ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಠೀಕರಣ ನೀತಿಯಿಂದಾಗಿ ದೇಶವಿರೋಧಿಗಳಿಗೆ ಈಗ ನೈತಿಕ ಸ್ಥೈರ್ಯ ಬಂದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಕಿಡಿ ಕಾರಿದರು.
ನರೇಂದ್ರ ಮೋದಿ PM Narendra Modi ಅವರು ಮತ್ತೆ ಪ್ರಧಾನಿಯಾಗಲಿ ಎಂದು ನಗರದಲ್ಲಿ ಆಯೋಜಿಸಲಾಗಿರುವ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾತನಾಡಿದರು.
ವಿಧಾನಸೌಧದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ವಿಚಾರದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆ ರೀತಿ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ನಿರಂತರವಾಗಿ ಹೋರಾಡಿತು. ರಾಜಕಾರಣ ಬದಿಗಿಟ್ಟು ದೇಶವಿರೋಧಿಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ವರದಿಯಲ್ಲಿ ಸತ್ಯ ಹೊರಬಂದಿದೆ ಎಂದರು.
Also read: ಮೋದಿಯನ್ನು ಕಟ್ಟಿಹಾಕುವ ಸಂಚು ಫಲಿಸಲ್ಲ, ಮತ್ತೆ ಗೆಲುವಿಗಾಗಿ ಮಹಾಯಾಗ: ಸಂಸದ ರಾಘವೇಂದ್ರ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತುಷ್ಠೀಕರಣದಿಂದಾಗಿ ಇಂತಹ ಕೃತ್ಯ ಮಾಡುವವರಿಗೆ ನೈತಿಕ ಸ್ಥೈರ್ಯ ಬಂದಿದೆ. ಈಗ ಸತ್ಯಾಂಶ ಹೊರಬಂದಿದೆ. ಈಗಲಾದರೂ ಇಂತಹ ಕೃತ್ಯಗಳು ನಡೆಯದಂತೆ ರಾಜ್ಯ ಸರ್ಕಾರ ತಡೆಯಬೇಕು ಎಂದು ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post