No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂಬಿಗರ ಚೌಡಯ್ಯ ವಿಭಿನ್ನ ವ್ಯಕ್ತಿತ್ವ ಹೊಂದಿದ ಶ್ರೇಷ್ಠ ವಚನಕಾರ: ಶಾಸಕ ಚನ್ನಬಸಪ್ಪ

ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ

kalpa News by kalpa News
January 21, 2026
in ಶಿವಮೊಗ್ಗ
0
ವಿದಾಯ ಭಾಷಣ ಹೇಳಲು ಸಿದ್ಧರಾಮಯ್ಯ ವಿಶೇಷ ಅಧಿವೇಶನ ಕರೆದಿರಬೇಕು : ಶಾಸಕ ಚನ್ನಬಸಪ್ಪ ವ್ಯಂಗ್ಯ

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಂಬಿಗರ ಚೌಡಯ್ಯನವರು #Ambigara Chowdaiah ನೇರ, ನಿಷ್ಠೂರವಾದಿ ವಚನಕಾರರಾಗಿದ್ದರು ಮತ್ತು ನಿಜಶರಣ ಎಂದೇ ಪ್ರಸಿದ್ಧರಾಗಿದ್ದವರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಗಂಗಮತ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಚನಕಾರರಲ್ಲಿ ಅಂಬಿಗರ ಚೌಡಯ್ಯ ವಿಭಿನ್ನ ವ್ಯಕ್ತಿತ್ವ ಹೊಂದಿದ ಶ್ರೇಷ್ಠ ವಚನಕಾರರಾಗಿದ್ದರು. ತತ್ವಜ್ಞಾನಿಯೂ ಆಗಿದ್ದ ಅವರು, ಕಂಡದ್ದನ್ನು ಕಂಡಂತೆ ಬಿಚ್ಚು ಮನಸ್ಸಿನಿಂದ ನಿಷ್ಠೂರವಾದರೂ ಇಷ್ಟವಾಗಿ ಹೇಳುವ ವಚನಕಾರರಾಗಿದ್ದರು. ಅವರ ಕಾಯಕ ದೋಣಿ ಹುಟ್ಟುಹಾಕಿ ದಡ ಸೇರಿಸುವುದೇ ಆಗಿದ್ದರೂ ನಿಜವಾಗಿಯೂ ಅವರು ಭವಸಾಗರವೆಂಬ ಸಂಸಾರದ ದೋಣಿಯನ್ನು ಅರಿವಿನ ಹುಟ್ಟು ಹಾಕುವ ಮೂಲಕ ಹೇಗೆ ದಾಟಿಸಬೇಕು ಎಂಬುದನ್ನು ತಮ್ಮ ವಚನಗಳ ಮೂಲಕವೇ ತಿಳಿಸಿದವರು.

ಅನೇಕ ಮಹಾಪುರುಷರು ಪ್ರಾಂತ ಸ್ಮರಣಿಯರೇ ಆಗಿದ್ದಾರೆ. ಅವರ ಆದರ್ಶಗಳನ್ನು ನಾವು ಪಾಲಿಸಬೇಕು. ಅದರಲ್ಲೂ ವಚನಕಾರರು ಸಮಸಮಾಜದತ್ತ ನಮ್ಮನ್ನು ತೆಗೆದುಕೊಂಡು ಹೋದವರು. ತಮ್ಮ ವಚನಗಳ ಮೂಲಕ ಬದುಕಿನ ಸಾರವನ್ನು ಹೇಳಿದವರು. ನಾವೆಲ್ಲರೂ ಅವರ ಆದರ್ಶಗಳನ್ನು ಪಾಲಿಸೋಣ ಆ ಮೂಲಕ ಅವರ ಜಯಂತಿ ಕಾರ್ಯಕ್ರಮಕ್ಕೆ ಅರ್ಥ ನೀಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಕುರಿತು ವಿಶೇಷ ಉಪನ್ಯಾಸ ನೀಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಸ್.ಪಿ. ವಾಸುದೇವ್, ಅಂಬಿಗರ ಚೌಡಯ್ಯನವರು ಕಟುಮಾತುಗಳ ಮೂಲಕವೇ ಸಮಾಜವನ್ನು ಎಚ್ಚರಿಸಿದವರು. ಅವರ ವಚನಗಳು ನಿಷ್ಠೂರವಾಗಿದ್ದರೂ ಕೂಡ ಇಷ್ಟಪಡುವಂತೆ ಇದ್ದವು. ಅವರು ತಮ್ಮ ಹೆಸರನ್ನೇ ಅಂಕಿತನಾಮವನ್ನಾಗಿ ಇಟ್ಟುಕೊಂಡಿದ್ದರು. ಇವರ ವಚನಗಳು ನೇರ, ನಿರ್ಭೀತವಾಗಿದ್ದವು. 12ನೇ ಶತಮಾನದಲ್ಲಿ ಜನಿಸಿದ್ದ ಇವರು ರಾಣೆಬೆನ್ನೂರು, ತಾಲ್ಲೂಕಿನ ಚೌಡದಾನಪುರ ಎಂಬ ಗ್ರಾಮದಲ್ಲಿ ಜನಿಸಿದವರು. ಈ ಹೆಸರು ಬರಲು ಇವರು ದಾನಮಾಡಿದ್ದೇ ಕಾರಣವಾಗಿದೆ. ಅಂಬಿಗಾ ಎಂದರೆ ಭರವಸೆಯ ಬೆಳಕು. ಕೇವಲ ದೋಣಿಗೆ ಹುಟ್ಟುಹಾಕುವುದಲ್ಲ. ಸಾಂಸಾರಿಕ ಜೀವನಕ್ಕೂ ಹುಟ್ಟುಹಾಕುವುದನ್ನು ಅವರು ಹೇಳಿಕೊಟ್ಟವರು ಎಂದರು.

ಅವರ ವಚನಗಳಲ್ಲಿ ವೈಚಾರಿಕತೆ, ಕಾಲಜ್ಞಾನ, ಆಧ್ಯಾತ್ಮ, ಬೆಡಗು, ರೂಪಕಗಳು, ನೈತಿಕಮೌಲ್ಯ, ವಿಡಂಬನೆ, ನಿಷ್ಠೂರತೆ, ಟೀಕೆಗಳನ್ನು ಕಾಣಬಹುದಾಗಿದೆ. ಅದಕ್ಕೆ ಕಹಿಯಾದರೆ ಉದರಕ್ಕೆ ಸಿಹಿ ಎಂಬಂತೆ ಇವರ ವಿಚಾರಧಾರೆಗಳು ಇರುತ್ತಿದ್ದವು. ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಇವರ ವಚನಗಳು ಕಾರಣವಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗಂಗಾಮತ ಸಂಘದ ಅಧ್ಯಕ್ಷ ಡಿ.ಬಿ. ಕೆಂಚಪ್ಪ, ತಾಲ್ಲೂಕು ಅಧ್ಯಕ್ಷ ಎಸ್.ಬಿ. ಸತೀಶ್, ಜಿಲ್ಲಾ ಮೊಗವೀರ ಮಹಾಜನ ಸಂಘದ ಅಣ್ಣಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕ ಉಮೇಶ್ ಹೆಚ್., ಮಾಜಿ ಪಾಲಿಕೆ ಸದಸ್ಯ ಸುನೀತಾ ಅಣ್ಣಪ್ಪ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Ambigara ChowdaiahKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಅಂಬಿಗರ ಚೌಡಯ್ಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಸ್-ಕ್ಲಾಸ್ ಅವತಾರದಲ್ಲಿ ಝೈದ್ ಖಾನ್ | ಜ. 23ರಿಂದ ರಾಜ್ಯಾದ್ಯಂತ ‘ಕಲ್ಟ್’ ಅಬ್ಬರ

Next Post

ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿವಮೊಗ್ಗದ ಯುವಶಕ್ತಿ ಸಕ್ರೀಯ: ಸಾಹಿತಿ ಗಜಾನಂದ ಶರ್ಮಾ

kalpa News

kalpa News

Next Post
ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿವಮೊಗ್ಗದ ಯುವಶಕ್ತಿ ಸಕ್ರೀಯ: ಸಾಹಿತಿ ಗಜಾನಂದ ಶರ್ಮಾ

ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿವಮೊಗ್ಗದ ಯುವಶಕ್ತಿ ಸಕ್ರೀಯ: ಸಾಹಿತಿ ಗಜಾನಂದ ಶರ್ಮಾ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL