No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದಲಿತರಿಗೆ ಮೀಸಲಿಟ್ಟ 312 ಕೋಟಿ ರೂ. ಹಿಂಪಡೆದು ಸಿದ್ದರಾಮಯ್ಯರಿಂದ ದ್ರೋಹ | ಈಶ್ವರಪ್ಪ ಗಂಭೀರ ಆರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 29, 2024
in ಶಿವಮೊಗ್ಗ
0
ದಲಿತರಿಗೆ ಮೀಸಲಿಟ್ಟ 312 ಕೋಟಿ ರೂ. ಹಿಂಪಡೆದು ಸಿದ್ದರಾಮಯ್ಯರಿಂದ ದ್ರೋಹ | ಈಶ್ವರಪ್ಪ ಗಂಭೀರ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದುಳಿದ ವರ್ಗಗಳ ಕಲ್ಯಾಣ ಕಾಮಗಾರಿಗಳಿಗಾಗಿ ಮೀಸಲಿಟ್ಟ 312 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah ವಾಪಾಸ್ಸು ತೆಗೆದುಕೊಂಡು ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಇಂದು ಗಂಭೀರ ಆರೋಪ ಮಾಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತ ಇದೆ. ಈ ಹಿಂದೆ ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಸರ್ಕಾರ ವಾಪಾಸ್ಸು ತೆಗೆದುಕೊಂಡಿತ್ತು. ಇದೀಗ ಮತ್ತೆ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗಾಗಿ ವಿವಿಧ ಸಂಘ ಸಂಸ್ಥೆಗಳು ನಿರ್ವಹಿಸಿದ್ದ ಕಾಮಗಾರಿಗಳಿಗೆ ಹಣವನ್ನು ಬಿಡುಗಡೆ ಮಾಡದೇ ಮತ್ತು ಅದಕ್ಕಾಗಿ ಮೀಸಲಿಟ್ಟಿದ್ದ ಸುಮಾರು ೩೧೨ ಕೋಟಿ ರೂ.ಗಳನ್ನು ಹಿಂತೆಗೆದುಕೊಂಡಿದೆ. ಇದು ಘೋರ ಅನ್ಯಾಯವಾಗಿದ್ದು, ತಕ್ಷಣವೇ ಈ ಹಣವನ್ನು ವಾಪಾಸ್ಸು ನೀಡಬೇಕು ಎಂದರು.
ಒಂದು ಕಡೆ ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪನವರು ಹಣವನ್ನು ವಾಪಾಸ್ಸು ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ಮುಖ್ಯಮಂತ್ರಿಗಳು ಈಗಾಗಲೇ ಆದೇಶ ಮಾಡಿದ್ದಾರೆ. ಸಚಿವ ಮಹಾದೇವಪ್ಪನವರ ಹೇಳಿಕೆ ರಾಜಕೀಯ ಹೇಳಿಕೆಯಾಗಿದೆ. ಇಂತಹ ರಾಜಕೀಯ ಹೇಳಿಕೆಯನ್ನು ನೀಡಬಾರದು. ಮತ್ತು ತಕ್ಷಣವೇ ಹಣ ವಾಪಾಸ್ಸಾಗಬೇಕು, ಗ್ಯಾರಂಟಿಗಳಿಗೆ ಬಳಸಿದ್ದಾರೋ, ಬಿಟ್ಟಿದ್ದಾರೋ ಅದು ಬೇರೆ ಪ್ರಶ್ನೆ ಆದರೆ ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಮಾಡುತ್ತೇವೆ ಎಂದು ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇಂತಹ ದ್ರೋಹ ಮಾಡಬಾರದಾಗಿತ್ತು ಎಂದರು.

ಆಶ್ರಯ ಮನೆಯ ಹೋರಾಟ ಮುಂದುವರೆದಿದೆ. ಈ ಹಿಂದೆ ವಸತಿ ಸಚಿವ ಜಮೀರ್ ಅಹಮ್ಮದ್ ಅವರು ನಮ್ಮನ್ನು ಬರ ಹೇಳಿದ್ದರು. ಅವರೇ ಸಮಯ ನೀಡಿದ್ದರು, ಶಿವಮೊಗ್ಗದ ಆಶ್ರಯ ಬಡಾವಣೆಯ ವಿಷಯಕ್ಕೆ ಸಂಬಂಧಿಸಿದಂತೆ ಬಡವರಿಗೆ ಮನೆಕೊಡಲು ಈ ಹಿಂದೆಯೇ ಅವರಿಗೆ ಆಗ್ರಹಿಸಿದ್ದೇವು. ಅಲ್ಲಿಗೆ ಹೋದರೆ ಅವರು ವಿದೇಶಿ ಯಾತ್ರೆಗೆ ಹೋಗಿದ್ದರು. ನಮ್ಮನ್ನು ಬರ ಹೇಳಿ ಹೀಗೆ ಹೋಗಿದ್ದು ನಮಗೆ ಬೇಸರ ತರಸಿದೆ. ಈಗಲಾದರೂ ಅವರು ಶಿವಮೊಗ್ಗಕ್ಕೆ ಬಂದು ಪರಿಸ್ಥಿತಿಯನ್ನು ಅವಲೋಕಿಸಿ ಆಶ್ರಯ ಮನೆಗಳನ್ನು ನೀಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟಸ್ವರೂಪವೇ ಬೇರೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿದ್ದೆವು. ಅವರು ನಮ್ಮನ್ನು ಪ್ರೀತಿಯಿಂದ ಬರಮಾಡಿಕೊಂಡು ಕಾರ್ಮಿಕರ ಕಷ್ಟಗಳನ್ನು ಆಲಿಸಿದ್ದಾರೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಯೇ ಸುಮಾರು 10,693 ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿರಬಹುದು. ಜೊತೆಗೆ ಕಟ್ಟಡ ಕಾರ್ಮಿಕರ ಇತರೆ ಸಮಸ್ಯೆಗಳನ್ನು ಕೂಡ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ. ಅದಕ್ಕೆ ಅವರು ಒಪ್ಪಿದ್ದಾರೆ ಕೂಡ ಅವರಿಗೆ ಅಭಿನಂದನೆಗಳು ಎಂದರು.

Also read: ದೆಹಲಿ | ಕೋಚಿಂಗ್ ಸೆಂಟರ್’ನಲ್ಲಿ ಯುಪಿಎಸ್’ಪಿ ಆಕಾಂಕ್ಷಿಗಳ ಸಾವು | ಐವರ ಬಂಧನ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿಗಳೇ ನಿಂತು ಹೋಗಿವೆ, ರೈತರ ಬೆಳೆ ನಾಶವಾಗಿವೆ, ಪ್ರಕೃತಿ ವಿಕೋಪಗಳಗಿವೆ, ಪರಿಹಾರದ ಭರವಸೆಗಳು ಇಲ್ಲ, ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲ, ಹೊಸ ಕಾಮಗಾರಿಗಳು ಮೊದಲೇ ಇಲ್ಲ, ಇದರ ಜೊತೆಗೆ ರಾಶಿರಾಶಿ ಹಗರಣಗಳು ಸರ್ಕಾರವನ್ನು ಸುತ್ತಿಕೊಂಡಿವೆ, ಸರ್ಕಾರ ಜೀವಂತವಾಗಿಲ್ಲ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ, ಮೂಡ ಹಗರಣ, ಅಪೇಕ್ಸ್ ಬ್ಯಾಂಕ್ ಹಗರಣ, ಭೋವಿ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತರ ನಿಗಮದ ಹಗರಣ ಹೀಗೆ ಹಗರಣಗಳು ಸಾಲು ಸಾಲಾಗಿವೆ. ಮುಖ್ಯಮಂತ್ರಿಗಳು ಉತ್ತರ ಕೊಡಲು ಶಕ್ತರಾಗಿಲ್ಲ, ಬಿಜೆಪಿ-ಜೆಡಿಎಸ್ ಸರ್ಕಾರದಲ್ಲೂ ಹಗರಣಗಳಾಗಿವೆ ಎಂದು ಹೇಳುತ್ತಾರೆ. ಯಾರ ಕಾಲದಲ್ಲಾದರೂ ಹಗರಣಗಳಾಗಿರಲಿ, ಬಿಜೆಪಿ ಯವರೇ ತಪ್ಪೇ ಮಾಡಿರಲಿ ಈ ಎಲ್ಲಾ ಹಗರಣಗಳನ್ನು ಸಿಬಿಐಗೆ ವಹಿಸಲಿ ಯಾರೂ ಕಳ್ಳರಿದ್ದಾರೋ ಅವರು ಜೈಲಿಗೆ ಹೋಗಲೇಬೇಕು. ಅದಕ್ಕೆ ಅಂಜಿಕೆಯಾಕೆ ಯಾವುದನ್ನೂ ಮುಚ್ಚಿಡಬೇಡಿ, ಭಂಡತನ ಮಾಡಬೇಡಿ, ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಪುನರುಚ್ಛರಿಸಿದರು.

ಮುಸ್ಲಿಂರನ್ನು ಓಲೈಸುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ರಾಮನಗರ ಊರಿನ ಹೆಸರನ್ನು ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಭಾಗಕ್ಕೆ ಸೇರಿಸಲು ಹೊರಟಿದೆ. ರಾಮ ಎಂಬ ಹೆಸರು ಕಂಡರೆ ಇವರಿಗೆ ಅದೇಕೋ ಆಗಿ ಬರುತ್ತಿಲ್ಲ, ಹಿಂದುತ್ವದ ವಿಚಾರ ಬಂದರೆ ಮೈಮೇಲೆ ಬಂದವರಂತೆ ಮಾಡುತ್ತಾರೆ. ಇದು ಸಲ್ಲದು, ರಾಮನಗರವನ್ನು ಅದೇ ಹೆಸರಿನಲ್ಲಿ ಉಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗಶಾಸ್ತ್ರಿ, ಈ.ವಿಶ್ವಾಸ್, ಎಂ.ಶಂಕರ್, ಶಂಕರ್‌ಗನ್ನಿ, ಶ್ರೀಕಾಂತ್, ಜಾಧವ್, ಮೋಹನ್, ರಾಚಯ್ಯ, ಅ.ಮಾ.ಪ್ರಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: CM SiddaramaiahK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ದೆಹಲಿ | ಕೋಚಿಂಗ್ ಸೆಂಟರ್’ನಲ್ಲಿ ಯುಪಿಎಸ್’ಪಿ ಆಕಾಂಕ್ಷಿಗಳ ಸಾವು | ಐವರ ಬಂಧನ

Next Post

ಶಿವಮೊಗ್ಗ | ನಾಲಿಗೆಗೆ ತ್ರಿಶೂಲ, ಕೆನ್ನೆಗೆ 6 ಕೆಜಿ ಕಬ್ಬಿಣದ ಸಲಾಕೆ | ಗುಡ್ಡೇಕಲ್ ಜಾತ್ರಾ ವೈಭವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ನಾಲಿಗೆಗೆ ತ್ರಿಶೂಲ, ಕೆನ್ನೆಗೆ 6 ಕೆಜಿ ಕಬ್ಬಿಣದ ಸಲಾಕೆ | ಗುಡ್ಡೇಕಲ್ ಜಾತ್ರಾ ವೈಭವ

ಶಿವಮೊಗ್ಗ | ನಾಲಿಗೆಗೆ ತ್ರಿಶೂಲ, ಕೆನ್ನೆಗೆ 6 ಕೆಜಿ ಕಬ್ಬಿಣದ ಸಲಾಕೆ | ಗುಡ್ಡೇಕಲ್ ಜಾತ್ರಾ ವೈಭವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL