ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ B S Yadiyurappa ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈ ದಿನ ಬಹಳ ವೈಶಿಷ್ಟ್ಯ ಪೂರ್ಣವಾದದ್ದು ಮಲೆನಾಡು ಭಾಗದ ಜನರ ಬಹು ದಿನದ ಕನಸು ನನಸಾದಿದ್ದು, ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ತಮಗೆ ಲಭಿಸಿರುವುದಕ್ಕೆ ತಾವು ಜನರಿಗೆ ಋಣಿಯಾಗಿದ್ದೇನೆ ಎಂದು ಹೇಳಿದರು.
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಪ್ರಧಾನಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post