ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಬಂದ ಕಾರಣಕ್ಕೆ ಪ್ಯಾರಾ ಮೆಡಿಕಲ್ ಕಾಲೇಜಿನ ಮೂವರು ಹಿಂದೂ ವಿದ್ಯಾರ್ಥಿಗಳ ಮೇಲೆ ಭದ್ರಾವತಿಯಲ್ಲಿ ಶುಕ್ರವಾರ ಗುಂಪೊಂದು ಹಲ್ಲೆ ನಡೆಸಿದೆ.
ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ವಿದ್ಯಾರ್ಥಿ ಹಾಗೂ ಖಲಂದರ್ ನಗರದ ಮುಸ್ಲಿಂ ವಿದ್ಯಾರ್ಥಿನಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸಹಪಾಠಿಗಳು. ವಿದ್ಯಾರ್ಥಿನಿಯ ಅಕ್ಕನಿಗೆ ಅಪಘಾತವಾಗಿರುವ ಬಗ್ಗೆ ಕಾಲೇಜಿನಲ್ಲಿದ್ದ ವೇಳೆ ಮಾಹಿತಿ ಲಭಿಸಿದೆ. ಹೀಗಾಗಿ ವಿದ್ಯಾರ್ಥಿಯು ತನ್ನ ಸ್ನೇಹಿತರಿಂದ ಬೈಕ್ ಪಡೆದು ಆಕೆಯನ್ನು ಖಲಂದರ್ ನಗರದ ಮನೆಗೆ ಕರೆದುಕೊಂಡು ಬಂದಿದ್ದ. ವಾಪಸ್ ತೆರಳುವಾಗ ಅಲ್ಲಿನ ಝೆಂಡಾ ಕಟ್ಟೆಯ ಬಳಿ ಗುಂಪೊಂದು ವಿದ್ಯಾರ್ಥಿಯನ್ನು ಅಡ್ಡಗಟ್ಟಿದೆ. ಆತನ ಹೆಸರು ಕೇಳಿದ ಗುಂಪು, ’ನಮ್ಮ ಸಮುದಾಯದ ಹುಡುಗಿಯನ್ನು ಏಕೆ ಬೈಕ್ನಲ್ಲಿ ಕೂರಿಸಿಕೊಂಡು ಬಂದೆ’ ಎಂದು ಪ್ರಶ್ನಿಸಿ ಹಲ್ಲೆ ಮಾಡಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಬಂದ ವಿದ್ಯಾರ್ಥಿಯ ಇಬ್ಬರು ಸ್ನೇಹಿತರ ಮೇಲೂ ಹಲ್ಲೆ ಮಾಡಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಮಿಜಾನ್ಖಾನ್ ಎಂಬುವರು ಜಗಳ ಬಿಡಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ಬಗ್ಗೆ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಯು ಭಾನುವಾರ ದೂರು ನೀಡಿದ್ದಾರೆ.
Also read: ಸುಧಾರಿತ ನ್ಯಾವಿಗೇಷನ್ ಉಪಗ್ರಹ ಉಡಾವಣೆ ಯಶಸ್ವಿ: ಇಸ್ರೋ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post