No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

‘ಎಐ’ ತಂತ್ರಜ್ಞಾನ ವೈದ್ಯಕೀಯ ಕ್ಷೇತ್ರಕ್ಕೆ ಸಹಕಾರಿ: ಡಾ. ವಿನಯ ಶ್ರೀನಿವಾಸ್

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಕೃತಕ ಬುದ್ಧಿವಂತಿಕೆ ಕುರಿತು ಚರ್ಚಾ ಕಾರ್ಯಕ್ರಮ

kalpa News by kalpa News
February 16, 2024
in ಶಿವಮೊಗ್ಗ
0
‘ಎಐ’ ತಂತ್ರಜ್ಞಾನ ವೈದ್ಯಕೀಯ ಕ್ಷೇತ್ರಕ್ಕೆ ಸಹಕಾರಿ: ಡಾ. ವಿನಯ ಶ್ರೀನಿವಾಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃತಕ ಬುದ್ಧಿವಂತಿಕೆ(ಎಐ) ತಂತ್ರಜ್ಞಾನ #AITechnology ವೈದ್ಯಕೀಯ ಕ್ಷೇತ್ರಕ್ಕೆ ಸಹಕಾರಿಯಾಗಿದ್ದು, ಪ್ರಮುಖವಾಗಿ ಒಳರೋಗಿಗಳ ಸೇವೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ವಿನಯ ಶ್ರೀನಿವಾಸ್ ಅಭಿಪ್ರಾಯಪಟ್ಟಿದ್ದಾರೆ.

ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಸುಬ್ಬಯ್ಯ ಲಿಟರರಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿವಂತಿಕೆ(ಎಐ) #AI ವರದಾನವೇ? ಶಾಪವೇ ಎಂಬ ಕುರಿತಾಗಿ ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೈದ್ಯಕೀಯ #Medical ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ಪಾತ್ರ ವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಒಳರೋಗಿಗಳ ವಲಯಕ್ಕೆ ಹೆಚ್ಚು ಉಪಯುಕ್ತವಾಗಲಿದೆ. ಕಡಿಮೆ ವೆಚ್ಚದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಗುರಿಯತ್ತ ಸರ್ಕಾರಗಳೂ ಸಹ ಕೆಲಸ ಮಾಡುತ್ತಿದೆ ಎಂದರು.

ಯಾವುದೇ ತಂತ್ರಜ್ಞಾನವನ್ನು #Technology ಸಮಾಜಕ್ಕೆ ವಿಶೇಷವಾಗಿ ಬಡವರಿಗೆ ಉಪಯುಕ್ತವಾಗಿಸುವುದು ಆದ್ಯತೆಯಾಗಬೇಕು. ಹೀಗಾಗಿ, ಇಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಬಡಜನರಿಗೆ ಚಿಕಿತ್ಸೆ ನೀಡುವಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದರು.

Also read: ರಾಜ್ಯ ಬಜೆಟ್ | ಪೌರಾಡಳಿತ ಇಲಾಖೆಗೆ ಸಿಕ್ಕಿದ್ದೇನು? ಯಾವೆಲ್ಲಾ ನಗರಗಳಿಗೆ ಅನುದಾನ?

ವೈದ್ಯರಿಗೆ ಎಐ ಉತ್ತಮ ಸಹಾಯಕವಾಗಿರುತ್ತದೆ. ಆದರೆ ಇದು ವೈದ್ಯರನ್ನು ಬದಲಿಸಲು ಸಾಧ್ಯವಿಲ್ಲ, ಆದರೆ ಮಾನವ ಸಂವಹನವು ನಿರ್ಣಾಯಕವಾಗಿಸುವ ಮಾರ್ಗದರ್ಶಿ ಸಾಧನವಾಗಿದೆ. ಬೇಗನೆ ನಿರ್ಧಾರ ತೆಗೆದುಕೊಳ್ಳಬಹುದು, ಹೆಚ್ಚು ನಿಖರವಾಗಿರಬಹುದು. ಕೆಲವು ಸಂದರ್ಭಗಳಲ್ಲಿ ಹೆಚ್ಚು ಸಮಯವಿರುವ ಪರೀಕ್ಷೆಗಳಿಗೆ ಹೋಗದೆ ಆರೈಕೆಯ ವೆಚ್ಚವನ್ನು ಕಡಿಮೆಯಾಗಬಹುದು ಎನ್ನುವ ಅಭಿಪ್ರಾಯ ವೈದ್ಯಕೀಯ ಕ್ಷೇತ್ರದಲ್ಲಿ ಚರ್ಚೆಯಾಗಿದೆ ಎಂದರು.
ಮಕ್ಕಳ ಚಿಕಿತ್ಸಾ ವಿಭಾಗದ ಎಚ್’ಒಡಿ ಡಾ.ವಿಕ್ರಂ ಎಸ್. ಕುಮಾರ್ ಮಾತನಾಡಿ, ಎಐ’ ವೈದ್ಯಕೀಯ ಕ್ಷೇತ್ರಕ್ಕೆ, ವೈದ್ಯರು ಮತ್ತು ರೋಗಿಗಳ ಸಮಯ ಉಳಿತಾಯ ಹಾಗೂ ಹಣವನ್ನು ಉಳಿಸಲು ಸಹಾಯ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವೈದ್ಯರು, ತಂತ್ರಜ್ಞರು ಮುಂತಾದ ಆರೋಗ್ಯ ಸೇವೆಯ ಸಿಬ್ಬಂದಿ ಕೂಡ ದೂರದಿಂದಲೇ ರೋಗಿಗಳಿಗೆ ಚಿಕಿತ್ಸೆ ನೀಡಬಹುದು. ಪ್ರಯೋಗಾಲಯದ ತಂತ್ರಜ್ಞರು ಕೂಡ ರೋಗಿಗಳ ಸಿಟಿ’ ಎಂಆರ್’ಐ ಮುಂತಾದ ಪರೀಕ್ಷೆಗಳನ್ನು ತನ್ನ ಸ್ಥಳದಿಂದಲೇ ಮಾಡಿ ಬೇರೆ ನಗರದಲ್ಲಿರುವ ವೈದ್ಯರಿಗೆ ಕಳುಹಿಸಬಹುದು. ವೈದ್ಯರು ಕೃತಕ ಬುದ್ಧಿಮತ್ತೆಯ ನೆರವಿನಿಂದ ರೋಗ ನಿರ್ಧಾರ ಕೈಗೊಂಡು ತಂತ್ರಜ್ಞರಿಗೆ ಕಳುಹಿಸಬಹುದು. ಇದರಿಂದ ರೋಗಿಗೆ ಪ್ರಯಾಣದ ಹಣ ಹಾಗೂ ಸಮಯ ಎರಡೂ ಉಳಿತಾಯವಾಗುತ್ತದೆ. ವೈದ್ಯರಿಗೂ ಕೂಡ ಹೆಚ್ಚು ರೋಗಿಗಳನ್ನು ಪರೀಕ್ಷಿಸಲು ಸಮಯವಾಗುತ್ತದೆ ಎಂದರು.

ಪರವಿರೋಧ ಚರ್ಚೆಯಲ್ಲಿ ಪಾಲ್ಗೊಂಡ ಸುಮಾರು 12 ವಿದ್ಯಾರ್ಥಿಗಳು ಕೃತಕ ಬುದ್ದಿವಂತಿಕೆ ವಿಚಾರದಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದರು.

ಮುಂದುವರೆದ ತಂತ್ರಜ್ಞಾನವಾದ ಎಐನಿಂದ ವೈದ್ಯಕೀಯ #AIinMedical ಕ್ಷೇತ್ರಕ್ಕೆ ಹೆಚ್ಚಿನ ಪ್ರಯೋಜನವಿದೆ. ಈ ತಂತ್ರಜ್ಞಾನವನ್ನು ಆಧರಿಸಿ ರೋಗಿಗಳಿಗೆ ಶೀಘ್ರ ಹಾಗೂ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯವಿದೆ ಎಂದು ಕೆಲವು ವಿದ್ಯಾರ್ಥಿಗಳು ವಾದ ಮಂಡಿಸಿದರು.
ಆದರೆ, ಬೇರೆಯದೇ ತಂತ್ರಜ್ಞಾನಕ್ಕೂ ಎಐ ತಂತ್ರಜ್ಞಾನಕ್ಕೂ ಕೆಲವೊಂದು ವ್ಯತ್ಯಾಸವಿದ್ದು, ರೋಗಿ ನಿರ್ಣಯ ಹಾಗೂ ಚಿಕಿತ್ಸೆಯಲ್ಲಿ ಇದು ಅಷ್ಟೊಂದು ಸಹಕಾರಿಯಲ್ಲ. ಸಂಪೂರ್ಣ ತಂತ್ರಜ್ಞಾನದ ಮೇಲೆ ಅವಲಂಬಿತರಾಗಿ ವೈದ್ಯರ ವೈಯಕ್ತಿಕ ಸಾಮರ್ಥ್ಯ ಕುಂಠಿತವಾಗುವ ಸಾಧ್ಯತೆಯಿರುತ್ತದೆ ಎಂದು ಕೆಲವು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು.

ಪರ ವಿರೋಧ ಚರ್ಚಾ ಕಾರ್ಯಕ್ರಮದ ತೀರ್ಪುಗಾರರಾಗಿ ಮಕ್ಕಳ ವಿಭಾಗದ ಎಚ್’ಒಡಿ ಡಾ.ವಿಕ್ರಂ ಹಾಗೂ ದಂತ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲ ಡಾ.ಮಿಥುನ್ ನಿರ್ವಹಿಸಿದರು.

ದಂತ ವೈದ್ಯಕೀಯ ಕಾಲೇಜಿನ ಎಚ್’ಒಡಿ ಡಾ. ಡಾ.ಪ್ರಮೋದ್ ಕೃಷ್ಣ, ಉಪಪ್ರಾಂಶುಪಾಲ ಡಾ.ಎಚ್.ಎಂ. ಶಿವಮೂರ್ತಿ, ಜೈವಿಕ ರಸಾಯನಶಾಸ್ತ್ರ ವಿಭಾಗದ ಎಚ್’ಒಡಿ ಡಾ. ಚಂದ್ರಕಾಂತ್, ಮಕ್ಕಳ ಚಿಕಿತ್ಸಾ ವಿಭಾಗದ ಹಿರಿಯ ವೈದ್ಯ ಡಾ. ಮಂಜುನಾಥ್ ಸ್ವಾಮಿ, ಸಮುದಾಯ ವೈದ್ಯಕೀಯ ಸಹಾಯಕ ಪ್ರಾಧ್ಯಾಪಕ ಡಾ. ದಿವಾಕರ್, ದಂತ ವೈದ್ಯೆ ಡಾ. ಹರ್ಷಿತಾ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited     

Tags: AI in MedicalArtificial IntelligenceKannada NewsKannada News LiveKannada News Online ShivamoggaKannada News WebsiteKannada WebsiteLatest News KannadaMalnad NewsMedicalNews KannadaShimogaShivamogga Newsಎಐಕೃತಕ ಬುದ್ಧಿವಂತಿಕೆಮಲೆನಾಡು_ಸುದ್ಧಿವೈದ್ಯಕೀಯವೈದ್ಯಕೀಯ ಕ್ಷೇತ್ರಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಬಜೆಟ್ | ಪೌರಾಡಳಿತ ಇಲಾಖೆಗೆ ಸಿಕ್ಕಿದ್ದೇನು? ಯಾವೆಲ್ಲಾ ನಗರಗಳಿಗೆ ಅನುದಾನ?

Next Post

ಹಿಂದೂ ದೇಗುಲಗಳ ಕೋಟಿ ಕೋಟಿ ಹಣ ಅಲ್ಪಸಂಖ್ಯಾತರ ಅಭಿವೃದ್ಧಿಗೆ: ತೀವ್ರ ಆರೋಪ, ಆಕ್ಷೇಪ

kalpa News

kalpa News

Next Post
ಹಿಂದೂ ದೇಗುಲಗಳ ಕೋಟಿ ಕೋಟಿ ಹಣ ಅಲ್ಪಸಂಖ್ಯಾತರ ಅಭಿವೃದ್ಧಿಗೆ: ತೀವ್ರ ಆರೋಪ, ಆಕ್ಷೇಪ

ಹಿಂದೂ ದೇಗುಲಗಳ ಕೋಟಿ ಕೋಟಿ ಹಣ ಅಲ್ಪಸಂಖ್ಯಾತರ ಅಭಿವೃದ್ಧಿಗೆ: ತೀವ್ರ ಆರೋಪ, ಆಕ್ಷೇಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL