Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭ | ಕೇಂದ್ರ ಸಚಿವ ಮುರುಗನ್

January 23, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ #Bhadravathi Akashavani ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ ಒದಗಿಸಿಕೊಟ್ಟು, ಅತ್ಯಲ್ಪ ಅವಧಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್. ಮುರುಗನ್ #Minister Murugan ಅವರು ಹೇಳಿದರು.

ಅವರು ಇಂದು ನಗರದ ಎಂ.ಆರ್.ಎಸ್.ಸಮೀಪದಲ್ಲಿರುವ ದೂರದರ್ಶನ ಮರುಪ್ರಸಾರ ಕೇಂದ್ರದಲ್ಲಿ ಎಫ್.ಎಂ.ರೇಡಿಯೋ ಆರಂಭಿಸಲು ಕೆನಡಾದಿಂದ ತರಿಸಲಾಗಿದ್ದ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್‍ಮೀಟರ್ ಅಳವಡಿಕೆ ಹಾಗೂ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡು, ನಂತರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದ ಎಲ್ಲಾ ಆಕಾಶವಾಣಿ ಕೇಂದ್ರಗಳನ್ನು ಜನರ ಆಶೋತ್ತರಗಳಿಗೆ ಪೂರಕವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಕಳೆದ ಸಾಲಿನಲ್ಲಿ 2500ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಮೂಲಭೂತ ಸೌಲಭ್ಯಗಳೊಂದಿಗೆ ಅತ್ಯಾಧುನಿಕ ತಂತ್ರಾಂಶಗಳನ್ನು ಅಳವಡಿಸಿದೆ ಎಂದ ಅವರು, ಪ್ರಸ್ತುತ ರಾಜ್ಯದ ಕೋಲಾರ, ರಾಣೆಬೆನ್ನೂರು, ಬೀದರ್ ಮತ್ತು ಉಡುಪಿ ಜಿಲ್ಲೆಗಳಿಗೂ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್‍ಮೀಟರ್‍ಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಆಕಾಶವಾಣಿ ಕೇಂದ್ರಗಳನ್ನು ಇನ್ನಷ್ಟು ಸಮರ್ಥವಾಗಿ ಕಾರ್ಯನಿರ್ವಹಿಸಲಿವೆ ಎಂದರು.

ಆಕಾಶವಾಣಿಯು ಈ ದೇಶದ ಸಾಂಪ್ರದಾಯಿಕ, ಕಲೆ, ಸಾಹಿತ್ಯ, ಸಂಗೀತವನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಮಹತ್ವ ಕಾರ್ಯನಿರ್ವಹಿಸುತ್ತಿದೆ ಮಾತ್ರವಲ್ಲ ಸ್ಥಳೀಯ ಕಲಾವಿದರಿಗೆ ವೇದಿಕೆಗಳನ್ನು ಒದಗಿಸಿ, ಅವರ ಕಲೆಯನ್ನು ಜಗತ್ತಿಗೆ ಪರಿಚಯಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ. ಇದರೊಂದಿಗೆ ಇಂದಿನ ಜನಾಂಗಕ್ಕೆ ಪೂರಕವಾದ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರಗೊಳಿಸಲು ಆಕಾಶವಾಣಿ ಬದ್ದವಾಗಿದೆ. ದೂರದ ಗುಡ್ಡ-ಬೆಟ್ಟ ಪ್ರದೇಶಗಳಲ್ಲಿಯೂ ಆಕಾಶವಾಣಿ ತನ್ನ ಇರುವಿಕೆಯನ್ನು ಮತ್ತೆಮತ್ತೆ ಪರಿಚಯಿಸಲಿದೆ ಎಂದರು.

Also read: ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

ಇಲ್ಲಿನ ಕ್ರಿಯಾಶೀಲ ಸಂಸದ ಬಿ.ವೈ.ರಾಘವೇಂದ್ರ ಅವರ ಒತ್ತಾಸೆಯಂತೆ ಎಫ್.ಎಂ.ರೇಡಿಯೋ ಕೇಂದ್ರವನ್ನು ಅಭಿವೃದ್ಧಿಪಡಿಸಲು ಅಗತ್ಯ ಸಹಕಾರವನ್ನು ನೀಡಲಾಗುವುದು. ಅವರ ಜನಪರ ಕಳಕಳಿಯಂತೆ ಸಾಮಾನ್ಯವೆನಿಸುವ ಕಾರ್ಯಗಳನ್ನು ನಿರ್ಲಕ್ಷಿಸದೇ ಕೈಗೆತ್ತಿಕೊಳ್ಳುವ ಅವರ ಸ್ವಭಾವ ಪ್ರಶಂಸನೀಯವಾದುದು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಪ್ರಸ್ತುತ ಭದ್ರಾವತಿ ಕೇಂದ್ರದಲ್ಲಿ 1ಕಿ.ವ್ಯಾ. ಸಾಮಥ್ರ್ಯದ ಟ್ರಾನ್ಸ್‍ಮೀಟರನ್ನು ಅಳವಡಿಸಲಾಗಿದೆ. ನಗರದ ಈ ನೂತನ ಪ್ರಸಾರ ಕೇಂದ್ರದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಕೆನಡಾದಿಂದ 10ಕಿ.ವ್ಯಾ. ಸಾಮಥ್ರ್ಯದ ಟ್ರಾನ್ಸ್‍ಮೀಟರ್‍ನ್ನು ಅಳವಡಿಸಲಾಗುತ್ತಿದ್ದು, ಸುಮಾರು 100ಕಿ.ಮೀ. ಪ್ರದೇಶದ ವ್ಯಾಪ್ತಿಯವರೆಗೆ ಯಾವುದೇ ಡಾಟಾ ಕೇಬಲ್‍ಗಳ ಸಹಾಯವಿಲ್ಲದೇ ರೇಡಿಯೋವನ್ನು ಆಲಿಸಬಹುದಾಗಿದೆ ಅಲ್ಲದೇ ತಮ್ಮ ಮೊಬೈಲ್‍ನಲ್ಲಿಯೂ ಎಫ್.ಎಂ. ಕಾರ್ಯಕ್ರಮಗಳನ್ನು ಕೇಳಬಹುದಾಗಿದೆ. ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಎಫ್.ಎಂ.ಆರಂಭಗೊಳ್ಳುತ್ತಿರುವುದು ಶುಭ ಸಂಕೇತ ಎಂದರು.
ಆಕಾಶವಾಣಿ ನಾಡಿನ ಸುದ್ದಿಗಳನ್ನು ಮಾತ್ರವಲ್ಲದೇ ಮನೋರಂಜನಾ ಮಾಧ್ಯಮವಾಗಿಯೂ ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಜನರ ಸಂಪರ್ಕ ಮಾಧ್ಯಮವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರ ಮಾಡುವ ಮೂಲಕ ಪರಿಚಿತವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಡಿ.ಎಸ್.ಅರುಣ್, ಮಾಜಿ ಶಾಸಕ ಕೆ.ಬಿ.ಅಶೋಕನಾಯ್ಕ್, ಆಕಾಶವಾಣಿ ವಿಭಾಗೀಯ ಮುಖ್ಯಸ್ಥ ಸಂಜೀವ್, ಉಪನಿರ್ದೇಶಕ ಡಾ.ರಘು, ಕಾರ್ಯಕ್ರಮ ಸಂಯೋಜಕ ಸುಬ್ರಾಯಭಟ್ ಸೇರಿದಂತೆ ಆಕಾಶವಾಣಿಯ ಅಧಿಕಾರಿ-ಸಿಬ್ಬಂಧಿಗಳು, ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Bhadravathi AkashavaniKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister MuruganNews_in_KannadaNews_KannadaShimogaShivamoggaNewsಭದ್ರಾವತಿ ಆಕಾಶವಾಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

Next Post

ಶಿವಮೊಗ್ಗ | ಮುರುಳಿ, ಶಶಿರಾಜ್ ಗೆ ಕುವೆಂಪು ವಿವಿ ಪಿಹೆಚ್’ಡಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಮುರುಳಿ, ಶಶಿರಾಜ್ ಗೆ ಕುವೆಂಪು ವಿವಿ ಪಿಹೆಚ್'ಡಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!