ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆ ಅತ್ಯಂತ ಅಭಿವೃದ್ದಿ ಪಥದಲ್ಲಿ ಸಾಗುತ್ತಿದ್ದು, ಈಗಾಗಲೇ ಅನೇಕ ಅಭಿವೃದ್ದಿ ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, 76ನೇ ಸ್ವಾತಂತ್ಯ್ರೋತ್ಸವದ ಈ ಸಂದರ್ಭದಲ್ಲಿ ನಮ್ಮ ನಗರಕ್ಕೆ ಬಾಂಗ್ಲಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಯುದ್ಧ ಟ್ಯಾಂಕರ್ ಒಂದು ಬಂದಿದೆ. ಮುಂದಿನ ಎರಡು ತಿಂಗಳಲ್ಲಿ ಫೈಟರ್ ಜೆಟ್ ವಿಮಾನ Fighter Jet Airoplane ಕೂಡ ಬರಲಿದೆ. ಅದನ್ನು ವಿಮಾನ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಎಂಆರ್ಎಸ್ ವೃತ್ತದಲ್ಲಿ ಸ್ಥಾಪನೆ ಮಾಡಬೇಕೆಂಬ ಯೋಜನೆ ಇದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ Rajnath Singh ಅವರಿಗೆ ಈ ನಿಷ್ಕಿçಯ ಟ್ಯಾಂಕರ್ ಮತ್ತು ವಿಮಾನವನ್ನು ಶಿವಮೊಗ್ಗ ಜಿಲ್ಲೆಗೆ ನೀಡಿ ಯುವಕರಲ್ಲಿ ಸೈನ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಸಹಕರಿಸಲು ಮನವಿ ಮಾಡಿದ್ದೆವು. ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದಕ್ಕೆ ಅಭಿನಂದನೆ ಎಂದರು.
ರೈಲ್ವೆ ಮತ್ತು ಹೈವೇಗೆ ಶಿವಮೊಗ್ಗ ಜಿಲ್ಲೆಗೆ ಅತಿಹೆಚ್ಚಿನ ಅನುದಾನವನ್ನು ಕೇಂದ್ರ ಒದಗಿಸಿದೆ. ಸ್ವಾತಂತ್ರ ಪೂರ್ವದಲ್ಲೇ ಸ್ವಾತಂತ್ರ್ಯ ಗ್ರಾಮ ಎಂದು ದೇಶದಲ್ಲೇ ಗುರುತಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿ ಐದು ಜನರನ್ನು ಗಲ್ಲಿಗೇರಿಸಿದ ಶಿಕಾರಿಪುರದ ಈಸೂರು ಗ್ರಾಮದಲ್ಲಿ ಕೋಟಿ ವೆಚ್ಚದಲ್ಲಿ ಹುತಾತ್ಮ ಸ್ಮಾರಕ ಅಭಿವೃದ್ಧಿಪಡಿಸಿದ್ದು, ಗಣರಾಜ್ಯೋತ್ಸವ ದಿನದಂದು ಅದನ್ನು ಅದ್ಧೂರಿಯಾಗಿ ಉದ್ಘಾಟಿಸಲಾಗುವುದು. ಅದೇ ರೀತಿ ಆ.15ರೊಳಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ Shivamogga Airport ವಿಮಾನ ಹಾರಾಟ ಪ್ರಾರಂಭಿಸಬೇಕೆಂಬ ಇಚ್ಛೆ ಇತ್ತು. ಆದರೆ ಈಗ ಆ. 31ಕ್ಕೆ ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಶಿವಮೊಗ್ಗಕ್ಕೆ ಮುಂದಿನ ದಿನಗಳಲ್ಲಿ ಒಳ್ಳೆಯ ಭವಿಷ್ಯವಿದೆ ಎಂದರು.
Also read: ಸಚಿವ ಚೆಲುವರಾಯಸ್ವಾಮಿ ವಿರುದ್ಧ ಮಾಜಿ ಸಿಎಂ ಹೆಚ್ಡಿಕೆ ಕೆಂಡಾಮಂಡಲ
Discussion about this post