆಸಬೇಕು. ಸಂದರ್ಶನ ನಡೆಯುವಾಗ ಎದುರಾಗುಬಹುದಾದ ಸಮಸ್ಯೆಗಳನ್ನು, ಸಿದ್ಧತೆಯ ಬಗ್ಗೆ ಈ ರೀತಿಯ ಪೂರ್ವ ತರಬೇತಿ ಕಾರ್ಯಕ್ರಮಗಳು ನಿಮಗೆ ಸಹಕಾರಿ ಆಗುತ್ತವೆ. ಉದ್ಯೋಗ ಮೇಳದಲ್ಲಿ ಹೇಗೆ ಸಕ್ರಿಯವಾಗಿ ಭಾಗವಹಿಸಬೇಕು ಎಂಬುದರ ಕುರಿತು ಪ್ರಾಯೋಗಿಕ ತರಬೇತಿಗಳು ಹೆಚ್ಚು ಹೆಚ್ಚು ಬೇಕಾಗುತ್ತದೆ.ಕಡಿಮೆ ಅವಧಿಯಲ್ಲಿ ನಿಮ್ಮ ಪರಿಚಯ ಮಾಡಿಕೊಳ್ಳಲು ಮತ್ತು ಸಂದರ್ಶನ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧಪಡಿಸುವುದನ್ನು ತಿಳಿಯಬಹುದು.ಈ ತರಬೇತಿಗಳು ಮತ್ತು ಸಿದ್ಧತೆಗಳು ಉದ್ಯೋಗ ಮೇಳದಲ್ಲಿ ನಿಮ್ಮ ಅವಕಾಶಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈತ್ರಿ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ,ಆಳ್ವಾಸ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳು, ತಾಳಗುಂದ ಮತ್ತು ಉಡುಗಿ ಹೋಬಳಿ ಮತ್ತು ಶಿರಾಳಕೊಪ್ಪ ನಗರದ ನೋಂದಾಯಿತ ಉದ್ಯೋಗಾಕಾಂಕ್ಷಿಗಳು ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಕು.ಮದುಶ್ರೀ ಮತ್ತು ವಿದ್ಯಾ ಸ್ವಾಗತಿಸಿ,ಸಹಾಯಕ ಪ್ರಾಧ್ಯಾಪಕರಾದ ಡಾ.ರವಿ.ಹೆಚ್ ಸ್ವಾಗತಿಸಿ, ಉಪನ್ಯಾಸಕರಾದ ಶಿವರಾಜ್ ವಂದಿಸಿ.ಉಪನ್ಯಾಸಕರಾದ ಕೋಟೋಜಿರಾವ್ ರವರು ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

     

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShiralakoppaShivamoggaNewsಮಲೆನಾಡು_ಸುದ್ಧಿಶಿರಾಳಕೊಪ್ಪಶಿವಮೊಗ್ಗ_ನ್ಯೂಸ್
Share200Tweet125Send
Previous Post

ನೈರುತ್ಯ ರೈಲ್ವೆಯಿಂದ 47 ವಿಶೇಷ ರೈಲುಗಳ ಸಂಚಾರ | ಹೆಚ್ಚುವರಿ 14 ರೈಲುಗಳ ಕಾರ್ಯಾಚರಣೆಗೆ ಪ್ರಸ್ತಾವನೆ

Next Post

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL