ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿಯ ವಿಐಎಸ್’ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳನ್ನು ಉಳಿಸುವ ಸಲುವಾಗಿ ನಿರಂತರ ಪ್ರಯತ್ನಗಳು ನಡೆಯುತ್ತಿದ್ದು, ನಾಳೆ ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳೊಂದಿಗೆ ಕಾರ್ಮಿಕರ ಜೊತೆ ಮಹತ್ವದ ಮಾತುಕತೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರದ ಎಸ್’ಎಐಎಲ್ ಸೂಚನೆ ನೀಡಿದೆ. ಒಂದು ಬಾರಿ ಮುಚ್ಚಿದರೆ ಆನಂತರ ಖಾಸಗಿಯವರಿಗೂ ಆರಂಭಿಸುವುದು ಸಾಧ್ಯವಿಲ್ಲ. ಹೀಗಾಗಿ, ಕಾರ್ಖಾನೆಯನ್ನು ಮುಚ್ಚದೇ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಕಾರ್ಖಾನೆ ಮುಚ್ಚಿದರೆ ಕಾರ್ಮಿಕರ ಬದುಕು ಮಾತ್ರವಲ್ಲ ಸ್ಥಳೀಯರ ಜೀವನವೂ ಸಹ ತೊಂದರೆಗೆ ಸಿಲುಕಿಲಿದೆ. ಹೀಗಾಗಿ, ಕಾರ್ಖಾನೆಯನ್ನು ಮುಚ್ಚದೇ ಸರ್ಕಾರಿ, ಬಂಡವಾಳ ತೊಡಗಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಬೇಕು ಎಂದು ಮನವಿ ಮಾಡಿದರು.
ನಾಳೆ ಮುಖ್ಯಮಂತ್ರಿಗಳು ನಗರಕ್ಕೆ ಆಗಮಿಸುತ್ತಿದ್ದು, ಸಂಸದ ರಾಘವೇಂದ್ರ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಕಾರ್ಮಿಕರನ್ನು ಒಳಗೊಂಡ ನಿಯೋಗ ಅವರೊಂದಿಗೆ ಚರ್ಚೆ ನಡೆಸಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post