Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಏ.22: ರೇಡಿಯೋ ಶಿವಮೊಗ್ಗಕ್ಕೆ ವರ್ಷದ ಸಡಗರ-ಲಕ್ಷಾಂತರ ಕೇಳುಗರ ಹೃನ್ಮನ ತಲುಪಿದ ಸಾಧನೆ

April 20, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮಲೆನಾಡಿನ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರವಾದ ರೇಡಿಯೋ ಶಿವಮೊಗ್ಗ 90.8 ಎಫ್ ಎಂ ನಲ್ಲಿ ಕಾರ್ಯಕ್ರಮ ಪ್ರಸಾರ ಆರಂಭವಾಗಿ ಏ.22ಕ್ಕೆ ಒಂದು ವರ್ಷ ಪೂರೈಸುತ್ತಿದೆ. ಈ ಪಯಣದಲ್ಲಿ ಸಹಕಾರ ನೀಡಿದ ಎಲ್ಲಾ ಕೇಳುಗರಿಗೆ, ಜಾಹೀರಾತುದಾರರು ಹಾಗೂ ಹಿತೈಷಿಗಳಿಗೆ ಬಾನುಲಿ ಕೇಂದ್ರದ ನಿರ್ದೇಶಕರಾದ ಜಿ.ಎಲ್. ಜನಾರ್ದನ್ ಆತ್ಮೀಯ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಿಡ್ಸ್ (ಕೊಡಚಾದ್ರಿ ಡೆವೆಲ್ ಪ್ಮೆಂಟ್ ಸೊಸೈಟಿ)ಯ ಕನಸಿನ ಯೋಜನೆ ಈ ಬಾನುಲಿ ಕೇಂದ್ರವಾಗಿದೆ. ಈ ಒಂದು ವರ್ಷದ ಪಯಣದಲ್ಲಿ ಲಕ್ಷಾಂತರ ಕೇಳುಗರ ಹೃನ್ಮನಗಳನ್ನು ರೇಡಿಯೋ ತಲುಪಿದೆ. ದಿನದ 24 ತಾಸೂ ರೇಡಿಯೋ ಪ್ರಸಾರವಾಗುತ್ತಿರುವುದು ವಿಶೇಷವಾಗಿದೆ. ರೇಡಿಯೋ ಶಿವಮೊಗ್ಗ ಆಪ್ ನ ಮುಖಾಂತರ ಜಗತ್ತಿನಾದ್ಯಂತ 176 ರಾಷ್ಟ್ರಗಳಲ್ಲಿ ಕೇಳುಗ ವಲಯವನ್ನು ವಿಸ್ತರಿಸಿಕೊಂಡಿರುವುದು ನಮ್ಮ ರೇಡಿಯೋದ ಹೆಮ್ಮೆಯಾಗಿದೆ. ಕೇಳುಗರ ವಿನಂತಿಯ ಮೇರೆಗೆ, ಅನೇಕಾನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಸಮುದಾಯ ಬಾನುಲಿಯಾಗಿ ತನ್ನ ಛಾಪು ಮೂಡಿಸುತ್ತಿರುವುದು ಸಂತಸ ತಂದಿದೆ ಎಂದರು.
ಸಾಂಪ್ರದಾಯಿಕ ಶಿಕ್ಷಣ ವ್ಯವಸ್ಥೆಯ ಹೊರತಾದ ಸಮಗ್ರ ಶಿಕ್ಷಣವನ್ನು ನಮ್ಮ ಬಾನುಲಿ ಕೇಂದ್ರ ಗುರುತಿಸಿ, ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಶಿಕ್ಷಣ ಎಂಬುದನ್ನು ಇಲ್ಲಿ ಮೂರು ಸ್ತರದಲ್ಲಿ ನಾವು ನೋಡುತ್ತಿದ್ದೇವೆ. ಮೊದಲನೆಯದಾಗಿ ಶಾಲಾ ಶಿಕ್ಷಣದ ಹಂತ, ಎರಡನೆಯದಾಗಿ ಉನ್ನತ ಶಿಕ್ಷಣದ ಹಂತ, ಮೂರನೆಯದಾಗಿ ಸಮುದಾಯ ಶಿಕ್ಷಣದ ಹಂತ. ನಮ್ಮೆಲ್ಲ ಕಾರ್ಯಕ್ರಮಗಳ ಒಟ್ಟೂ ಉದ್ದೇಶ ಹೀಗೆ ಮೂರು ಹಂತದಲ್ಲಿ ಶಿಕ್ಷಣವನ್ನು ನೀಡಿ, ಸುಸ್ಥಿರ ಬದುಕಿಗೆ ವೇದಿಕೆಯನ್ನಾಗಿ ರೂಪಿಸಿ, ಭರವಸೆಯ ಭವಿಷ್ಯಕ್ಕಾಗಿ ಬಾನುಲಿಯಲ್ಲಿ ಕಾರ್ಯಕ್ರಮಗಳನ್ನು ನೀಡುವುದಾಗಿದೆ ಎಂದಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ವಿವಿಧ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿದೆ. ಕೃಷಿ, ಅರಣ್ಯ, ತೋಟಗಾರಿಕೆ, ಪಶುಸಂಗೋಪನೆ, ವಾಣಿಜ್ಯ, ಶಿಕ್ಷಣ, ಕಲೆ, ಸಂಸ್ಕೃತಿ, ಸ್ಥಳೀಯ ಭಾಷೆಗಳು, ಪರಿಸರ, ಗುಡಿಕೈಗಾರಿಕೆ, ಬ್ಯಾಂಕಿಂಗ್, ಆರೋಗ್ಯ, ಕೈಗಾರಿಕೆ, ಸೇವಾ ಕ್ಷೇತ್ರ, ಡಿಜಿಟಲ್ ತಂತ್ರಜ್ಞಾನ ಇನ್ನಿತರ ವಿಷಯಾಧಾರಿತ ಕಾರ್ಯಕ್ರಮಗಳನ್ನು ಜನರಿಗೆ ನೀಡುತ್ತಿದೆ. ಶ್ರವಣ ಮಾಧ್ಯಮದ ಎಲ್ಲಾ ಸಾಧ್ಯತೆಗಳನ್ನೂ ಒಳಗೊಳ್ಳುವುದು ನಮ್ಮ ಆಶಯವಾಗಿದೆ. ನಮ್ಮ ಆಪ್‌ ನ ಪಾಡ್‌ಕಾಸ್ಟ್ ಮೂಲಕ ಮುಖ್ಯ ಕಾರ್ಯಕ್ರಮಗಳ ಆಡಿಯೋವನ್ನು ಕೇಳುಗರು ತಮಗೆ ಬೇಕೆಂದಾಗ ಮತ್ತೆ ಮತ್ತೆ ಕೇಳಿಸಿಕೊಳ್ಳುವ ಅವಕಾಶವನ್ನು ರೇಡಿಯೋ ಶಿವಮೊಗ್ಗ ಎಫ್.ಎಂ. ಒದಗಿಸುತ್ತದೆ ಎಂದಿದ್ದಾರೆ.
ಒಂದು ವರ್ಷದ ಸವಿ ಸಂದರ್ಭಕ್ಕೆಂದು ಆಹ್ವಾನಿತ ಶ್ರೋತೃಗಳು, ಗಣ್ಯಮಾನ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಸಮ್ಮುಖದಲ್ಲಿ ರೇಡಿಯೋ ಹಬ್ಬವನ್ನು ಆಯೋಜಿಸಲಾಗಿದೆ. ಇವರಿಂದ ವರ್ಷದ ಹಿನ್ನೋಟ, ಪ್ರತಿಸ್ಫಂದನೆ ಹಾಗೂ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಒಗ್ಗೂಡಿಸುವ ಚಿಂತನ – ಮಂಥನ ಇದಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಬೃಹತ್ ಮಟ್ಟದಲ್ಲಿ ಆಯೋಜಿಸುವ ಚಿಂತನೆ ಇದೆ. ಇದಕ್ಕೆ ನಮ್ಮೆಲ್ಲ ಕೇಳುಗರ, ಹಿತೈಷಿಗಳ ಸಹಕಾರ ಮಾರ್ಗದರ್ಶನವೇ ಮುಖ್ಯವಾಗಿದೆ. ಜನ ಸಮುದಾಯಗಳು ಅಪೇಕ್ಷಿಸಿದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲೂ ರೂಪಿಸಲಾಗುವುದು ಎಂದರು.

Also read: ಗ್ಯಾಂಗ್’ಸ್ಟರ್ ಅತೀಕ್ ಅಹ್ಮದ್ ಸಮಾಧಿ ಮೇಲೆ ರಾಷ್ಟ್ರಧ್ವಜ: ಕಾಂಗ್ರೆಸ್ ನಾಯಕನ ಬಂಧನ

ನಮ್ಮ ರೇಡಿಯೋ ಶಿವಮೊಗ್ಗದ ಒಂದು ವರ್ಷದ ಪಯಣದಲ್ಲಿ ಅನೇಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಶಿಕ್ಷಣ ತಜ್ಞರು, ಪರಿಸರ ವಿಜ್ಞಾನಿಗಳು, ಜನಪದ ತಜ್ಞರು, ರೈತವಿಜ್ಞಾನಿಗಳು ನಿರಂತರವಾಗಿ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಪಾಠಗಳು, ಶಿಕ್ಷಕರಿಗೆ ಅಗತ್ಯವಾದ ವಿದ್ಯಾಗಮ ಆನ್ ಲೈನ್ ತರಬೇತಿ ಕಾರ್ಯಕ್ರಮಗಳು ನಮ್ಮ ರೇಡಿಯೋದಲ್ಲಿ ಬಿತ್ತರವಾಗಿದೆ. ವಿಶೇಷವಾಗಿ ರೇಡಿಯೋ ಮುಖಾಂತರ ಬದುಕಿಗಾಗಿ ರಂಗಪಾಠಗಳನ್ನು ಬಿತ್ತರಿಸುತ್ತಾ,ಅಭಿನಯದ ಕುರಿತಾಗಿ ದೂರಶಿಕ್ಷಣದ ಸರ್ಟಿಫಿಕೇಟ್ ಕೋರ್ಸ್ ನ್ನು ನಡೆಸಲಾಗಿದೆ. ವಿವಿಧ ದಿನಾಚರಣೆಗಳಿಗೆ ಕೂಡಾ ಕಾರ್ಯಕ್ರಮಗಳನ್ನು ನಡೆಸಿದೆ. ವೈದ್ಯರ ಸಂದರ್ಶನ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠರು, ಶಾಸಕರು, ಮಹಾಪೌರರ ಜೊತೆಗೆ ನೇರಪ್ರಸಾರದ ಸಂವಾದ ನಡೆಸಲಾಗಿದೆ. ತೃತೀಯ ಲಿಂಗಿ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ, ಹಿರಿಯ ಚಲನಚಿತ್ರ ಕಲಾವಿದ ರಮೇಶ್ ಭಟ್ ಅವರೊಂದಿಗೆ ಸಂದರ್ಶನ ನಡೆಸಲಾಗಿದೆ. ಪಂಚಾಯತ್ ರಾಜ್ ಸಚಿವಾಲಯದ ಸಹಯೋಗದೊಂದಿಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಜನರ ಆರೋಗ್ಯ ಮತ್ತು ನೈರ್ಮಲ್ಯದ ಕುರಿತಾದ ವಿಶೇಷ ಕಾರ್ಯಕ್ರಮಗಳು ಕೂಡಾ ಪ್ರಸಾರವಾಗುತ್ತಿದೆ. ದೇಶದ ಚಾರಿತ್ರಿಕ ಪುಟದಲ್ಲಿ ಸದಾ ರಾರಾಜಿಸುವ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಬರಹಗಳು- ಚಿಂತನೆಗಳನ್ನು ಪ್ರತಿದಿನ ರೇಡಿಯೋದಲ್ಲಿ ಪ್ರಸಾರ ಮಾಡುತ್ತಿರುವುದು ಮತ್ತೊಂದು ಸಂತಸದ ಸಂಗತಿಯಾಗಿದೆ.

ಜಿ.ಎಲ್. ಜನಾರ್ದನ್, ನಿಲಯದ ನಿರ್ದೇಶಕರು, ರೇಡಿಯೋ ಶಿವಮೊಗ್ಗ 90.8 ಎಫ್ ಎಂ. ಶಿವಮೊಗ್ಗ
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗ್ಯಾಂಗ್’ಸ್ಟರ್ ಅತೀಕ್ ಅಹ್ಮದ್ ಸಮಾಧಿ ಮೇಲೆ ರಾಷ್ಟ್ರಧ್ವಜ: ಕಾಂಗ್ರೆಸ್ ನಾಯಕನ ಬಂಧನ

Next Post

ಎ.28ರಿಂದ ಮೇ 7ರವರೆಗೂ ರಾಜ್ಯದಲ್ಲಿ ಪ್ರಧಾನಿ ಮೋದಿ 7 ದಿನ ಪ್ರಚಾರ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಎ.28ರಿಂದ ಮೇ 7ರವರೆಗೂ ರಾಜ್ಯದಲ್ಲಿ ಪ್ರಧಾನಿ ಮೋದಿ 7 ದಿನ ಪ್ರಚಾರ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!