No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬರೋಬ್ಬರಿ 3 ಸಾವಿರ ಕೋಟಿ ರೂ. ಯೋಜನೆಗೆ ಸಂಸದ ರಾಘವೇಂದ್ರ ಮಾಸ್ಟರ್ ಪ್ಲಾನ್? ಏನಿದು? ಇಲ್ಲಿದೆ ವಿವರ

ಈ ಬೃಹತ್ ಯೋಜನೆಯಿಂದ ಎಷ್ಟು ಜಿಲ್ಲೆ ಹಾಗೂ ಎಷ್ಟು ರಾಜ್ಯಕ್ಕೆ, ಏನೆಲ್ಲಾ ಪ್ರಯೋಜನವಿದೆ ಗೊತ್ತಾ?

kalpa News by kalpa News
February 4, 2023
in ಶಿವಮೊಗ್ಗ
0
ಬರೋಬ್ಬರಿ 3 ಸಾವಿರ ಕೋಟಿ ರೂ. ಯೋಜನೆಗೆ ಸಂಸದ ರಾಘವೇಂದ್ರ ಮಾಸ್ಟರ್ ಪ್ಲಾನ್? ಏನಿದು? ಇಲ್ಲಿದೆ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಭಿವೃದ್ಧಿಯ ಬೆನ್ನುಬಿದ್ದು, ಸಾಲು ಸಾಲು ಯೋಜನೆಗಳನ್ನು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹೊತ್ತು ತರುತ್ತಿರುವ ಕ್ರಿಯಾಶೀಲ ಸಂಸದ ಬಿ.ವೈ. ರಾಘವೇಂದ್ರ ಅವರು ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು, ಈ ಕುರಿತ ಎಕ್ಸ್’ಕ್ಲೂಸಿವ್ ಮಾಹಿತಿ ನಮ್ಮ ಬಳಿಯಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಾಖಲೆ ಎನ್ನಬಹುದಾದ ಯೋಜನೆಗಳನ್ನು ಜಾರಿಗೊಳಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಈಗ ಬರೋಬ್ಬರಿ 3 ಸಾವಿರ ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಯೊಂದಕ್ಕೆ ಪ್ಲಾನ್ ಮಾಡಿದ್ದಾರೆ. ಅದೇ ಮಲೆನಾಡು ಹಾಗೂ ಬಯಲುಸೀಮೆಯನ್ನು ಶೀಘ್ರದಲ್ಲಿ ಸಂಪರ್ಕಿಸುವ ಚತುಷ್ಪಥ ಹೆದ್ದಾರಿ ಯೋಜನೆ.

ಏನಿದು ಯೋಜನೆ?

ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯನ್ನು ಸಂಪರ್ಕಿಸಲು ನಾಲ್ಕು ಪಥದ ರಸ್ತೆಯನ್ನಾಗಿ ನಿರ್ಮಿಸುವ ಮಹತ್ವದ ಯೋಜನೆ ಇದಾಗಿದೆ.

ಮಾರ್ಗ ಹೇಗೆ?

ಮಲೆನಾಡು ಹಾಗೂ ಬಯಲುಸೀಮೆಯನ್ನು ಸಂಪರ್ಕಿಸುವ ವಿಶಿಷ್ಟ ಯೋಜನೆ ಇದಾಗಿದೆ. ಶಿವಮೊಗ್ಗ-ಹೊನ್ನಾಳಿ-ಹರಿಹರ-ತೆಲಗಿ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ ಮಾರ್ಗವಾಗಿ ಮರಿಯಮ್ಮನಹಳ್ಳಿಯನ್ನು ನೇರವಾಗಿ ಸಂಪರ್ಕಿಸುವ ಪ್ರಸ್ತಾವನೆ ಸಿದ್ದಗೊಂಡಿದೆ.

ಎಷ್ಟು ದೂರ ಕಡಿಮೆಯಾಗುತ್ತದೆ?

ಶಿವಮೊಗ್ಗದಿಂದ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ತಲುಪುವ ಸದ್ಯ ಇರುವ ರಾಜ್ಯ ಹೆದ್ದಾರಿ ಅತ್ಯಂತ ಕಳಪೆಯಾಗಿದೆ. ಉತ್ತಮ ರಸ್ತೆ ಮೂಲಕ ತೆರಳಬೇಕಾದರೆ ಚಿತ್ರದುರ್ಗದ ಮೂಲಕ ಸುಮಾರು 220 ಕಿಮೀ ಸಾಗಬೇಕು.

ಆದರೆ, ಪ್ರಸ್ತುತ ಯೋಜನೆ ಶಿವಮೊಗ್ಗದಿಂದ ಹರಿಹರ ಹರಪನಹಳ್ಳಿ ಮಾರ್ಗವಾಗಿ 182 ಕಿಮೀ ದೂರದ ಚತುಷ್ಟಥ ಹೆದ್ದಾರಿ ಯೋಜನೆ ಇದಾಗಿದೆ. ಅಲ್ಲಿಗೆ ಯೋಜನೆ ಸಾಕಾರವಾದ ನಂತರ ಅಂದಾಜು 40 ಕಿಮೀ ದೂರ ಕಡಿಮೆಯಾಗುತ್ತದೆ.

ಹೆದ್ದಾರಿ ಉನ್ನತೀಕರಣಕ್ಕೆ ಪ್ರಸ್ತಾವನೆ

ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯನ್ನು ಹರಿಹರದ ಮೂಲಕ ಸಂಪರ್ಕಿಸುವ ರಾಜ್ಯ ಹೆದ್ದಾರಿ 25ರ ರಸ್ತೆ ಕಳಪೆಯಾಗಿದ್ದು, ಸಂಚಾರ ದುಸ್ತರವಾಗಿದೆ. ಹೀಗಾಗಿ, ಯೋಜನೆಯ ಜಾರಿಗಾಗಿ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತೀಕರಿಸಿ, ಚತುಷ್ಪಥ ಹೆದ್ದಾರಿಯನ್ನಾಗಿ ಮಾಡುವ ಯೋಜನೆ ಸಂಸದ ರಾಘವೇಂದ್ರ ಅವರದ್ದು.

ಮರಿಯಮ್ಮನಹಳ್ಳಿಯ ಸಂಪರ್ಕ ಏಕೆ?

ಬೆಂಗಳೂರಿನಿಂದ ಹೊಸಪೇಟೆ ಮಾರ್ಗವಾಗಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಿದೆ. ಈ ಭಾಗದಲ್ಲಿ ಮರಿಯಮ್ಮನಹಳ್ಳಿ ಮಹತ್ವದ ಜಂಕ್ಷನ್ ಆಗಿದ್ದು, ಹಲವು ಕಡೆಗಳಿಗೆ ಸಂಪರ್ಕ ಸ್ಥಳವಾಗಿದೆ. ಹೀಗಾಗಿ, ಶಿವಮೊಗ್ಗದಿಂದ ಹರಿಹರ ಮಾರ್ಗವಾಗಿ ಚತುಷ್ಪಥ ರಸ್ತೆ ನಿರ್ಮಾಣವಾದರೆ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿಗೆ ಇದು ಸಂಪರ್ಕಿಸುತ್ತದೆ.

ಎಷ್ಟು ಜಿಲ್ಲೆಗೆ ಸಂಪರ್ಕ?

ಈ ಬೃಹತ್ ಯೋಜನೆ ಶಿವಮೊಗ್ಗ-ದಾವಣಗೆರೆ-ವಿಜಯನಗರ ಜಿಲ್ಲೆಗಳಲ್ಲಿ ಹಾದುಹೋಗುತ್ತದೆ.

ಅಂತರ್ ಜಿಲ್ಲೆ ಹಾಗೂ ಅಂತಾರಾಜ್ಯ ಸಂಪರ್ಕ

ಯೋಜನೆ ಜಾರಿಯಿಂದ ಶಿವಮೊಗ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ನೇರವಾಗಿ ಸಹಕಾರಿಯಾಗಿದೆ. ನೇರವಾಗಿ ಮಲೆನಾಡು ಹಾಗೂ ಬಯಲುಸೀಮೆಯನ್ನು ಸಂಪರ್ಕಿಸುವ ಯೋಜನೆ ಇದಾಗಿದ್ದರೂ ಕರಾವಳಿ ಜಿಲ್ಲೆಗಳು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಸಂಪರ್ಕಕ್ಕೂ ಸಹ ಸಹಕಾರಿಯಾಗಲಿದೆ.

ಮರಿಯಮ್ಮನಹಳ್ಳಿಯಿಂದ ಆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಿದೆ. ಹೀಗಾಗಿ, ಈ ಯೋಜನೆಯಿಂದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಶಿವಮೊಗ್ಗದಿಂದ ಸಂಪರ್ಕ ಶೀಘ್ರವಾಗುತ್ತದೆ. ಪ್ರಮುಖವಾಗಿ ಮಂತ್ರಾಲಯ ಸೇರಿದಂತೆ ಆ ಭಾಗದ ಕ್ಷೇತ್ರಗಳಿಗೆ ತೆರಳುವವರಿಗೆ ಸುಲಭವಾಗಲಿದೆ.

ಇನ್ನು, ಶಿವಮೊಗ್ಗ-ಮಲ್ಪೆ ಸಂಪರ್ಕಿಸುವ ಸುಮಾರು 600 ಕೋಟಿ ರೂ. ವೆಚ್ಚದ ಹೆಬ್ರಿ-ಮಲ್ಪೆ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಇನ್ನೊಂದೆಡೆ ಸಿಗಂಧೂರು ಸೇತುವೆ ಕಾಮಗಾರಿಯೂ ಸಹ ಪ್ರಗತಿಯಲ್ಲಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ-ಮರಿಯಮ್ಮನಹಳ್ಳಿ ಚತುಷ್ಪಥ ಹೆದ್ದಾರಿ ನಿರ್ಮಾಣವಾದರೆ ಆಂಧ್ರಪ್ರದೇಶ, ತೆಲಂಗಾಣ ಹಾಗೂ ನಮ್ಮ ರಾಜ್ಯದ ಬಯಲುಸೀಮೆ ಜಿಲ್ಲೆಗಳ ಪ್ರವಾಸಿಗರಿಗೆ ಜೋಗ, ಸಿಗಂಧೂರು, ಕೊಲ್ಲೂರು, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದ ಕ್ಷೇತ್ರಗಳಿಗೆ ತೆರಳಲು ಅನುಕೂಲವಾಗುತ್ತದೆ.

ಕೇವಲ ಪ್ರವಾಸಿಗರಿಗೆ ಮಾತ್ರವಲ್ಲ ಅಂತಾರಾಜ್ಯ ಹಾಗೂ ಅಂತರ್ ಜಿಲ್ಲೆಗಳ ವ್ಯಾಪಾರ ವ್ಯವಹಾರಗಳಿಗೂ ಸಹ ಇದು ಪ್ರಯೋಜನವಾಗುತ್ತದೆ.

ಯೋಜನೆಯ ಗಾತ್ರ

ಹಲವು ಜಿಲ್ಲೆಗಳು ಹಾಗೂ ಮೂರು ರಾಜ್ಯಗಳನ್ನು ಸಂಪರ್ಕಿಸುವ ಈ ಮಹತ್ವದ ಯೋಜನೆ ಸುಮಾರು 3 ಸಾವಿರ ಕೋಟಿ ರೂ. ಮೊತ್ತದ್ದಾಗಿದೆ.

ಯಾವಾಗ ಜಾರಿಯಾಗಬಹುದು?

ಈ ಮಹತ್ವದ ಬೃಹತ್ ಯೋಜನೆ ಈಗಾಗಲೇ ಸಿದ್ದವಾಗಿದ್ದು, ಪ್ರಸ್ತಾವನೆ ಸಲ್ಲಿಕೆಯಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಈಗಾಗಲೇ ಚರ್ಚೆ ನಡೆಸಿ, ಯೋಜನೆ ಜಾರಿಗೆ ಮನವಿ ಮಾಡಿದ್ದಾರೆ. ಯೋಜನೆಗಾಗಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತೀಕರಿಸಲು ಸಚಿವರು ಈಗಾಗಲೆ ಸಮ್ಮತಿ ಸೂಚಿಸಿದ್ದಾರೆ.

ಸಂಸದರ ಮನವಿಗೆ ತಾತ್ವಿಕ ಒಪ್ಪಿಗೆ ದೊರೆತಿದ್ದು, ಆಡಳಿತಾತ್ಮಕ ಅನುಮೋದನೆ ಇನ್ನೂ ದೊರೆಯಬೇಕಿದೆ. ಬಹುತೇಕ ಈ ವರ್ಷದ ಅಂತ್ಯಕ್ಕೆ ಈ ಯೋಜನೆ ಜಾರಿಯಾಗುವ ಎಲ್ಲ ಸಾಧ್ಯತೆಗಳು ಇವೆ.

ಇಂತಹ ಮಹತ್ವದ ಯೋಜನೆಯೊಂದಕ್ಕೆ ಮುಂದಾಗಿರುವ ಸಂಸದ ರಾಘವೇಂದ್ರ ಹಾಗೂ ಅಧಿಕಾರಿಗಳಿಗೆ ಅಭಿನಂದನೆಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Andra PradeshB Y RaghavendraBayalu Seeme NewsCoastal AreaHariharaKannada News WebsiteKollurLatest News KannadaLocal NewsMalnad NewsMariyammanahalliNational HighwayShimogaShivamoggaShivamogga NewsState Highway 25TelanganaUdupiVijayanagaraಚತುಷ್ಟಥ ಹೆದ್ದಾರಿಚಿತ್ರದುರ್ಗಬಯಲುಸೀಮೆಬಿ.ವೈ. ರಾಘವೇಂದ್ರಮಂತ್ರಾಲಯಮರಿಯಮ್ಮನಹಳ್ಳಿಮಲೆನಾಡು ಸುದ್ದಿರಾಷ್ಟ್ರೀಯ ಹೆದ್ದಾರಿವಿಜಯನಗರಶಿವಮೊಗ್ಗಹಗರಿಬೊಮ್ಮನಹಳ್ಳಿಹರಿಹರಹೊನ್ನಾಳಿ
Share200Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.5ರಂದು ಮಾತೃಶಕ್ತಿ, ರಾಷ್ಟ್ರಭಕ್ತಿ ವಿಷಯಾಧಾರಿತ ಗೊರುಚ ಉಪನ್ಯಾಸ

Next Post

ಇವರು ಮನುಷ್ಯರಾ? ರಾಕ್ಷಸರಾ? 3 ವರ್ಷದ ಕೂಸಿನ ಮೇಲೆ ಸಾಮೂಹಿಕ ಅತ್ಯಾಚಾರ

kalpa News

kalpa News

Next Post
4 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲರ ಕಾರು ಚಾಲಕನಿಂದ ಅತ್ಯಾಚಾರ: ಶಾಲೆ ಮಾನ್ಯತೆ ರದ್ಧತಿಗೆ ಆದೇಶ

ಇವರು ಮನುಷ್ಯರಾ? ರಾಕ್ಷಸರಾ? 3 ವರ್ಷದ ಕೂಸಿನ ಮೇಲೆ ಸಾಮೂಹಿಕ ಅತ್ಯಾಚಾರ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL