No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.18-19ರಂದು ಕಲ್ಪತರು ನಾಡಿನಲ್ಲಿ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2025
in ಶಿವಮೊಗ್ಗ
0
ಜ.18-19ರಂದು ಕಲ್ಪತರು ನಾಡಿನಲ್ಲಿ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡ್ಬಲ್ಯೂಜೆ)ದ #KWJ 39ನೇ ರಾಜ್ಯ  ಸಮ್ಮೇಳನವನ್ನು ಕಲ್ಪತರುನಾಡು, ಸಿದ್ದಶರಣ ದಾಸೋಹದ ನೆಲವಾಗಿರುವ ತುಮಕೂರಿನಲ್ಲಿ ಜನವರಿ 18 ಮತ್ತು 19ರಂದು ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಶಿವಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯನಿರತ ಪತ್ರಕರ್ತರ ಯೋಗಕ್ಷೇಮ ಮತ್ತು ವೃತ್ತಿಪರ ಅಭ್ಯುದ್ಯಯದ ಆಶಯಗಳೊಂದಿಗೆ ಹೆಜ್ಜೆ ಹಾಕುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮೈಸೂರು ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರು ಮುನ್ನುಡಿಯೊಂದಿಗೆ ಆರಂಭವಾಗಿ ಖ್ಯಾತ ಪತ್ತಕರ್ತರು, ಕನ್ನಡ ಸಾರಸ್ವತ ಲೋಕದ ಜ್ಞಾನ ಶ್ರೇಷ್ಠರೂ ಆದ ಡಿ ವಿ ಗುಂಡಪ್ಪ ( ಡಿವಿಜಿ) ಅವರ ಸಾರಥ್ಯದಲ್ಲಿ ಪುನರ್ ನಾಮಕರಣಗೊಂಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ರಾಜ್ಯದ ಎಂಟು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಉಳ್ಳ ದೇಶದ ಏಕೈಕ ಸಂಘಟನೆಯಾಗಿದೆ ಎಂದರು.
ಸಮ್ಮೇಳನದ ಆಶಯ:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತಿ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವವನ್ನೊಳಗೊಂಡ ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಿಲ್ಪಟ್ಟ ದೇಶದ ಏಕೈಕ ಪತ್ರಕರ್ತರ ಸಂಘಟನೆಯಾಗಿದೆ.

ಸುದ್ದಿ ಮನೆಗಳಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರು/ಪತ್ರಕರ್ತರು, ಹೋಬಳಿ ಮಟ್ಟದಿಂದ ರಾಜ್ಯಮಟ್ಟದ ವರೆಗೂ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ವೃತ್ತಿ ಭದ್ರತೆ, ಮೂಲಭೂತ ಸೌಕರ್ಯಗಳ ಸಂರಕ್ಷಣೆಯ ನಿಟ್ಟಿನಲ್ಲಿ ಸಂಘವು ಸಂಘಟನಾತ್ಮಕ ಚಟುವಟಿಕೆಗಳನ್ನು ಸಕ್ರೀಯವಾಗಿ ನಡೆಸಿಕೊಂಡು ಬರುತ್ತಿದೆ.

ಪತ್ರಿಕೋದ್ಯಮದಲ್ಲಿ ಆಗುತ್ತಿರುವ ವೃತ್ತಿಪರತೆ, ಜಾಗತಿಕ-ಆಧುನಿಕ ತಾಂತ್ರಿಕ ಬದಲಾವಣೆಗಳಿಗೆ ತಕ್ಕಂತೆ ಪತ್ರಕರ್ತರು ಒಗ್ಗಿಕೊಳ್ಳುವುದು ದೊಡ್ಡ ಸವಾಲೇ ಸರಿ, ಇಂತಹ ಸಂದರ್ಭದಲ್ಲಿ ಪತ್ರಕರ್ತರ ಬೌದ್ಧಿಕ ವಿಕಸನ ಮತ್ತು ಬೌದ್ಧಿಕ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವುದು, ತರಭೇತಿ ನೀಡಲಾಗುತ್ತಿದೆ.

ಪತ್ರಕರ್ತರು ಎದುರಿಸುತ್ತಿರುವ ವೃತ್ತಿ ಪರ ಸಮಸ್ಯೆಗಳು , ಆರೋಗ್ಯ, ಪ್ರೋತ್ಸಾಹಕ ಯೋಜನೆಗಳ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನಗಳು ಸಮರ್ಥ ವೇದಿಕೆಯಾಗುತ್ತವೆ.

ಈ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳನ್ನು ವಾರ್ಷಿಕ ಸಮ್ಮೇಳನಗಳಲ್ಲಿ ಮಂಥನ ಮಾಡುವ ಅವಕಾಶವನ್ನು ಸೃಷ್ಟಿಕೊಳ್ಳಲಾಗಿದೆ. ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ ಕುರಿತು ಚಿಂತನ-ಮಂಥನ ಮಾಡುವುದು , ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

ಕೋವಿಡ್ ಕಷ್ಟದ ಕಾಲದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ನೆರವಿಗೆ ಧಾವಿಸುವ ಮೂಲಕ ಅಭದ್ರತೆಯ ಆತಂಕದಲ್ಲಿದ್ದ ಪತ್ರಕರ್ತರಿಗೆ ಆಸರೆಯಾಗಿದ್ದು ಸಂಘಟನಾ ಶಕ್ತಿಯ ಸಾರ್ಥಕತೆ ಎನ್ನಬಹುದು.
ಉದ್ಘಾಟನೆ:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಸಮ್ಮೇಳನವು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿದೆ.

ಜ. 18 ರಂದು ಬೆಳಗ್ಗೆ 8.30ಕ್ಕೆ ತುಮಕೂರಿನ ಟೌನ್ ಹಾಲ್ ಬಿಜಿಎಸ್ ವೃತ್ತದಿಂದ ಪತ್ರಕರ್ತರ ಸಾಂಸ್ಕೃತಿಕ ಮೆರಗಿನ ಮೆರವಣಿಗೆಯನ್ನು ಗೃಹ ಸಚಿವರೂ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಜಿ ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭಗಳಲ್ಲಿ ಹಿರೇ ಮಠಾಧೀಕ್ಷರಾದ ಡಾ. ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಡಾ. ಶ್ರೀವಿರೇಶಾನಂದ ಸರಸ್ವತಿ ಸ್ವಾಮೀಜಿ, ಸ್ವಾಮಿ ಜಪಾನಂದಜೀ ಸಾನಿಧ್ಯ ವಹಿಸಲಿದ್ದಾರೆ.

ಇದೇ ದಿನ ಬೆಳಗ್ಗೆ 11 ಗಂಟೆಗೆ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಿರ‍್ಮಿಸಲಾಗಿರುವ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ತುಮಕೂರು ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು,ಸಂಸದರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮ್ಮೇಳನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಟಿ ವಿ ಶಿವಾನಂದ ತಗಡೂರು ಅವರು ವಹಿಸಲಿದ್ದು. ಕೇಂದ್ರ ಸಚಿವ ವಿ. ಸೋಮಣ್ಣ ಸಚಿವ ಕೆ.ಎನ್. ರಾಜಣ್ಣ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳು ಆತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂವಾದ ಗೋಷ್ಟಿಗಳು:

ಎರಡು ದಿನಗಳ ಸಮ್ಮೇಳನದಲ್ಲಿ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಮಹತ್ವದ ಸಂವಾದ ಮತ್ತು ಗೋಷ್ಟಿಗಳು ನಡೆಯಲಿವೆ.

ಜ.18 ರಂದು ಮಧ್ಯಾಹ್ನ 2 ಗಂಟೆಗೆ ಸಂವಿಧಾನ ಮತ್ತು ಮಾಧ್ಯಮ ವಿಷಯವಾಗಿ ನಡೆಯುವ ಗೋಷ್ಟಿಯನ್ನು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ಅವರು ಉದ್ಘಾಟಿಸಲಿದ್ದು, ಖ್ಯಾತ ಪತ್ರಕರ್ತ, ಮಾಧ್ಯಮ ತಜ್ಞ ಜಿ.ಎನ್ ಮೋಹನ್ ಅವರು ವಿಷಯ ಮಂಡಿಸಲಿದ್ದು, ಮುಖ್ಯಮಂತ್ರಿಗಳು ರಾಜಕೀಯ ಸಲಹೆಗಾರರಾದ ಬಿ.ಆರ್ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ, ಶಾಸಕರೂ ಆದ ಎ ಎಸ್ ಪೊನ್ನಣ್ಣ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 4.30ಕ್ಕೆ ಸುದ್ದಿಮನೆ ಮತ್ತು ಪೋಟೋಗ್ರಾಫಿ ಗೋಷ್ಟಿಯಲ್ಲಿ ಹಿರಿಯ ಪತ್ರಕರ್ತ ಕೆ. ಶಿವಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದು, ಹಿರಿಯ ಪತ್ರಿಕಾಛಾಯಾಗ್ರಾಹಕ ಕೆ.ಗೋಪಿನಾಥ್ ಅನುಶಾಂತರಾಜ್, ಶರಣು ಬಸಪ್ಪ ಪಾಲ್ಗೊಳ್ಳಲಿದ್ದಾರೆ.

ಜ. 19 ರಂದು ಬೆಳಗ್ಗೆ 10.30ಕ್ಕೆ ಮಾಧ್ಯಮ ಮತ್ತು ಓದುಗರು /ನೋಡುಗರು/ಕೇಳುಗರು ಗೋಷ್ಟಿಯನ್ನು ವಿಜಯವಾಣಿ ಸಂಪಾದಕರಾದ ಕೆ.ಎನ್ ಚನ್ನೆಗೌಡ ಉದ್ಘಾಟಿಸಿದರೆ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಐನಕೈ ಅವರು ಅಧ್ಯಕ್ಷತಗೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಅನಂತಚಿನಿವಾರ, ಮೈಸೂರುವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಎಂ ಎಸ್ ಸ್ವಪ್ನ, ಅವರುಗಳು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12ಕ್ಕೆ ಸಾಮಾಜಿಕ ಜಾಲತಾಣ ಮತ್ತು ಪತ್ರಕರ್ತರ ಸವಾಲುಗಳು ಗೋಷ್ಟಿಯನ್ನು ಸುವರ್ಣ ನ್ಯೂಸ್ ಸಂಪಾದಕರ ಅಜಿತ್ ಹನುಮಕ್ಕನವರ್ ಉದ್ಘಾಟಿಸಲಿದ್ದು, ವಿಜಯಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಗೌರೀಶ್ ಅಕ್ಕಿ , ಕಸ್ತೂರಿ ಸಂಪಾದಕರಾದ ಶಾಂತಲಾ ಧರ್ಮರಾಜ್, ದಾವಣಗೆರೆವಿವಿ ಡಾ. ಶಿವಕುಮಾರ ಕಣಸೋಗಿ ಪಾಲ್ಗೋಳ್ಳಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಸ್ಥಳೀಯ ಪತ್ರಿಕೆಗಳು /ಜಾಹೀರಾತು/ವಿತರಕರು ಗೋಷ್ಟಿಯನ್ನು ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ಉದ್ಘಾಟಿಸಲಿದ್ದು ಹಿರಿಯ ಪತ್ರಿಕಾ ಸಂಪಾದಕರಾದ ಎಸ್ ನಾಗಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಎರಡು ದಿನಗಳ ಗೋಷ್ಟಿಗಳಲ್ಲಿ ಸಂವಾದಕರಾಗಿ ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಶಿವಕುಮಾರ್ ಬೆಳ್ಳಿತಟ್ಟೆ, ಉಗಮ ಶ್ರೀನಿವಾಸ್, ಕುಚ್ಚಂಗಿ ಪ್ರಸನ್ನ, ಮರಿಯಪ್ಪ, ಉಮೇಶ್ ಭಟ್ , ಹರೀಶ್ ರೈ, ಗುರುನಾಥ್, ಬಿ.ಎಂ ಹನೀಫ್, ಟಿ ಎಂ ಸತೀಶ್ ಮೊದಲಾದವರು ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳ ಸಭೆ ಮತ್ತು ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಶಾಖೆಯು ಸಮ್ಮೇಳನದ ಆತಿಥ್ಯ ವಹಿಸಿದ್ದು ಜಿಲ್ಲಾ ಘಟಕದ ಅಧ್ಯಕ್ಷರಾದ ಚಿ ನಿ ಪುರುಷೋತ್ತಮ , ಪ್ರಧಾನಕಾರ್ಯದರ್ಶಿ ರಘುರಾಮ್ ತಂಡ ಅವಿರತವಾಗಿ ಶ್ರಮಿಸುತ್ತಿದೆ.

ಸಮ್ಮೇಳನವು ಸಾಂಸ್ಕೃತಿಕ ಸಮಾರಂಭಗಳನ್ನು ಒಳಗೊಂಡಿದ್ದು ಖ್ಯಾತ ಗಾಯಕಿ ಶಮಿತ ಮಲ್ನಾಡ್ ಅವರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKWJLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕೃಷಿ ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಆಚರಣೆ ಹೇಗಿತ್ತು ನೋಡಿ

Next Post

ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದ ಯುವಕ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಡ್ಯ | ಕಾವೇರಿ ನದಿಯಲ್ಲಿ ಮುಳುಗಿ ಬಿಇ ವಿದ್ಯಾರ್ಥಿ ಸಾವು

ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದ ಯುವಕ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL