ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ- ಭದ್ರಾವತಿ ನಡುವಿನ ಲೆವೆಲ್ ಕ್ರಾಸಿಂಗ್ ನಂ.43, 46 ಹಾಗೂ 47 ಗಳನ್ನು ಪರೀಕ್ಷೆಗಾಗಿ ಏಳು ದಿನಗಳ ಕಾಲ ಮುಚ್ಚಲಾಗುತ್ತಿದ್ದು, ಸಾರ್ವಜನಿಕರು ಬದಲಿ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮೂರೂ ಲೆವೆಲ್ ಕ್ರಾಸಿಂಗ್ ಗೇಟ್’ಗಳನ್ನು ಅಕ್ಟೋಬರ್ 28ರಿಂದ ನವೆಂಬರ್ 3ರವರೆಗೂ ಮುಚ್ಚಲಾಗುತ್ತದೆ. ಈ ದಿನಗಳಂದು ವಾಹನಗಳು ಹಾಗೂ ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

ಇನ್ನು, ಎಸ್’ಸಿ 47 – ಮಲ್ಲೇಶ್ವರ ನಗರ ರಸ್ತೆ -ನವೆಂಬರ್ 2 ರ ಬೆಳಗ್ಗೆ 8 ರಿಂದ ನ. 3 ರ ಸಂಜೆ 6 ರವರೆಗೆ ಮಲ್ಲೇಶ್ವರ ನಗರ ರಸ್ತೆ- ಹೊನ್ನಾಳಿ ರಸ್ತೆ- ಸಂಗೊಳ್ಳಿ ರಾಯಣ್ಣ ಸರ್ಕಲ್ – ಶಂಕರಮಠ ಸಂಪರ್ಕ ಎಲ್’ಸಿ 47 ರ ಮಾರ್ಗವಿರುತ್ತದೆ.

ಸಾರ್ವಜನಿಕರ ಹಿತದೃಷ್ಠಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್’ಗಳ ತಾಂತ್ರಿಕ ಪರಿಶೀಲನೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ರ ಅನ್ವಯ ಕೋಷ್ಟಕದಲ್ಲಿ ವಿವರಿಸಿದಂತೆ ತಾತ್ಕಾಲಿಕವಾಗಿ ಆಯಾ ದಿನಾಂಕಗಳಂದು ಮಾತ್ರ ಪರ್ಯಾಣ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post