ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುವತಿಯೊಬ್ಬಳನ್ನು ಕಾಡಿನೊಳಗೆ ಎಳೆದೊಯ್ದು ಕೊರಳಲ್ಲಿದ್ದ ಬಂಗಾರದ ಚೈನ್ ಕಸಿದುಕೊಂಡು ಆಕೆಯ ರಕ್ಷಣೆಗೆ ಧಾವಿಸಿದ ಸ್ನೇಹಿತನಿಗು ಹೊಡೆದು ಮೊಬೈಲ್ ಫೋನ್, ಹಣ ಕಿತ್ತುಕೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಜಾವಳ್ಳಿಯಲ್ಲಿ ನಡೆದಿದೆ.
ಖಾಸಗಿ ಮೆಡಿಕಲ್ ಕಾಲೇಜಿನ ಯುವತಿಯೊಬ್ಬಳು ಕೆಲಸದ ನಿಮಿತ್ತ ಸ್ನೇಹಿತನೊಂದಿಗೆ ಬೈಕ್ನಲ್ಲಿ ಚಿತ್ರದುರ್ಗಕ್ಕೆ ತೆರಳುತ್ತಿದ್ದರು. ಮೂತ್ರ ವಿಸರ್ಜನೆಗೆಂದು ಜಾವಳ್ಳಿಯಲ್ಲಿ ಬೈಕ್ ನಿಲ್ಲಿಸಿ, ಯುವತಿ ನೀಲಗಿರಿ ಪ್ಲಾಂಟೇಶನ್ ಒಳಗೆ ಹೋಗಿದ್ದು, ಸ್ನೇಹಿತ ಬೈಕ್ ನಿಲ್ಲಿಸಿಕೊಂಡು ರಸ್ತೆ ಬದಿ ನಿಂತಿದ್ದ, ನೀಲಗಿರಿ ಪ್ಲಾಂಟೇಶನ್ನಲ್ಲಿ ಆರು ಮಂದಿ ಯುವಕರು ಯುವತಿಯನ್ನು ಹಿಡಿದು ಕಾಡಿನೊಳಗೆ ಎಳೆದೊಯ್ದು ಕತ್ತಿನಲ್ಲಿದ್ದ 20 ಗ್ರಾಂ ಚಿನ್ನದ ಸರ ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Also read: ಹಿರಿಯ ನಟ ದ್ವಾರಕೀಶ್ ನಿಧನ | ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ
ಈ ಸಂದರ್ಭ ಯುವತಿ ಜೋರಾಗಿ ಕೂಗಿಕೊಂಡಿದ್ದಾಳೆ. ರಕ್ಷಣೆಗೆ ಧಾವಿಸಿದ ಆಕೆಯ ಸ್ನೇಹಿತನ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ಆತನ ಬಳಿ ಇದ್ದ ಮೊಬೈಲ್ ಮತ್ತು 3 ಸಾವಿರ ರೂ. ನಗದು ಕಸಿದುಕೊಂಡಿದ್ದಾರೆ. ಪಕ್ಕದ ತೋಟದಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post