No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅನವರತ ಕಲಿಕೆಗೆ ವಿಪುಲ ಅವಕಾಶ ಡಾ. ರಂಗಸ್ವಾಮಿ ಅಭಿಮತ

ಪೆಸಿಟ್‌ನಲ್ಲಿ 18ನೇ ಬ್ಯಾಚ್‌ನ ಶಿಷ್ಯೋಪನಯನ ಪ್ರಾರಂಭೋತ್ಸವ ಕಾರ್ಯಕ್ರಮ

kalpa News by kalpa News
October 5, 2024
in ಶಿವಮೊಗ್ಗ
0
ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅನವರತ ಕಲಿಕೆಗೆ ವಿಪುಲ ಅವಕಾಶ ಡಾ. ರಂಗಸ್ವಾಮಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಂತರರಾಷ್ಟ್ರೀಯ ಮಟ್ಟದಲ್ಲಿ ಒಂದು ದೇಶವು ಸರ್ವತೋಮುಖ ಸಾರ್ವಕಾಲಿಕ ಅಭಿವೃದ್ಧಿಯನ್ನು ಹೊಂದಲು ಯುವ ಸಮೂಹವು ತನ್ನದೇ ಆದ ಅಸಾಧಾರಣ ಕೊಡುಗೆಗಳನ್ನು ನೀಡುವುದು ಅತ್ಯವಶ್ಯಕವಾಗಿದೆ ಎಂದು ಬೆಳಗಾವಿ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ. ಇ. ರಂಗಸ್ವಾಮಿ ನುಡಿದರು.

ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ೧೮ನೇ ಬ್ಯಾಚ್‌ನ ಪ್ರಥಮ ವರ್ಷದ ಇಂಜಿನಿಯರಿಂಗ್ ಕೋರ್ಸ್ ನ ಶಿಷ್ಯೋಪನಯನ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಇಂಜಿನಿಯರಿಂಗ್ ತಾಂತ್ರಿಕ ಶಿಕ್ಷಣವು ವಿದ್ಯಾರ್ಥಿ ಸಮೂಹದಲ್ಲಿ ಸೃಷ್ಟಿಸುವ ಪ್ರಾಯೋಗಿಕ ಚಾಣಾಕ್ಷತನ, ಚಾಕಚಕ್ಯತೆ ಮತ್ತು ನವ ನವೀನ ರೀತಿಯಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಾರ್ಯಗತರೂಪಕ್ಕೆ ತರುವ ಮನಸ್ಥಿತಿಯನ್ನು ತ್ವರಿತ ಗತಿಯಲ್ಲಿ ಸೃಷ್ಟಿಸುವ ಕಾರ್ಯತತ್ಪರತೆಯ ಬಗ್ಗೆ ಪ್ರಯತ್ನಿಸಬೇಕೆಂದು ವಿದ್ಯಾರ್ಥಿ ಹಾಗೂ ಪೋಷಕರಿಗೆ ಸಲಹೆ ನೀಡಿದರು.

ಪ್ರಸಕ್ತ ಕಾಲಘಟ್ಟದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇಂಟರ್ನೆಟ್ ಕ್ಷೇತ್ರದ ಹಾನಿಕಾರಕ ತಂತ್ರಜ್ಞಾನಗಳ ವಿಷವರ್ತುಲದಲ್ಲಿ ಸಿಲುಕಿಕೊಂಡು ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿ ಸಾಧನೆಗಳನ್ನು ಮಾಡುವ ಪ್ರಯತ್ನಗಳ ಕಡೆಗೆ ಗಮನಹರಿಸುವುದನ್ನು ಕಡಿಮೆ ಮಾಡಿರುವುದು ಉತ್ತಮವಾದ ಬೆಳವಣಿಗೆಯಲ್ಲ ಎಂದು ನುಡಿದರು.
ಭಾರತ ದೇಶದಲ್ಲಿ ಕೇಂದ್ರ ಸರ್ಕಾರವು ಕಾರ್ಯಗತರೂಪಕ್ಕೆ ತಂದ ಮೇಡ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ ಭಾರತ ಈ ಬಗೆಯ ಹಲವು ವಿನೂತನ ಪರಿಕಲ್ಪನೆಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ದೇಶದ ಹಾಗೂ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡುವ ಮೂಲಕ ಯಶಸ್ಸನ್ನು ಸಾಧಿಸುವಂತೆ ಕೆಲವು ಐತಿಹಾಸಿಕ ಉದಾಹರಣೆಗಳನ್ನು ಉದಾಹರಿಸುವ ಮೂಲಕ ವಿದ್ಯಾರ್ಥಿಗಳ ಮನಮುಟ್ಟುವಂತೆ ಸೂಚ್ಯವಾಗಿ ನುಡಿದರು.

ಪಿಇಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ ಆರ್ ಪಿಇಎಸ್ ಟ್ರಸ್ಟ್ ನ ಸ್ಥಾಪನೆ, ನಡೆದು ಬಂದ ಹಾದಿ ಹಾಗೂ ವಿದ್ಯಾರ್ಥಿಗಳು ಅಸಾಧಾರಣ ಸಾಧನೆಯನ್ನು ಮಾಡಲು ಹಲವು ಬಗೆಯ ವ್ಯಕ್ತಿತ್ವಗಳು ತಮ್ಮದೇ ಆದ ಪಾತ್ರವನ್ನು ನಿರ್ವಹಿಸಲಿವೆ ಎಂದು ನುಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯು ದೈಹಿಕವಾಗಿ, ಮಾನಸಿಕವಾಗಿ, ಆಧ್ಯಾತ್ಮಿಕವಾಗಿ ವೈವಿಧ್ಯಪೂರ್ಣ ಕಲಾಕುಶಲತೆಗಳನ್ನು ಕರಗತ ಮಾಡಿಕೊಳ್ಳುವಲ್ಲಿ ಪ್ರಯತ್ನಿಸಬೇಕೆಂದು ಮನಮುಟ್ಟುವಂತೆ ನುಡಿದರು.

Also read: ಹದಿಹರಿಯದ ಚಂಚಲ ಮನಸ್ಸನ್ನು ದಾಟಿ ಓದುವ ಕಡೆ ಗಮನಹರಿಸಿ: ನಟಿ ಉಮಾಶ್ರೀ ಕಿವಿಮಾತು

ಶೈಕ್ಷಣಿಕವಾಗಿ ತಂತ್ರಜ್ಞಾನಗಳ ಸಂಪೂರ್ಣ ಮಾಹಿತಿ, ಕಲಿಕಾ ಮನೋಭಾವ ಮತ್ತು ಅದ್ವಿತೀಯ ಸಾಧನೆಗಳನ್ನು ಮಾಡಲು ಅತ್ಯವಶ್ಯವಿರುವ ದೈಹಿಕ ಹಾಗೂ ಮಾನಸಿಕ ಪರಿಪೂರ್ಣತೆ, ಸಕ್ರಿಯತೆಯನ್ನು ಕರಗತ ಮಾಡಿಕೊಳ್ಳುವಲ್ಲಿ ಅನವರತ ಶ್ರಮಿಸಬೇಕೆಂದು ವಿದ್ಯಾರ್ಥಿಗಳ ಮನಮುಟ್ಟುವಂತೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಯುವರಾಜು ಬಿ ಎನ್ ಉಪಸ್ಥಿತರಿದ್ದ ಅತಿಥಿಗಳು ಹಾಗೂ ಸಭಿಕ ವೃಂದವನ್ನು ಸ್ವಾಗತಿಸಿದರು. ಪ್ರಾಂಶುಪಾಲರು ತಮ್ಮ ಸ್ವಾಗತ ಭಾಷಣದಲ್ಲಿ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ೨೦೦೭ ನೇ ಇಸವಿಯಲ್ಲಿ ಉದ್ಘಾಟನೆಗೊಂಡ ಸುಸಂದರ್ಭವನ್ನು ನೆನಪಿಸಿಕೊಳ್ಳುತ್ತಾ ೧೮ ವರ್ಷಗಳ ಯಶಸ್ವಿ ಪೂರ್ಣ ಪಯಣದ ವಿಶ್ಲೇಷಣಾತ್ಮಕ ವರದಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಪಿಇಎಸ್‌ಐಟಿಎಂನಲ್ಲಿ ಇರುವ ಇಂಜಿನಿಯರಿಂಗ್ ಪದವಿಗಳ ಮುಖ್ಯಸ್ಥರು ಹಾಗೂ ಬೋಧಕ ಸಿಬ್ಬಂದಿಗಳ ಪಕ್ಷಿ ನೋಟ ವಿವರಣೆಯ ಜೊತೆ ಜೊತೆಗೆ ಸಾಧನಾತ್ಮಕ ಪ್ರಯತ್ನಗಳ ಕಿರು ಪರಿಚಯವನ್ನು ಉಪಸ್ಥಿತರಿದ್ದ ವಿದ್ಯಾರ್ಥಿ ಹಾಗೂ ಪೋಷಕವೃಂದಕ್ಕೆ ನೀಡಿದರು. ಶೈಕ್ಷಣಿಕವಾಗಿ ಪ್ರಚಲಿತದಲ್ಲಿರುವ ಮೆಂಟರಿಂಗ್ ಸಿಸ್ಟಮ್, ವಿದ್ಯಾರ್ಥಿಗಳ ಹಾಜರಾತಿ ಪರಿವೀಕ್ಷಣಾ ವ್ಯವಸ್ಥೆ ಮತ್ತು ವಿವಿಧ ರೀತಿಯ ಸೌಲಭ್ಯಗಳ ಬಗೆಗಿನ ಹಲವು ಉಪಯುಕ್ತ ಮಾಹಿತಿಯನ್ನು ಪೋಷಕ ವೃಂದಕ್ಕೆ ನೀಡುವುದರ ಜೊತೆ ಜೊತೆಗೆ; ವಿದ್ಯಾರ್ಥಿಗಳ ಅದ್ವಿತೀಯ ಬೆಳವಣಿಗೆಯಲ್ಲಿ ಪೋಷಕರು ತಮ್ಮದೇ ಆದ ವೈಶಿಷ್ಟ್ಯ ಪೂರ್ಣ ಕೊಡುಗೆಗಳನ್ನು ನೀಡುವಂತೆ ಪ್ರೇರೇಪಿಸಿದರು.

ಈ ಸುಸಂದರ್ಭದಲ್ಲಿ ಶೈಕ್ಷಣಿಕವಾಗಿ ಅಸಾಧಾರಣ ಸಾಧನೆಗಳನ್ನು ಮಾಡಿದ ಪ್ರತಿಯೊಂದು ವಿಭಾಗದ ವಿದ್ಯಾರ್ಥಿಗಳನ್ನು ಮುಖ್ಯ ಅತಿಥಿಗಳು ಸನ್ಮಾನಿಸುವ ಮೂಲಕ ಉಪಸ್ಥಿತರಿದ್ದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದರು.
ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ್ ಹೆಚ್ ಆರ್ ವಂದಿಸಿದರು. ಪಿಇಎಸ್‌ಐಟಿಎಂನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಶ್ರೀಗೌರಿ ಪ್ರಾರ್ಥಿಸಿದರು. ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮಷೀನ್ ಲರ್ನಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಲೈಕ್ವಿನ್ ಥಾಮಸ್ ನಿರೂಪಿಸಿದರು. ಈ ಪ್ರಾರಂಭೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ – ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಷನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕಾನಿಕಲ್, ಸಿವಿಲ್, ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮಷೀನ್ ಲರ್ನಿಂಗ್, ಕಂಪ್ಯೂಟರ್ ಸೈನ್ಸ್ – ಡಿಸೈನ್, ಕಂಪ್ಯೂಟರ್ ಸೈನ್ಸ್ ಇನ್ ಡೇಟಾ ಸೈನ್ಸ್ ಮತ್ತು ಕಂಪ್ಯೂಟರ್ ಇಂಜಿನಿಯರಿಂಗ್ ವಿಭಾಗಗಳ 1400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕ ವೃಂದ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/02/VID-20240229-WA0026.mp4

                                               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹದಿಹರಿಯದ ಚಂಚಲ ಮನಸ್ಸನ್ನು ದಾಟಿ ಓದುವ ಕಡೆ ಗಮನಹರಿಸಿ: ನಟಿ ಉಮಾಶ್ರೀ ಕಿವಿಮಾತು

Next Post

ಮೈಸೂರು ದಸರಾ ಉದ್ಘಾಟನಾ ಸಮಾರಂಭ ರಾಜಕೀಯ ಭಾಷಣಕ್ಕೆ ದುರ್ಬಳಕೆ: ಬಿಜೆಪಿ ಖಂಡನೆ

kalpa News

kalpa News

Next Post
ಮೈಸೂರು ದಸರಾ ಉದ್ಘಾಟನಾ ಸಮಾರಂಭ ರಾಜಕೀಯ ಭಾಷಣಕ್ಕೆ ದುರ್ಬಳಕೆ: ಬಿಜೆಪಿ ಖಂಡನೆ

ಮೈಸೂರು ದಸರಾ ಉದ್ಘಾಟನಾ ಸಮಾರಂಭ ರಾಜಕೀಯ ಭಾಷಣಕ್ಕೆ ದುರ್ಬಳಕೆ: ಬಿಜೆಪಿ ಖಂಡನೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL