Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ವಚ್ಛ ಪರಿಸರದಿಂದ ಆರೋಗ್ಯಪೂರ್ಣ, ಸದೃಢ ಸಮಾಜ ನಿರ್ಮಾಣ ಸಾಧ್ಯ: ವಿನಯ ಗುರೂಜಿ

ಸಕ್ರೇಬೈಲು ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ | ಪರಿಸರ ರಕ್ಷಣೆಯ ಅರಿವು ಬೆಳೆಸಿಕೊಳ್ಳುವಂತೆ ಧನಂಜಯ ಸರ್ಜಿ ಸಲಹೆ

June 30, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸ್ವಚ್ಛ ಪರಿಸರದಿಂದ ಆರೋಗ್ಯಪೂರ್ಣ ಹಾಗೂ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಕೊಪ್ಪ ತಾಲೂಕು ಗೌರಿಗದ್ದೆಯ ಅವಧೂತ ವಿನಯ ಗುರೂಜಿ Gowrigadde Vinay Guruji ಹೇಳಿದರು.

ಕೊಪ್ಪ ತಾಲೂಕು ಗೌರಿಗದ್ದೆ ಮಹಾತ್ಮಾ ಗಾಂದಿ ಸೇವಾ ಟ್ರಸ್ಟ್, ಶಿವಮೊಗ್ಗ ಸರ್ಜಿ ಪೌಂಡೇಷನ್‌, ರೌಂಡ್‌ ಟೇಬಲ್‌ ಇಂಡಿಯಾ, ಓಪನ್‌ ಮೈಂಡ್ಸ್ ಸ್ಕೂಲ್‌, ಜೆಸಿಐ ಮಲ್ನಾಡ್‌, ಪರೋಪಕಾರಂ, ಆಶ್ರಯ ಬಡಾವಣೆ ವೇದಿಕೆ, ಪರ್ಯ್ವರ್ಣ್ ವತಿಯಿಂದ  ಗುರುವಾರ ಮುಂಜಾನೆ ಸಕ್ರೇಬೈಲು – ಮಂಡಗದ್ದೆ ಮಾರ್ಗದ 6 ಕಿಲೊ ಮೀಟರ್‌ ದೂರದ ಇಕ್ಕೆಲಗಳಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆದ್ದಾರಿಯ ಅಕ್ಕ ಪಕ್ಕ ಮದ್ಯದ ಖಾಲಿ ಬಾಟಲಿ, ಇತರೆ ತ್ಯಾಜ್ಯ ಎಸೆಯುವುದರಿಂದ ಪ್ರಕೃತಿ ಸೌದರ್ಯ ಹಾಳಾಗುತ್ತದೆ. ಇಂತಹ ಕೃತ್ಯ ತಡೆಯಲು ಸಂಬಂದಿಸಿದ ಇಲಾಖೆ ಕ್ರಮಕ್ಕೆ ಮುಂದಾಗಬೇಕು ಎಂದರು ಹೇಳಿದರು.

ತ್ಯಾಜ್ಯವು ವನ್ಯ ಜೀವಿಗಳ ಪ್ರಾಣಕ್ಕೂ ಎರವಾಗುವ ಸಾಧ್ಯತೆ ಹೆಚ್ಚಿದೆ. ಜಾನುವಾರುಗಳಿಗೂ ಅಪಾಯ ಎದುರಾಗಲಿದೆ. ಮದ್ಯ ಸೇವನೆ ಮಾಡುವವರಿಗೂ ಒಂದು ವ್ಯವಸ್ಥೆ ಎಂಬುದಿದೆ. ಹಾಗಾಗಿ ಈ ರೀತಿ ಎಲ್ಲೆಂದರಲ್ಲಿ ಕುಡಿದು ಖಾಲಿ ಬಾಟಲಿಗಳನ್ನು ಬಿಸಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ವಿಶೇಷ ಕಾರ್ಯಕ್ರಮ, ಮದುವೆ, ಶುಭ ಕಾರ್ಯಗಳಲ್ಲಿ ಹಣ ಮತ್ತು ಬೆಲೆ ಬಾಳುವ ವಸ್ತು ಕೊಡುವುದಕ್ಕಿಂತ ಸಸಿಗಳನ್ನು ಉಡುಗೊರೆ ನೀಡುವ ಮೂಲಕ ಗಿಡ ಮರ ಬೆಳೆಸಲು ಪ್ರೇರಣೆ ನೀಡುವ ಕೆಲಸವಾಗಬೇಕು. ಕಾಡು ನಾಡು ಎಲ್ಲವೂ ಸಮೃದ್ಧವಾಗಿರುತ್ತದೆ ಎಂದು ಹೇಳಿದರು.
ಸರ್ಜಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ Dr. Dhanjaya Sarji ಮಾತನಾಡಿ, ಸುಂದರವಾದ ಪ್ರಕೃತಿಯ ಮಧ್ಯದ ದಾರಿ ಆಚೀಚೆ ಪ್ಲಾಸ್ಟಿಕ್‌, ಖಾಲಿ ಪೌಚು ಹಾಗೂ ಮದ್ಯದ ಬಾಟಲಿಗಳೇ ರಾರಾಜಿಸಿವೆ. ವಾಹನಗಳಲ್ಲಿ ಬಂದು ರಸ್ತೆಯ ಬದಿ ಕಾರು ಬಾರು, ಮೋಜು ಮಸ್ತಿ ಸಲ್ಲದು ಎಂದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆ ಅದಿಕಾರಿಗಳಿಂದ ಎಲ್ಲ ರೀತಿಯ ಸಹಕಾರವನ್ನು ದೊರೆತಿದೆ. ಅಲ್ಲದೇ ಹಲವು ಸಂಘಟನೆಗಳ ಸಹಕಾರದೊಂದೊಂದಿಗೆ ರಸ್ತೆ ಬದಿಗಳಲ್ಲಿ 500 ಮೀಟರ್‌ಗೊಂದರಂತೆ 8 ತ್ಯಾಜ್ಯದ ಸ್ಟೀಲ್‌ ತೊಟ್ಟಿಗಳನ್ನು ಭದ್ರವಾಗಿ ಅಳವಡಿಸಲಾಗಿದೆ. ಇದರಲ್ಲೇ ತ್ಯಾಜ್ಯವನ್ನು ಹಾಕಬೇಕು. ವಾರಕ್ಕೊಮ್ಮೆ ಕಸದ ಸೂಕ್ತ ವಿಲೆವಾರಿಗೂ ವ್ಯವಸ್ಥೆ ಮಾಡಲಾಗಿದೆ ಎಂದರು.

ಭೂಮಿಗೆ ಬಿದ್ದ ಪ್ಲಾಸ್ಟಿಕ್‌ ಕೊಳೆಯಬೇಕೆಂದರೆ ಸುಮಾರು 200 ವರ್ಷಗಳ ಕಾಲ ಬೇಕಾಗುತ್ತದೆ. ಹಾಗೆಯೇ ಬಿಟ್ಟರೆ ಪ್ಲಾಸ್ಟಿಕ್‌ ಬಿದ್ದ ಜಾಗದಲ್ಲಿ ಯಾವುದೇ ಬೆಳೆ, ಸಸ್ಯ ಕೂಡ ಮೇಲೇಳುವುದಿಲ್ಲ. ಅದರಲ್ಲೂ ಹೆದ್ದಾರಿ ಬದಿಯ ಇಕ್ಕೆಲಗಳಲ್ಲಿ ಬೇಕಾಬಿಟ್ಟಿ ಬಿಸಾಡುವುದರಿಂದ ಪರಿಸರದ ಸೌಂದರ್ಯವೂ ಹಾಳಾಗುತ್ತದೆ. ಹಾಗಾಗಿ ಪ್ರವಾಸಿಗರೂ ಸೇರಿದಂತೆ ಎಲ್ಲರೂ ಪರಿಸರ ರಕ್ಷಣೆಯ ಅರಿವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾದಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ರೌಂಡ್‌ ಟೇಬಲ್‌ ಇಂಡಿಯಾ ಚೇರ್ಮನ್‌ ಕೌಶಿಕ್‌ ಡಿ.ಎನ್‌, ಈಶ್ವರ್‌ ಸರ್ಜಿ, ಸೂಡಾ ಆಯಕ್ತರಾದ ಕೊಟ್ರೇಶ್‌, ಓಪನ್‌ ಮೈಂಡ್‌್ಸ ಸ್ಕೂಲ್‌ ಮುಖ್ಯಸ್ಥರಾದ ಕೆ. ಕಿರಣ್‌ ಕುಮಾರ್‌, ಜೆಸಿಐನ ಪ್ರದೀಪ್‌, ಪರೋಪಕಾರಂನ ಶ್ರೀಧರ್‌, ಆಶ್ರಯ ಬಡಾವಣೆ ವೇದಿಕೆ ಪುರುಷೋತ್ತಮ್‌, ಪರ್ಯ್ವರಣ್‌ನ ತ್ಯಾಗರಾಜು, ರಾಘವೇಂದ್ರ ಹೆಬ್ಬಾರ್‌, ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವಾರು ಸಂಘಟನೆಗಳ 350 ಕ್ಕೂ ಹೆಚ್ಚು ಪರಿಸರ ಪ್ರೇಮಿಗಳು ಹಾಗೂ ಗುರೂಜಿ ಅವರ ನೂರಾರು ಭಕ್ತರು ತ್ಯಾಜ್ಯ ಸಂಗ್ರಹಣೆಯಲ್ಲಿ ಭಾಗವಹಿಸಿದ್ದರು.

ಮೂರು ಲೋಡ್‌ಗಿಂತ ಹೆಚ್ಚು ತ್ಯಾಜ್ಯ:
ಮುಂಜಾನೆ 6 ಗಂಟೆಯಿಂದ ಸತತ ನಾಲ್ಕೈದು ತಾಸು ರಸ್ತೆ ಬದಿ ಹಾಗೂ ಕಾಡೊಳಗಿನ ಘನ ತ್ಯಾಜ್ಯವನ್ನು ಚೀಲಗಳಲ್ಲಿ ಗಾಜಿನ ಬಾಟಲಿ, ಮರು ಸಂಸ್ಕರಣೆ ಆಗುವ ಪ್ಲಾಸ್ಟಿಕ್‌ ಹಾಗೂ ಮರು ಸಂಸ್ಕರಣೆ ಆಗದ ಪ್ಲಾಸ್ಟಿಕ್‌ ಅನ್ನು ಪ್ರತ್ಯೇಕವಾಗಿ ವಿಂಗಡಿಸಿ ಮೂರು ಲಾರಿ ಲೋಡ್‌ಗಳಿಗಿಂತಲೂ ಹೆಚ್ಚು ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhanjaya SarjiGowrigadde Vinay GurujKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಗೌರಿಗದ್ದೆಯ ಅವಧೂತ ವಿನಯ ಗುರೂಜಿಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ದಾವಣಗೆರೆ: ಜುಲೈ 3ರಂದು ಚಂದ್ರಗುಪ್ತ ಮೌರ್ಯ ಯುಪಿಎಸ್‌ಸಿ, ಕೆಪಿಎಸ್‌ಸಿ ತರಬೇತಿ ಕೇಂದ್ರಕ್ಕೆ ಚಾಲನೆ

Next Post

ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!