No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.25ರಂದು ಕೃಷಿ ವಿವಿ 6ನೇ ಘಟಿಕೋತ್ಸವ: ರಾಜ್ಯಪಾಲ ಗೆಹ್ಲೋಟ್ ಅವರಿಂದ ಪದವಿ ಪ್ರದಾನ

kalpa News by kalpa News
November 23, 2021
in ಶಿವಮೊಗ್ಗ
0
ನ.25ರಂದು ಕೃಷಿ ವಿವಿ 6ನೇ ಘಟಿಕೋತ್ಸವ: ರಾಜ್ಯಪಾಲ ಗೆಹ್ಲೋಟ್ ಅವರಿಂದ ಪದವಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ನ.25ರಂದು ಬೆಳಿಗ್ಗೆ 11ಗಂಟೆಗೆ ನವಿಲೆಯ ಮುಖ್ಯ ಆವರಣದಲ್ಲಿ ಆರನೆಯ ಘಟಿಕೋತ್ಸವವನ್ನು ಆಯೋಜಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ನಾಯ್ಕ್ ಅವರು ಹೇಳಿದರು.

ಅವರು ಇಂದು ತಮ್ಮ ವಿಶ್ವವಿದ್ಯಾಲಯದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಘಟಿಕೋತ್ಸವದಲ್ಲಿ ರಾಜ್ಯಪಾಲರು ಹಾಗೂ ನಮ್ಮ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್‌ರವರು ಉಪಸ್ಥಿತರಿದ್ದು, ಪದವಿ ಪ್ರದಾನ ಮಾಡುವರು. ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳು ಹಾಗೂ ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್‌ರವರು ಉಪಸ್ಥಿತರಿರುವರು. ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪಮಹಾನಿರ್ದೇಶಕರು (ಕೃಷಿ ಶಿಕ್ಷಣ) ಡಾ. ಆರ್. ಸಿ. ಅಗರ್‌ವಾಲ್‌ ಮುಖ್ಯ ಅತಿಥಿಗಳಾಗಿ ಆಗಮಿಸಿ, ಘಟಿಕೋತ್ಸವದ ಪ್ರಧಾನ ಭಾಷಣ ಮಾಡಲಿರುವರು ಎಂದರು.

ಇದೇ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ವತಿಯಿಂದ ಪ್ರಪ್ರಥಮ ಬಾರಿಗೆ ಚೊಚ್ಚಲ ಗೌರವ ಡಾಕ್ಟರೇಟ್ ಪದವಿಯನ್ನು ಹೈದ್ರಾಬಾದ್‌ನ ಭಾರತ್ ಬಯೋಟೆಕ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ.ಕೃಷ್ಣಮೂರ್ತಿ ಎಲ್ಲಾ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಪದವಿ ಪುರಸ್ಕೃತ ಕೃಷ್ಣಮೂರ್ತಿ ಎಲ್ಲಾ ಅವರು ತಮ್ಮ ಸಂಸ್ಥೆಯ ಮೂಲಕ ರೋಟವೈರಸ್, ಟೈಫಾಯಿಡ್ ಕಾಂಜುಗೇಟ್, ಚಿಕೂನ್‌ಗುನ್ಯಾ ಮತ್ತು ಜಿಕಾ ಮುಂತಾದ ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಕೈಗೆಟುಕುವ ದರದಲ್ಲಿ ಲಸಿಕೆಗಳನ್ನು ಅಭಿವೃದ್ಧಿಪಡಿಸಿ, ಪ್ರಸಿದ್ಧರಾಗಿದ್ದಾರೆ. ಅಲ್ಲದೇ ಕರೋನ ವೈರಸ್ ನಿಯಂತ್ರಿಸಲು ಕೊವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಪಡಿಸಿ ಮಾನವ ಕುಲಕ್ಕೆ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಈ ಘಟಿಕೋತ್ಸವ ಸಮಾರಂಭಕ್ಕೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಶೈಕ್ಷಣಿಕ ಪರಿಷತ್ತಿನ ಸದಸ್ಯರುಗಳು, ವಿಶ್ರಾಂತ ಕುಲಪತಿಗಳು, ಡೀನ್‌ಗಳು ಮತ್ತು ನಿರ್ದೇಶಕರು, ವಿಶ್ರಾಂತ ಅಧಿಕಾರಿಗಳು ಹಾಗೂ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಆಹ್ವಾನಿತ ಗಣ್ಯರು, ಗೌರವಾನ್ವಿತ ಪದಕಗಳ ದಾನಿಗಳು, ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಘಟಿಕೋತ್ಸವದಲ್ಲಿ ಸ್ನಾತಕ ಪದವಿಯಲ್ಲಿ 238 ವಿದ್ಯಾರ್ಥಿಗಳಿಗೆ (ಬಿ.ಎಸ್ಸಿ.ಕೃಷಿ, ತೋಟಗಾರಿಕೆ ಮತ್ತು ಅರಣ್ಯ), ಕೃಷಿ, ತೋಟಗಾರಿಕೆ ಮತ್ತು ಅರಣ್ಯ ವಿಷಯಗಳಲ್ಲಿ 105 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ ಹಾಗೂ 15 ಪಿಹೆಚ್.ಡಿ.ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಇದರಲ್ಲಿ 9 ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕಗಳನ್ನು, 14 ಎಂ.ಎಸ್ಸಿ. ವಿದ್ಯಾರ್ಥಿಗಳಿಗೆ 15 ಚಿನ್ನದ ಪದಕಗಳನ್ನು ಮತ್ತು 5 ಪಿಹೆಚ್.ಡಿ. ವಿದ್ಯಾರ್ಥಿಗಳಿಗೆ 5 ಚಿನ್ನದ ಪದಕಗಳನ್ನು, ಒಟ್ಟಾರೆ 35 ಚಿನ್ನದ ಪದಕಗಳನ್ನು 28 ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರದಾನ ಮಾಡಲಾಗುತ್ತಿದೆ ಎಂದರು.

2020-21ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಐ.ಸಿ.ಎಆರ್. ಜೆಆರ್.ಎಫ್. ಪರೀಕ್ಷೆಯಲ್ಲಿ ನಮ್ಮ ವಿಶ್ವವಿದ್ಯಾಲಯದ ಒಟ್ಟು 14 ವಿದ್ಯಾರ್ಥಿಗಳು ರ್‍ಯಾಂಕ್ ಪಡೆದಿದ್ದಾರೆ ಹಾಗೂ ಅಖಿಲ ಭಾರತ ಐ.ಸಿ.ಎ.ಆರ್. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 2 ವಿದ್ಯಾರ್ಥಿಗಳು ಎಸ್.ಆರ್.ಎಫ್.ಗಳಾಗಿ ಆಯ್ಕೆಯಾಗಿರುತ್ತಾರೆ ಹಾಗೂ 15 ವಿದ್ಯಾರ್ಥಿಗಳು ಎನ್.ಟಿ.ಎಸ್. (ಸ್ನಾತಕೋತ್ತರ) ಪ್ರವೇಶ ಪಡೆದುಕೊಂಡಿರುತ್ತಾರೆ ಎಂದು ತಿಳಿಸಿದರು.

2020-21ರ ಸಾಲಿನಲ್ಲಿ ಸ್ನಾತಕ ಪದವಿ ಕಾರ್ಯಕ್ರಮಗಳಿಗೆ ಒಟ್ಟು 399 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ. ಜೊತೆಗೆ ಶಿವಮೊಗ್ಗ, ಮೂಡಿಗೆರೆ ಮತ್ತು ಪೊನ್ನಂಪೇಟೆ ಕಾಲೇಜುಗಳಲ್ಲಿ 122 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗೆ ಹಾಗೂ ಕತ್ತಲಗೆರೆ ಮತ್ತು ಬ್ರಹ್ಮಾವರದಲ್ಲಿ 45 ವಿದ್ಯಾರ್ಥಿಗಳು ಡಿಪ್ಲೊಮಾ ಕೃಷಿಗೆ ಪ್ರವೇಶ ಪಡೆದಿರುತ್ತಾರೆ. ಅಲ್ಲದೆ ಇರುವಕ್ಕಿಯ ವಿಶ್ವವಿದ್ಯಾಲಯದ ಆವರಣದಲ್ಲಿ 57 ವಿದ್ಯಾರ್ಥಿಗಳಿಗೆ ಕೃಷಿ ಪದವಿ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ಕೃಷಿ ವಿಸ್ತರಣಾ ವಿಭಾಗದ ವಿದ್ಯಾರ್ಥಿ ಎಂ. ಸಿ. ವಿವೇಕ್ ಅವರಿಗೆ ಹೈದರಾಬಾದ್‌ನ ಮ್ಯಾನೇಜ್ ವತಿಯಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಎಂ.ಎಸ್ಸಿ. ಪ್ರಬಂಧ ಪ್ರಶಸ್ತಿ ನೀಡಿ ಗೌರವಿಸಿದೆ. ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಿಂದ ಪದವಿ ಪಡೆದಿರುವ ಕು. ಪಲ್ಲವಿ ಪೂಜಾರ್ ಇವರು ಜರ್ಮನಿಯ ನೇತಾಜಿ ಸುಭಾಸ್-ಐಸಿಎಆರ್ ಇಂಟರ್‌ನಾಷನಲ್ ಫೆಲೋಶಿಪ್‌ಗೆ ಬಾಜನರಾಗಿದ್ದಾರೆ. ಶಶಿಭೂಷಣ್ ಮಿಶ್ರಾ ಮತ್ತು ಝೆಂಕಾರ್ ಎಂ.ಜೆ. ಅವರು ಕ್ರಮವಾಗಿ ಕೋಪನ್ ಹೇಗನ್ ವಿಶ್ವವಿದ್ಯಾಲಯ ಮತ್ತು ಜರ್ಮನಿಯ ಗೊಟ್ಟಿಂಗನ್ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ.ಗೆ ಪ್ರವೇಶ ಪಡೆದಿರುವುದು ಹರ್ಷವೆನಿಸಿದೆ ಎಂದರು.

ನಮ್ಮ ವಿಶ್ವವಿದ್ಯಾಲಯದ ಸಸ್ಯ ತಳಿ ವಿಭಾಗದಿಂದ ನವದೆಹಲಿಯಲ್ಲಿರುವ ಭಾರತ ಸರ್ಕಾರದ ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದ ಶಿವಮೊಗ್ಗದ ವಿಭಾಗೀಯ ಕಛೇರಿಯಿಂದ ಪ್ರಸಕ್ತ ಸಾಲಿನಲ್ಲಿ ಹಲವು ತಳಿಗಳನ್ನು ನೋಂದಣಿಗೆ ಶಿಫಾರಸ್ಸು ಮಾಡಲಾಗಿದ್ದು ಅವುಗಳು ಸಮಿತಿಯಲ್ಲಿ ನೊಂದಾಯಿಸಲ್ಪಟಿರುತ್ತವೆ. ಅವುಗಳಲ್ಲಿ ಭತ್ತದ ತಳಿಗಳಾದ ಕೆಹೆಚ್‌ಪಿ-10(ಕೆಂಪು ಅಕ್ಕಿ), ಕೆಹೆಚ್‌ಪಿ-9, ಕೆಹೆಚ್‌ಪಿ-13, ತುಂಗಾ ತಳಿಗಳನ್ನು ವಿಶೇಷವಾಗಿ ವಲಯ-9ಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದರು.

ವಿಶ್ವವಿದ್ಯಾಲಯದ ವತಿಯಿಂದ ಅಭಿವೃದ್ಧಿಪಡಿಸಲಾದ ಅಲಸಂದೆ ಸಹ್ಯಾದ್ರಿ ಯುಕ್ತಿ ತಳಿ ಹಾಗೂ ಶೇಂಗಾದಲ್ಲಿ, ವಲಯ 4ಕ್ಕೆ ಡಿ.ಹೆಚ್-256 ತಳಿಗಳನ್ನು ರಾಜ್ಯ ತಳಿ ಬಿಡುಗಡೆ ಸಮಿತಿಯು ಸ್ವೀಕರಿಸಿದೆ. ಪ್ರಸಕ್ತ ವರ್ಷದಲ್ಲಿ ವಿಶ್ವವಿದ್ಯಾಲಯದಿಂದ ಭತ್ತದ ತಳಿ ಸಹ್ಯಾದ್ರಿ ಕಾವೇರಿ (ಐ.ಇ.ಟಿ-24451)ಯನ್ನು ಕರ್ನಾಟಕದ ಗುಡ್ಡಗಾಡು ವಲಯಕ್ಕೆ (ವಲಯ-9) ಮುಂಗಾರಿನಲ್ಲಿ ಮಜಲು ಭೂಮಿಯಲ್ಲಿ ಬೆಳೆಯಲು ಹಾಗೂ ನೆಲಗಡಲೆಯಲ್ಲಿ ಅಧಿಕ ಇಳುವರಿ ಕೊಡುವ ತಳಿಯಾದ ಡಿ.ಹೆಚ್-256ಯನ್ನು ಮುಂಗಾರಿನಲ್ಲಿ ಬೆಳೆಯಲು ಹಾಗೂ ರಾಜ್ಯದ ಅಚ್ಚುಕಟ್ಟು ಪ್ರದೇಶದಲ್ಲಿ ಮುಂಗಾರು ಮತ್ತು ಬೇಸಿಗೆ ಬೆಳೆಯಾಗಿ ಮತ್ತು ಗುಡ್ಡಗಾಡು ಪ್ರದೇಶಕ್ಕೆ ಮುಂಗಾರಿನಲ್ಲಿ ಬೆಳೆಯಲು ಸಹ್ಯಾದ್ರಿ ಕೆಂಪುಮುಕ್ತಿ ಎಂಬ ಭತ್ತದ ತಳಿಯನ್ನು ಶಿಫಾರಸ್ಸು ಮಾಡಲಾಗಿದೆ. ಈ ತಳಿಯು ಬೆಂಕಿರೋಗಕ್ಕೆ ನಿರೋಧಕ ಶಕ್ತಿ, ಕಾಂಡಕೊರಕ ಹುಳು ಮತ್ತು ಕೋರಿಡ್ ಬಗ್ ಕೀಟಗಳಿಗೆ ನಿವಾರಣಾ ಶಕ್ತಿಯನ್ನು ಹೊಂದಿದ್ದು, 125-130 ದಿನಗಳ ಅಲ್ಪಾವಧಿ ತಳಿಯಾಗಿದೆ. ಕರಾವಳಿ ವಲಯದ ಮಜಲು ಗದ್ದೆಗಳಲ್ಲಿ ಮಧ್ಯ ಭಾಗಕ್ಕೆ ಮುಂಗಾರು ಬೆಳೆಯಾಗಿ ಬೆಳೆಯಲು ಭತ್ತದ ಕೆಂಪು ಅಕ್ಕಿ ತಳಿ ಸಹ್ಯಾದ್ರಿ ಬ್ರಹ್ಮ (ಬಿಎಂಆರ್-ಎಂಎಸ್-1-2-1)ವನ್ನು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದರು.

ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ವಿಶ್ವವಿದ್ಯಾಲಯಕ್ಕೆ ಸುಮಾರು ರೂ. 843.95 ಲಕ್ಷಗಳ ಅನುದಾನ ದೊರೆತಿದ್ದು, 154 ಯೋಜನೆಗಳು ಅನುಷ್ಠಾನದಲ್ಲಿವೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಕರ್ನಾಟಕ ರಾಜ್ಯ ಕೃಷಿ ಇಲಾಖೆ (ಸಂಶೋಧನೆ ಮತ್ತು ಅಭಿವೃದ್ಧಿ), ಕರ್ನಾಟಕ ರಾಜ್ಯ ಕೃಷಿ ಇಲಾಖೆ (ಯೋಜನಾ ಅನುದಾನ) ಹಾಗೂ ಸಾಂಸ್ಥಿಕ ಅನುದಾನದಡಿ ಹೊಸ ಕಾರ್ಯಕ್ರಮಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ (2021-22) ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿಂದ ಸುಮಾರು ರೂ. 667.60 ಲಕ್ಷಗಳ ಅನುದಾನ ದೊರೆತಿದ್ದು 63 ಯೋಜನೆಗಳು ಅನುಷ್ಠಾನದಲ್ಲಿವೆ ಎಂದರು.

ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಫ್ತಾರ್ ಅನುದಾನದಿಂದ ರೂ.1.25 ಕೋಟಿ ಮೊತ್ತದಿಂದ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕರಿಗೆ ಉದ್ಯಮಶೀಲತೆ ಕೌಶಲ್ಯವನ್ನು ಬೆಳೆಸಲು ಕ್ರಮ ಕೈಗೊಂಡಿದೆ. ರಾಷ್ಟ್ರೀಯ ಬಿದಿರಿನ ಮಿಷನ್ 95ಲಕ್ಷ ದ ಆರ್ಥಿಕ ನೆರವಿನೊಂದಿಗೆ, ಬಿದಿರಿನ ಸಂಪನ್ಮೂಲ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರದ ಹೊಸ ಕೃಷಿ ನೀತಿಯ ಒಂದು ಜಿಲ್ಲೆ ಒಂದು ಉತ್ಪನ್ನದಂತೆ ಶಿವಮೊಗ್ಗಕ್ಕೆ ಅನಾನಸ್, ಮೂಡಿಗೆರೆಗೆ ಸಾಂಬಾರು ಪದಾರ್ಥಗಳು ಮತ್ತು ಹಿರಿಯೂರಿಗೆ ನೆಲಗಡಲೆ ಬೆಳೆಗಳ ಸಂಶೋಧನೆ ಮತ್ತು ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಮೂಲಭೂತ ಸೌಕರ್ಯ ನಿರ್ಮಿಸಿ, ಮೌಲ್ಯಾಧಾರಿತ ಉತ್ಪನ್ನಗಳನ್ನು ತಯಾರಿಸಲು ರೈತರಿಗೆ ಸಹಕಾರಿಯಾಗುವಂತೆ ಈ ಯೋಜನೆಗಳನ್ನು ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ. ವಿಶ್ವವಿದ್ಯಾಲಯದ ಬೀಜ ಘಟಕದಿಂದ ಪ್ರಸಕ್ತ ಸಾಲಿನಲ್ಲಿ ಸುಮಾರು ರೂ.4887 ಕ್ವಿಂಟಾಲ್‌ಗಳಷ್ಟು ಬೀಜೋತ್ಪಾದನೆ ಮಾಡಲಾಗಿದೆ. 2020-21ನೇ ಸಾಲಿನಲ್ಲಿ ಸುಮಾರು 8,68,825 ಗುಣಮಟ್ಟದ ತೋಟಗಾರಿಕೆ ಬೆಳೆಗಳ ಸಸಿಗಳನ್ನು ಉತ್ಪಾದನೆ ಮಾಡಲಾಗಿದೆ ಎಂದರು.

ಇರುವಕ್ಕಿಯ ಕೃಷಿ ವಿವಿ ಆವರಣದಲ್ಲಿ ರೈತರಿಗೆ ಅನುಕೂಲವಾಗುವಂತೆ ಜೀವವೈವಿಧ್ಯತೆ ಸಂರಕ್ಷಣಾ ಘಟಕ, ಜೈವಿಕ ಇಂಧನ ಉದ್ಯಾನ, ಕೃಷಿ ಅರಣ್ಯ ಸಂಶೋಧನಾ ಘಟಕ, ತಳಿಗಳ ಸಂರಕ್ಷಣಾ ವಿಭಾಗ, ತೋಟಗಾರಿಕೆ ಬೆಳೆಗಳ ಸಂರಕ್ಷಣಾ ಘಟಕ, ತಾಯಿಗಿಡ ಘಟಕ, ಆಹಾರ ಬೆಳೆಗಳ ಘಟಕ, ತೋಟಗಾರಿಕೆ ಬೆಳೆಗಳ ಘಟಕ, ಪಶುಸಂಗೋಪನಾ ಘಟಕ, ಮೀನುಗಾರಿಕೆ ವಿಭಾಗ, ಜಲಾನಯನ ಅಭಿವೃದ್ಧಿ ಘಟಕ ಮತ್ತು ಸಮಗ್ರ ಕೃಷಿ ಪದ್ಧತಿಯನ್ನೊಳಗೊಂಡಂತೆ 787.03 ಎಕರೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇವುಗಳ ಜೊತೆಗೆ ಕಟ್ಟಡಗಳನ್ನು ಸರಿ ಸುಮಾರು 4,95,000 ಚದರ ಅಡಿ ಪ್ರದೇಶದಲ್ಲಿ ನಿರ್ಮಿಸಲಾಗಿದ್ದು, ಇವುಗಳಲ್ಲಿ ಆಡಳಿತ ಭವನ, ಬೆಳೆ ಉತ್ಪಾದನೆ ಮತ್ತು ಬೆಳೆ ಸಂರಕ್ಷಣೆ ವಿಭಾಗ, ಬೆಳೆ ಅಭಿವೃದ್ಧಿ ಮತ್ತು ಜೈವಿಕ ತಂತ್ರಜ್ಞಾನ ವಿಭಾಗ, ಸಮಾಜ ಮತ್ತು ಮೂಲ ವಿಜ್ಞಾನಗಳ ವಿಭಾಗ, ತೋಟಗಾರಿಕೆ ಮತ್ತು ಅರಣ್ಯವಿಭಾಗ, ಗ್ರಂಥಾಲಯ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ನಿಲಯಗಳನ್ನು ಒಳಗೊಂಡಿರುತ್ತದೆ. ಇದರೊಂದಿಗೆ ಕೊಳಚೆ ನೀರನ್ನು ಶುದ್ಧೀಕರಿಸಿ ಪುನರ್ಬಳಕೆ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಈಗಾಗಲೇ ಸಂರಕ್ಷಿತ ಕಾಫಿತೋಟ, ನೆರಳುಮನೆ, ಪಾಲಿಹೌಸ್ ಇತ್ಯಾದಿ ಸವಲತ್ತುಗಳನ್ನೂ ಅಭಿವೃದ್ಧಿಪಡಿಸಲಾಗಿದೆ ಎಂದರು.

ವಿಶ್ವವಿದ್ಯಾಲಯದಲ್ಲಿ ಬಾಳೆ ಅಂಗಾಂಶ ಕೃಷಿ, ಜೈವಿಕ ಗೊಬ್ಬರ ಮತ್ತು ಜೈವಿಕ ಪೀಡೆನಾಶಕಗಳ ಉತ್ಪಾದನೆ, ಅಡಿಕೆ ಉಪ ಉತ್ಪನ್ನಗಳ ತಯಾರಿಕೆ, ಅಡಿಕೆ ನ್ಯಾನೋ ಉತ್ಪನ್ನ, ಅನಾನಸ್ ಸಂಸ್ಕರಣೆ ಇನ್‌ಕ್ಯುಬೇಶನ್ ಸೌಲಭ್ಯ, ಸಾಂಬಾರು ಪದಾರ್ಥ ಸಂಸ್ಕರಣೆ, ಶೇಂಗಾ ಸಂಸ್ಕರಣೆ, ಮೌಲ್ಯವರ್ಧನೆ ಕುರಿತ ನವೋದ್ಯಮ ಸೌಲಭ್ಯ ಆರಂಭಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: agriculture university shimogaGoverner Thavarchand GehlotKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೃಷಿ ವಿವಿಮಲೆನಾಡು_ಸುದ್ಧಿರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳು ಸೇವಾ ಚಟುವಟಿಕೆಗಳಲ್ಲಿ ತೊಡಗಿದರೆ ದುಶ್ಚಟಗಳಿಂದ ದೂರವಿರಲು ಸಹಕಾರಿ: ಡಾ. ನಾಗರಾಜ್ ಪರಿಸರ

Next Post

ಅಕಾಲಿಕ ಮಳೆ: ಜನರ ಬವಣೆ ಆಲಿಸದೆ ಸಿಎಂ ಕಾಲಹರಣ – ಕೆಂಗಲ್ ಶ್ರೀಪಾದ ರೇಣು ಆಕ್ರೋಶ

kalpa News

kalpa News

Next Post
ಚುನಾವಣಾ ಸೋಲಿನ ಭಯದಿಂದ ಕೃಷಿ ಮಸೂದೆಗಳ ವಾಪಸ್ಸು: ಕೆಂಗಲ್‌ ಶ್ರೀಪಾದ್‌ ರೇಣು ಹೇಳಿಕೆ

ಅಕಾಲಿಕ ಮಳೆ: ಜನರ ಬವಣೆ ಆಲಿಸದೆ ಸಿಎಂ ಕಾಲಹರಣ - ಕೆಂಗಲ್ ಶ್ರೀಪಾದ ರೇಣು ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL