ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪಾಲಿಕೆ ವ್ಯಾಪ್ತಿಯಲ್ಲಿ ಹಂದಿಗಳನ್ನು ಸಾಕುತ್ತಿರುವುದರಿಂದ ಇವುಗಳು ಎಲ್ಲೆಂದರಲ್ಲಿ ಅಲೆದಾಡಿ ಉಪದ್ರವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿವೆ ಎಂದು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅನೇಕ ದೂರಗಳು ಬಂದಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರ ಅನುಮತಿ ಇಲ್ಲದೆ ಹಂದಿಗಳನ್ನು ಸಾಕುತ್ತಿರುವುದು ಕರ್ನಾಟಕ ಪೌರ ನಿಗಮಗಳ ಅಧಿನಿಯಮದನ್ವಯ ಕಾನೂನುಬಾಹಿರ. ಈ ಹಿಂದೆಯೂ ಈ ಬಗ್ಗೆ ತಿಳಿವಳಿಕೆ ನೀಡಲಾಗಿದ್ದರೂ ಮಾಲೀಕರು ಕ್ರಮ ವಹಿಸಿರುವುದಿಲ್ಲ. ಆದ್ದರಿಂದ ನಗರ ವ್ಯಾಪ್ತಿಯಲ್ಲಿ ಸಾಕಾಣಿಕೆದಾರರು ಹಂದಿಗಳನ್ನು ಸಾಕಿದ್ದಲ್ಲಿ ತಮ್ಮ ಹಂದಿಗಳನ್ನು 3 ದಿನಗಳ ಒಳಗೆ ಖಾಲಿ ಮಾಡತಕ್ಕದ್ದು. ತಪ್ಪಿದಲ್ಲಿ ಹಂದಿಗಳನ್ನು ಬಿಡಾಡಿ ಹಂದಿಗಳೆಂದು ಪರಿಗಣಿಸಿ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇದರಿಂದ ಆಗುವ ಯಾವುದೇ ನಷ್ಟಕ್ಕೆ ಪಾಲಿಕೆ ಜವಾಬ್ದಾರರಲ್ಲ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post