ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಕ್ತದಾನ ಶ್ರೇಷ್ಠದಾನಗಳಲ್ಲಿ ಒಂದು. ರಕ್ತಕ್ಕೆ ಪರ್ಯಾಯವಿಲ್ಲ. ಇದನ್ನು ದಾನಿಗಳಿಂದ ಮಾತ್ರ ಸ್ವೀಕರಿಸಬಹುದು. ರಕ್ತದಾನ ಮಾಡುವುದರಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು ಎಂದು ಪಿಇಎಸ್ ಟ್ರಸ್ಟ್ನ ಕುಲಸಚಿವ ಡಾ. ನಾಗರಾಜ ಹೇಳಿದರು.
ಪಿಇಎಸ್ ಸಂಸ್ಥೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ #B S Yadiyurappa ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ #Blood donation camp ಅವರು ಮಾತನಾಡಿದರು
ರಕ್ತದಾನ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇಂದು 15 ಮಿಲಿಯನ್ ಯುನಿಟ್ ರಕ್ತದ ಬೇಡಿಕೆ ಇದೆ. ರಕ್ತದ ಕೊರತೆಯಿಂದ ಬಳಲುವ ರೋಗಿಗಳು, ಅಪಘಾತ, ಗರ್ಭಿಣಿ ಸ್ತ್ರೀಯರಿಗೆ, ಶಸ್ತ್ರಚಿಕಿತ್ಸೆಗೆ ಹೀಗೆ ಮೊದಲಾದ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದು ಭಾರತದಲ್ಲಿ ರಕ್ತದಾನಿಗಳ ಸಂಖ್ಯೆಯು ತೀರಾ ಕಡಿಮೆ ಇದೆ. ಆದ್ದರಿಂದ ರಕ್ತದಾನದ ಮಹತ್ವ ಕುರಿತು ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.
ಬಿ ಎಸ್ ಯಡಿಯೂರಪ್ಪ ಅವರ ಕೊಡುಗೆ ಮತ್ತು ಸಾಧನೆಯ ಮೈಲುಗಲ್ಲುಗಳ ಮೇಲೆ ಬೆಳಕು ಚೆಲ್ಲಿದರು. ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯ ಧರಣೇಂದ್ರ ದಿನಕರ್ ಅವರು ಮಾತನಾಡುತ್ತಾ ಒಬ್ಬ ವ್ಯಕ್ತಿಯ ದೇಹದಲ್ಲಿ ೫ ರಿಂದ ೬ ಲೀಟರ್ ರಕ್ತವಿದ್ದು ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತವು ಉತ್ಪತ್ತಿ ಆಗುತ್ತದೆ. ದೇಹದಲ್ಲಿನ ಕೊಬ್ಬಿನ ಅಂಶವು ಕಡಿಮೆಯಾಗುತ್ತದೆ. ನಿಯಮಿತವಾಗಿ ರಕ್ತದಾನ ಮಾಡುವ ದಾನಿಗಳಿಗೆ ಹೃದಯ ಸಮಸ್ಯೆ, ಸಕ್ಕರೆ ಕಾಯಿಲೆ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆ ಕಡಿಮೆ ಆದ್ದರಿಂದ ರಕ್ತದಾನ ಮಾಡುವುದರ ಮೂಲಕ ನೆರವಾಗಬೇಕೆಂದು ನುಡಿದರು.
ಸಹ್ಯಾದ್ರಿ ನಾರಾಯಣ ಹೃದಯಾಲಯದ ವೈದ್ಯಾಧಿಕಾರಿ ಡಾ. ರೇಖಾ ಅವರು ಮಾತನಾಡಿ, ವಿದ್ಯಾರ್ಥಿಗಳು ವರ್ಷಕ್ಕೆ ಎರಡರಿಂದ ಮೂರು ಬಾರಿ ರಕ್ತದಾನ ಮಾಡುವುದರಿಂದ ಮಾನಸಿಕ ಒತ್ತಡವು ಕಡಿಮೆಯಾಗುತ್ತದೆ. ಜ್ಞಾಪಕ ಶಕ್ತಿಯು ವೃದ್ಧಿಸುತ್ತದೆ. ರಕ್ತದಾನ ಮಾಡಿದ 48 ಗಂಟೆಗಳಲ್ಲಿ ರಕ್ತವು ಪುನರ್ ಉತ್ಪತ್ತಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಆತಂಕ ಪಡದೆ ರಕ್ತದಾನವನ್ನು ಮಾಡಬಹುದು ಎಂದು ಕಿವಿ ಮಾತನ್ನು ಹೇಳಿದರು.
ಪಿಇಎಸ್ ಐಟಿಎಂ, ಪಿಇಎಸ್ ಐಎಎಮ್ಎಸ್, ಪಿಇಎಸ್ ಪಾಲಿಟೆಕ್ನಿಕ್ನ ವಿದ್ಯಾರ್ಥಿಗಳು ಹಾಗೂ ಪಿಇಎಸ್ ಟ್ರಸ್ಟ್ನ ಅಡಿಯಲ್ಲಿ ಬರುವ ಎಲ್ಲಾ ಸಂಸ್ಥೆಗಳ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ರಕ್ತದಾನವನ್ನು ಮಾಡಿದರು.
ಸಮಾರಂಭದಲ್ಲಿ ಪಿಇಎಸ್ ಐಟಿಎಂನ ಪ್ರಾಂಶುಪಾಲರಾದ ಡಾ. ಸ್ವಾಮಿ ಡಿ ಆರ್. ಪಿಇಎಸ್ ಐಎಎಮ್ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ ಸುದರ್ಶನ್ ಜಿ ಎಂ. ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸುಜಯ್ .ಎಂ. ವಿ, ಪಿಇಎಸ್ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲ ಸೋಮಶೇಖರಯ್ಯ, ಪಿಇಎಸ್ ಐಟಿಎಂನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಶಿವಾನಂದ ಸಿ ಮರಡಿ, ಪಿಇಎಸ್ ಐಎಎಮ್ಎಸ್ನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಭವ್ಯ ವಿ, ರೆಡ್ಕ್ರಾಸ್ ಕಾರ್ಯಕ್ರಮಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಪಿಇಎಸ್ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಭಾಗವಹಿಸಿದ್ದರು. ಶಿವಮೊಗ್ಗದ ರೋಟರಿ ರಕ್ತನಿಧಿಯ ಸಂಸ್ಥೆ ಹಾಗೂ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಿಬ್ಬಂದಿ ವರ್ಗದವರು ರಕ್ತದಾನ ಶಿಬಿರವನ್ನು ನೆರವೇರಿಸಿಕೊಟ್ಟರು. ಒಟ್ಟು 105 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಎನ್ ಪ್ರವೀಣ್ ಚಂದ್ರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
















