ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಮಂಜುನಾಥ ಅಲಿಯಾಸ್ ಓಲಂಗ ಎಂಬಾತ ಗುಂಡೇಟು ತಿಂದ ಆರೋಪಿಯಾಗಿದ್ದಾನೆ.
ಮೂರು ದಿನದ ಹಿಂದೆ ಶಶಿ ಎನ್ನುವ ಯುವಕನಿಗೆ ಚಾಕು ಇರಿದಿದ್ದ ಪ್ರಕರಣದಲ್ಲಿ ಬಾಗಿಯಾಗಿದ್ದ ಮಂಜು ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆದರೆ ಬುಧವಾರ ಸಂಜೆ ಜಯನಗರ ಪೊಲೀಸ್ ಠಾಣೆಗೆ ಬಂದು ಸರೇಂಡರ್ ಆಗಿದ್ದ ಮಂಜು ಓಲಂಗ. ಬುಧವಾರ ರಾತ್ರಿ ಹಲ್ಲೆ ನಡೆಸಿದ್ದ ಪ್ರದೇಶಕ್ಕೆ ಮಹಜರಿಗೆ ಕರೆದುಕೊಂಡು ಹೋದಾಗ ಮಂಜು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಪೊಲೀಸರು ಆತ್ಮ ರಕ್ಷಣೆಗೆ ಆರೋಪಿ ಕಾಲಿಗೆ ಗುಂಡು ಹೊಡೆದಿದ್ದಾರೆ.
Also read: ಭಾಗ-2: `ಭಾರತ್ ನ್ಯಾಯ ಯಾತ್ರೆ’ಗೆ ಸಿದ್ಧವಾದ ಕಾಂಗ್ರೆಸ್ | ಎಲ್ಲಿಂದ ಆರಂಭ? ಎಲ್ಲಿ ಅಂತ್ಯ?
ಗುಂಡೇಟಿನಿಂದ ಗಾಯಗೊಂಡ ಆರೋಪಿ ಓಲಂಗನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post