ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿನ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಅವರು ಮಹತ್ವದ ಸಭೆ ನಡೆಸಿದ್ದು, ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ಯೋಜನೆಗಳ ಕುರಿತಾಗಿ ಚರ್ಚೆ ನಡೆದಿದೆ.

Also read: ದರ್ಶನ್ ಪ್ರಕರಣ | ಎಸ್’ಪಿಪಿ ಬದಲಾವಣೆ ವದಂತಿ | ಸಿದ್ದರಾಮಯ್ಯ ಬಿಗ್ ಸ್ಟೇಟ್ಮೆಂಟ್
ಯಾವೆಲ್ಲಾ ಯೋಜನೆಗಳ ಚರ್ಚೆಯಾಯ್ತು?
- ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೆ ಮಾರ್ಗದ ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಸಾಗಿರುವ ಕುರಿತು ಮಾಹಿತಿ ಸಂಗ್ರಹ.
- ಭದ್ರಾವತಿ ಸೇರಿದಂತೆ ಹೊಸದಾಗಿ ಅನುಮೋದನೆ ದೊರಕಿರುವ ರೈಲ್ವೇ ಮೇಲ್ಸೇತುವೆ ಮತ್ತು ರೈಲ್ವೇ ಕೆಳಸೇತುವೆ ಕಾಮಗಾರಿ ಸಾಗಿರುವ ಹಂತದ ಕುರಿತು ಮಾಹಿತಿ ಸಂಗ್ರಹ.
- ಬೀರೂರು-ಶಿವಮೊಗ್ಗ ರೈಲ್ವೆ ಡಂಬಲಿAಗ್ ಯೋಜನೆ ಶೀಘ್ರವಾಗಿ ಪ್ರಾರಂಭಿಸುವ ಕುರಿತು ಮಹತ್ವದ ಚರ್ಚೆ.
- ಕೋಟೆ ಗಂಗೂರಿನಲ್ಲಿ ನಡೆಯುತ್ತಿರುವ ಕೋಚಿಂಗ್ ಡಿಪೋ ಕಾಮಗಾರಿ ಸಾಗಿರುವ ಹಂತದ ಕುರಿತು ಮಾಹಿತಿ ಪಡೆದು ಒಂದೇ ಭಾರತ್ ರೈಲಿಗೆ ಅನುಕೂಲವಾಗುವಂತೆ ಯೋಜನೆ ಸಿದ್ಧಪಡಿಸುವಂತೆ ಸೂಚನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post