ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸನಗರ ತಾಲೂಕು ಬಟಾಣಿಜೆಡ್ಡು ಬಳಿ ಹಳಿ ಮೇಲೆ ಬೃಹತ್ ಮರ ಬಿದ್ದಿದ್ದರಿಂದ ತಾಳುಗುಪ್ಪ – ಬೆಂಗಳೂರು ಇಂಟರ್ಸಿಟಿ ರೈಲು #Thalaguppa-Intercity train ಸಂಚಾರ ಸುಮಾರು 2 ಗಂಟೆ ವಿಳಂಬವಾಗಿರುವ ಘಟನೆ ನಡೆದಿದೆ.
ಭಾರಿ ಮಳೆಯಿಂದಾಗಿ ಇಂದು ಬೆಳಗ್ಗೆ ರೈಲ್ವೆ ಹಳಿ ಮೇಲೆ ಮರ ಬಿದ್ದಿತ್ತು. ಇದನ್ನು ಗಮನಿಸಿದ ಲೋಕೋ ಪೈಲೆಟ್ ರೈಲು ನಿಲ್ಲಿಸಿದ್ದರು. ರೈಲ್ವೆ ಇಲಾಖೆಯ ಇಂಟಿರಿಯರ್ ವರ್ಕ್ ತಂಡದ ಸದಸ್ಯರು ಕೂಡಲೆ ಸ್ಥಳಕ್ಕೆ ತೆರಳಿ ಮರ ತೆರವು ಕಾರ್ಯಾಚರಣೆ ನಡೆಸಿದರು.
Also read: ಶಿವಮೊಗ್ಗ ಸೇರಿ ಈ 2 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ | ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ
ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟು 7 ಗಂಟೆಗೆ ಶಿವಮೊಗ್ಗ ನಿಲ್ದಾಣ ತಲುಪಬೇಕಿದ್ದ ರೈಲು 9.05ಕ್ಕೆ ತಲುಪಿದೆ. 9.18ಕ್ಕೆ ಶಿವಮೊಗ್ಗ ನಿಲ್ದಾಣದಿಂದ ಹೊರಟಿದ್ದು, ಇಂದು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post