ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಸಚಿವರು ಹಾಗೂ ಹಾಲಿ ವಿಧಾನಿಪರಿಷತ್ ಸದಸ್ಯರಾದ ಸಿ.ಟಿ.ರವಿಯವರು ಇತ್ತೀಚೆಗೆ ಸವಿತಾ ಸಮಾಜವನ್ನು ಅವ್ಯಾಚ ಶಬ್ದ ಬಳಸಿ ನಿಂದಿಸಿರುವುದನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಿಭಾಗವು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ತಿಳಿಸಿದ್ದಾರೆ.
ಅವರು ಇಂದು ಮಾಜಿ ಸಚಿವರ ವಿರುದ್ಧ ಹಿಂದುಳಿದ ವರ್ಗಗಳ ವಿಭಾಗದಿಂದ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರನ್ನು ಸಲ್ಲಿಸಿ ಮಾತನಾಡುತ್ತಿದ್ದರು

ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಸವಿತಾ ಸಮಾಜದ ವಿರುದ್ದ ಸಂವಿಧಾನ ಮತ್ತು ಕಾನೂನುಗಳ ಮೂಲಭೂತ ಆಶಯಗಳಿಗೆ ವಿರುದ್ದವಾಗಿ ಮಾತನಾಡಿ ಆ ಸಮಾಜವನ್ನು ಅತ್ಯಂತ ತುಚ್ಚವಾಗಿ ಕಂಡಿದ್ದಾರೆ. ಆ ಹಿನ್ನೆಲೆಯಲ್ಲಿ ಘನತೆವೆತ್ತ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ವಿಧಾನಪರಿಷತ್ ಸದಸ್ಯತ್ವದಿಂದ ಅವರನ್ನು ವಜಾ ಮಾಡಬೇಕು ಹಾಗೂ ಪೊಲೀಸ್ ಇಲಾಖೆ ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗ ಒತ್ತಾಯಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post