No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ

ಶಿವಮೊಗ್ಗ | ವಿಷ್ಣು ಸಹಸ್ರನಾಮ ಪಾರಾಯಣ ಸಂಪನ್ನ | ಶ್ರೀಗಂಧ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 30, 2026
in ಶಿವಮೊಗ್ಗ
0
ಭಗವಂತನನ್ನು ಹೃದಯದಲ್ಲಿಟ್ಟುಕೊಂಡವರಿಗೆ ಸದಾ ನಿತ್ಯೋತ್ಸಾಹ | ಪೇಜಾವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀಗಂಧದಿಂದ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಶ್ರೀವಿಷ್ಣುವಿಗೆ ಅರ್ಚನೆ-ಸಮರ್ಪಣೆಯಾಗಿದೆ. ಇದರ ಫಲ ಸರ್ವರಿಗೂ ಲಭಿಸಲಿ. ನಾಡಿನಲ್ಲಿ ಸುಖ-ಶಾಂತಿ ಸಮೃದ್ಧಿಯಾಗಲಿ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.

ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀಗಂಧ ಸಂಸ್ಥೆ, ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್ ಶಿವಮೊಗ್ಗ ಶಾಖೆ ಹಾಗೂ ಭಜನಾ ಪರಿಷತ್ ಇವರ ಸಹಯೋಗದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ಉಭಯ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ, ಆಶೀರ್ವಚನ ನೀಡಿದರು.

Also Read: ಭದ್ರಾವತಿ | ಸೇತುವೆ ಮೇಲಿಂದ ಹಳ್ಳಕ್ಕೆ ಹಾರಿ ಬಿದ್ದ ಬಸ್ | ಹಲವರು ಗಂಭೀರ | ಹೇಗಾಯ್ತು ಘಟನೆ?

ಕುರುಕ್ಷೇತ್ರ ಯುದ್ಧ ಮುಗಿದ ಮೇಲೆ ಧರ್ಮರಾಯ, ಶ್ರೀಕೃಷ್ಣನಿಗೆ ಮುಂದೇನು ಮಾಡಬೇಕು ಮಾರ್ಗದರ್ಶನ ಕೊಡುವಂತೆ ವಿನಂತಿಸಿದಾಗ ಕ್ಷತ್ರೀಯನಾಗಿ ಹುಟ್ಟಿದರೂ ಸುಧೀರ್ಘ700 ವರ್ಷಗಳ ಕಾಲ ಬದುಕಿದ ಮತ್ತು ಅದರಲ್ಲಿ 525 ವರ್ಷಗಳನ್ನು ಅಧ್ಯಯನಕ್ಕೆ ಮೀಸಲಿಟ್ಟ ಭೀಷ್ಮಾಚಾರ‍್ಯರಲ್ಲಿ ಹೋಗಿ ಕೇಳು ಎಂದು ಸಲಹೆ ನೀಡುತ್ತಾರೆ. ಆಗ ಭೀಷ್ಮರು ಜಗತ್ತಿನಲ್ಲಿ ಸರ್ವಶ್ರೇಷ್ಠವಾದುದು ವಿಷ್ಣು ಸಹಸ್ರನಾಮ ಎಂದು ಅರ್ಥಸಹಿತವಾಗಿ ಧರ್ಮರಾಯನಿಗೆ ಹೇಳುತ್ತಾನೆ. ಮಾನವನ ಪ್ರಯತ್ನಕ್ಕೆ ಭಗವಂತನ ಅನುಗ್ರಹವೂ ಬೇಕು ಎಂದರು.ಹಕ್ಕಿಯೊಂದು ವಿಹರಿಸಲು ಎರಡೂ ರೆಕ್ಕೆಗಳು ಬೇಕು. ಆಗಮಾತ್ರ ಅದಕ್ಕೆ ಸ್ವಚ್ಛಂದವಾಗಿ ವಿಹರಿಸಲು ಸಾಧ್ಯ. ಅದೇ ರೀತಿ ಭಗವಂತನ ಅನುಗ್ರಹ ಬೇಕೇ ಬೇಕು. ಮಹಾವಿಷ್ಣವನ್ನು ಮನೆಯೊಳಗೆ ಇಟ್ಟರೆ ಸಾಲದು ಮನದೊಳಗೂ ಇಡಬೇಕು. ಆಗ ನಮ್ಮ ಬದುಕು ನಿತ್ಯೋತ್ಸವವಾಗುತ್ತದೆ. ನಿತ್ಯದಾನ, ಧರ್ಮ, ಸತ್ಕರ್ಮ ಆಚರಣೆ ಮಾಡಿದಾಗ ನಿತ್ಯಸಂಪತ್ತು ನಮ್ಮದಾಗುತ್ತದೆ. ಯಶಸ್ಸು, ಕೀರ್ತಿ ಲಭಿಸುತ್ತದೆ. ಹೃದಯದೊಳಗೆ ಭಗವಂತ ಬಂದು ನಿಲ್ಲುತ್ತಾನೆ. ಸಕಲ ಮಂಗಲಗಳಿಗೆ ಮನೆಯಾಗಿರುವವನು ಶ್ರೀಹರಿ. ಭಗವಂತನ ನಖದಿಂದ ಪವಿತ್ರ ಗಂಗಾನದಿ ಹುಟ್ಟಿ ಎಲ್ಲರನ್ನೂ ಪಾವನರನ್ನಾಗಿ ಮಾಡುವ ಹಾಗೆ ಭಗವಂತನ ಪಾದಸಂಪರ್ಕ ಪಡೆದ ಗೋಪಿಚಂದನ ಕೂಡ ಅಷ್ಟೇ ಪವಿತ್ರವಾಗಿದೆ. ಭಗವಂತನ ಸಂಪರ್ಕ ಪಡೆದ ನೀರು, ಕಲ್ಲು, ಮಣ್ಣು ಎಲ್ಲವೂ ಪವಿತ್ರವಾಗಿದೆ. ಹಾಗೆಯೇ ಯಾರು ಭಗವಂತನನ್ನು ಹೃದಯದಲ್ಲಿಟ್ಟುಕೊಳ್ಳುತ್ತಾರೋ ಅವರಿಗೆ ಸದಾ ನಿತ್ಯೋತ್ಸವವಾಗಿರುತ್ತದೆ ಎಂದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಬಾಳಗಾರ ಮಠದ ಕಿರಿಯ ಪೀಠಾಧಿಪತಿಗಳಾದ ಶ್ರೀ ಅಕ್ಷೋಭ್ಯ ರಾಮಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಶ್ರೀಗಂಧ ಸಂಸ್ಥೆ ಎಲ್ಲ ಸಮಯವನ್ನು ಸಮಾಜದ ಏಳ್ಗೆಗೆ ಶ್ರಮಿಸುತ್ತಿದೆ. ಈಶ್ವರಪ್ಪ ಅವರು ಮಾಜಿ ಉಪಮುಖ್ಯಮಂತ್ರಿಗಳಾಗಿ ಉತ್ತಮ ಕಾರ್ಯ ಮಾಡಿದ್ದಾರೆ. ಭಗವಂತ ಅವರಿಗೆ ಇನ್ನೂ ಹೆಚ್ಚಿನ ಉನ್ನತ ಸ್ಥಾನಗಳನ್ನು ನೀಡಲಿ ಎಂದು ಹಾರೈಸಿದರು.ಭಗವಂತ ಕೇಳಿದ್ದನ್ನೂ ಕೊಡುತ್ತಾನೆ. ಕೇಳದೆ ಇರುವ ಅನೇಕವನ್ನೂ ಕೊಡುತ್ತಾನೆ. ಇದು ಅಸರಂಭ. ಮುಂದೆ ಇಂಥಹ ಕಾರ್ಯಕ್ರಮ ಇಡೀ ಪ್ರಪಂಚಕ್ಕೆ ಪಸರಿಸಲಿ. ಭಗವಂತನ ಕೃಪೆಯಿಂದ ಅಭಿಪ್ರಾಯ ಸಾಮ್ಯ ಏರ್ಪಟಿದೆ. ಇಂದಿನ ವಿಧಾನಸಭೆ, ಲೋಕಸಭೆಗಳಲ್ಲಿ ಸೈಲ್ಸ್ ಇಲ್ಲ. ಆದರೆ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣದ ಸಭೆಯಲ್ಲಿ ಇಂತಹ ಸೈಲನ್ಸ್ ಇದೆ ಎಂದಾದರೆ ಇಂತಹ ಸೈಲನ್ಸ್ ವಿಶ್ವ ಸಂಸ್ಥೆಯಲ್ಲಿ ಆ ಮೂಲಕ ಇಡೀ ಪ್ರಪಂಚದಲ್ಲಿ ಶಾಂತಿ ನೆಲೆಸಬೇಕು ಎನ್ನುವುದೇ ಈ ಪಾರಸಯಣದ ಉದ್ಧೇಶ ಎಂದರು.

ಭಗವಂತನ್ನು ಸ್ತುತಿಸುವವರಿಗೆ ಶ್ರೀ ವಿಷ್ಣು ಎಂದಿಗೂ ದು:ಖ ಕೊಡಲಾರ. ಯಾವುದೇ ವ್ಯಕ್ತಿಯನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. ಸಮಗ್ರ ಹಿಂದೂಗಳನ್ನು ಒಂದೆಡೆ ತರಲು ವಿಷ್ಣು ಸಹಸ್ರನಾಮ ಪಾರಾಯಣದ ಉದ್ಧೇಶವಾಗಿದೆ. ಜೀವನದಲ್ಲಿ ತಾಳ್ಮೆಯೇ ತಪಸ್ಸು. ಜೀವನ ಪರ್ಯಂತ ಧೈರ್ಯಗಡೆದೆ ಪಾಲಿಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಮಹಿಳೆಯರು, ಮಹನೀಯರು ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದ್ದು ಬಹಳ ಸಂತಸ ತಂದಿದೆ. ಮುಂಬರುವ ದಿನಗಳಲ್ಲಿ ಅಲ್ಲಮ ಪ್ರಭು ಮೈದಾನದಲ್ಲಿ ೫೦೦೦ ಭಕ್ತರನ್ನು ಸೇರಿಸಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಹಿಂದೂ ಧರ್ಮದ ಎಲ್ಲ ಸಮಾಜದ, ಜಾತಿಯವರು ಆಗಮಿಸಿ ಪಾರಾಯಣ ಪಠಣ ಮಾಡಿದ್ದಾರೆ. ಮುಸಲ್ಮಾನರಿಗೆಲ್ಲ ಭಾರತ ಆಶ್ರಯ ತಾಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್‌ನ ಶಿವಮೊಗ್ಗ ಘಟಕ ಅಧ್ಯಕ್ಷರಾದ ಜೋಯ್ಸ್ ರಾಮಾಚಾರ್, ಶ್ರೀಗಂಧ ಕೋಶಾಧ್ಯಕ್ಷ ಕೆ.ಈ.ಕಾಂತೇಶ್, ಭಜನಾ ಪರಿಷತ್ ಅಧ್ಯಕ್ಷ ಸಂದೇಶ್ ಉಪಾಧ್ಯ, ಪ್ರಮುಖರಾದ ಅಚ್ಚುತ್‌ರಾವ್, ಕುಮಾರ್‌ಶಾಸ್ತ್ರೀ, ಶಬರೀಶ್ ಕಣ್ಣನ್, ಉಮೇಶ್ ಆರಾಧ್ಯ, ಮಂಜುನಾಥ್ ಶರ್ಮ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLocal NewsMalnad NewsPejawara MuttPejawara shri Vishwaprasanna ThirthaShimogaShivamoggaShivamogga NewsVishnu Sahasranama Global Trustಕುರುಕ್ಷೇತ್ರವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್ಶಿವಮೊಗ್ಗಶ್ರೀ ವಿಷ್ಣು ಸಹಸ್ರನಾಮ ಪಾರಾಯಣಶ್ರೀಕೃಷ್ಣಶ್ರೀಗಂಧ
Share197Tweet123Send
Previous Post

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿ ಸೆರೆ | ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

Next Post

ಮೀನು ಕೃಷಿ ಟೆಂಡರ್ ಪ್ರಕ್ರಿಯೆ ಅವೈಜ್ಞಾನಿಕ: ಮಲ್ಲೇಶಪ್ಪ ಕವುಲಿ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೀನು ಕೃಷಿ ಟೆಂಡರ್ ಪ್ರಕ್ರಿಯೆ ಅವೈಜ್ಞಾನಿಕ: ಮಲ್ಲೇಶಪ್ಪ ಕವುಲಿ ಆರೋಪ

ಮೀನು ಕೃಷಿ ಟೆಂಡರ್ ಪ್ರಕ್ರಿಯೆ ಅವೈಜ್ಞಾನಿಕ: ಮಲ್ಲೇಶಪ್ಪ ಕವುಲಿ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL