ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಘಟನೆಯನ್ನು ಸಿಬಿಐಗೆ ಒಪ್ಪಿಸಬೇಕು, ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಮತ್ತು ಮೃತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಷ್ಟ್ರಭಕ್ತ ಬಳಗದ ಕೆ.ಎಸ್. ಈಶ್ವರಪ್ಪ #K S Eshwarappa ಒತ್ತಾಯಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಧಿಕಾರಿ ಚಂದ್ರಶೇಖರ್ ಅವರು ಒಬ್ಬ ಪ್ರಾಮಾಣಿಕರು ಆಗಿದ್ದರು. ರಾಜ್ಯ ಸರ್ಕಾರದ ಭ್ರಷ್ಟಚಾರವನ್ನು ಬಯಲಿಗೆಳೆಯಲು ತಮ್ಮ ಪ್ರಾಣವನ್ನೇ ನೀಡಿದ್ದಾರೆ. ಒಬ್ಬ ಅಧಿಕಾರಿ ಹೀಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಅತ್ಯಂತ ದುದೈರ್ವ ಸಂಗತಿಯಾಗಿದೆ ಎಂದರು.
ಇಂದು ಮೃತ ಚಂದ್ರಶೇಖರ್ ಅವರ ಮನೆಗೆ ನಾನು ಹೋಗಿದ್ದೆ. ಕುಟುಂಬದವರ ದುಃಖ ಕಂಡು ಮನನೊಂದಿದ್ದೇನೆ. ಅದು ಅತ್ಯಂತ ಕಡು ಬಡತನದ ಕುಟುಂಬವಾಗಿದೆ. ಚಂದ್ರಶೇಖರ್ ಸಾಲ ಕೂಡ ಮಾಡಿದ್ದರು. ಅವರ ಕಷ್ಟ ನೋಡದೇ 3 ಲಕ್ಷ ರೂ. ನೀಡಿದ್ದೇನೆ. ಸರ್ಕಾರ ಕೂಡ 50 ಲಕ್ಷ ಮಾನವೀಯತೆಯ ದೃಷ್ಠಿಯಿಂದ ಕೊಡಬೇಕು. ಒಂದು ಪಕ್ಷ ಸರ್ಕಾರ ಕೊಡದೇ ಹೋದರೆ ನಮ್ಮ ರಾಷ್ಟ್ರ ಭಕ್ತಬಳಗದ ವತಿಯಿಂದ ಹಣ ಸಂಗ್ರಹಿಸಿ ನೀಡುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post