ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ವತಿಯಿಂದ ಸಾಂಸ್ಥಿಕ ಸಾಮಾಜಿಕ ಭದ್ರತಾ ಕಾರ್ಯಕ್ರಮದ ಅಡಿಯಲ್ಲಿ ಶ್ರೀರಾಂಪುರದ ಹಕ್ಕಿಪಿಕ್ಕಿ ಕ್ಯಾಂಪ್ ನಲ್ಲಿರುವ ಬಡಜನರಿಗೆ ಬೆಳಗಿನ ಉಪಹಾರ ಹಾಗೂ ಆಹಾರದ ಕಿಟ್ ಅನ್ನು ಜಿಪಂ ಸದಸ್ಯ ಕೆ.ಇ. ಕಾಂತೇಶ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಷ್ಟದಲ್ಲಿರುವ ಜನತೆಗೆ ಸದಾ ಸ್ಪಂದಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಕೆನರಾ ಬ್ಯಾಂಕ್ ಸಮಾಜದಲ್ಲಿರುವ ಎಲ್ಲಾ ವ್ಯಕ್ತಿಗಳಿಗೆ ನಿರಂತರವಾಗಿ ಸೇವೆ ನೀಡುತ್ತಾ ಬಂದಿದೆ. ಸರ್ಕಾರದ ಹಲವಾರು ಸ್ವಯಂ ಉದ್ಯೋಗ ಯೋಜನೆಯನ್ನು ಯುವಕರು ಉಪಯೋಗ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದರು.
ಕೆನರಾ ಬ್ಯಾಂಕ್ನ ರೀಜನಲ್ ಹೆಡ್ ಸಂದೀಪ ರಾವ್ ಮಾತನಾಡಿ, ಕೋವಿಡ್ನಂತಹ ಕಷ್ಟ ಸಂದರ್ಭದಲ್ಲಿ ನಮ್ಮ ಬ್ಯಾಂಕ್ ವತಿಯಿಂದ ಬಡಜನರಿಗೆ ಸಹಾಯ ನೀಡುವ ಉದ್ದೇಶದಿಂದ ಸಾಮಾಜಿಕ ಭದ್ರತಾ ಕಾರ್ಯಕ್ರಮದಡಿಯಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಬಡಜನರಿಗೆ ನಿರಂತರವಾಗಿ ಸಹಾಯ ಮಾಡುತ್ತಾ ಬಂದಿದೆ. ಅತ್ಯಂತ ಕಡಿಮೆ ಮೊತ್ತದ ಪ್ರೀಮಿಯಂ ಕಟ್ಟುವ ಮೂಲಕ, ಪಿಎಮ್ಜೆಬಿವೈ ಮತ್ತು ಪಿಎಮ್ಎಸ್ಬಿವೈ ಅಟಲ್ ಪೆನ್ಶನ್ ನಾ ಉಪಯೋಗ ಪಡೆದುಕೊಳ್ಳಲು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಜಿಎಂ ಪೂರ್ಣಿಮಾ ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post