ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ-ಬೆಂಗಳೂರು ನಡುವಿನ ರೈಲ್ವೆ #Shivamogga-Banglore Train ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ, #MP B Y Raghavendra ಶೀಘ್ರದಲ್ಲೇ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ ಎಂದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ವಂದೇ ಭಾರತ್ ರೈಲು #Vande Bharath Train ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆಗೆ ಮನವಿ ಮಾಡಲಾಗಿತ್ತು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಶಿವಮೊಗ್ಗ-ಯಶವಂತಪುರ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ ಎಂದಿದ್ದಾರೆ.

ಶಿವಮೊಗ್ಗ-ಚೆನ್ನೈ #Shivamogga-Chennai ನಡುವೆ ನೂತನ ಸೆಮಿಫಾಸ್ಟ್ ರೈಲು ಸಂಚಾರಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ #Ashwini Vaishnav ಹಸಿರು ನಿಶಾನೆ ತೋರಿದ್ದಾರೆ ಎಂದರು.
ಎಂದಿನಿಂದ ಆರಂಭ? ಸಮಯವೇನು?
ಈ ನೂತನ ರೈಲು ಸಂಚಾರ ಆರಂಭಕ್ಕೆ ದಿನಾಂಕ ಇನ್ನೂ ನಿಗದಿಯಾಗಬೇಕಿದ್ದು, ಅತಿ ಶೀಘ್ರದಲ್ಲೇ ಸಂಚಾರ ಆರಂಭವಾಗಲಿದೆ.
Also read: ಶಿವಮೊಗ್ಗಕ್ಕೆ ಮತ್ತೊಂದು ಹೊಸ ರೈಲು | ಎಲ್ಲಿಗೆ ಸಂಚಾರ? ಸಮಯ ಏನು? ಎಂದಿನಿಂದ ಆರಂಭ?

ಬೆಂಗಳೂರು ಪೇಟೆ, ಚೋಳಾರು ಗುಂಟೆಯ ಮೇಲೆ ಚೆನ್ನೈಗೆ ತಲುಪಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post