No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.15: ಸಲ್ಯೂಟ್ ಇಂಡಿಯಾ ನಿರಂತರ ರೇಡಿಯೋ ಶಿವಮೊಗ್ಗ ಬಾನುಲಿ ಲೈವ್

ಇವರುಗಳದ್ದೇ ನೋಡಿ ರೇಡಿಯೋ ಶಿವಮೊಗ್ಗದಲ್ಲಿ ನೀವು ಕೇಳುವ ಆರ್'ಜೆ ಧ್ವನಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 13, 2024
in ಶಿವಮೊಗ್ಗ
0
ಆ.15: ಸಲ್ಯೂಟ್ ಇಂಡಿಯಾ ನಿರಂತರ ರೇಡಿಯೋ ಶಿವಮೊಗ್ಗ ಬಾನುಲಿ ಲೈವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜನಪ್ರಿಯ ವಾಹಿನಿ ರೇಡಿಯೋ ಶಿವಮೊಗ್ಗ ಈ ಬಾರಿ ಸ್ವಾತಂತ್ರ್ಯೋತ್ಸವವನ್ನು ಕೇಳುಗರೊಂದಿಗೆ ಆಚರಿಸುತ್ತಿದೆ. ಆ.15ರಂದು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವವರೆಗೆ ಅವಿರತ ನೇರಪ್ರಸಾರ ಸಲ್ಯೂಟ್ ಇಂಡಿಯಾ ಕಾರ್ಯಕ್ರಮವಿದ್ದು, ಇದರಲ್ಲಿ ಕೇಳುಗರೂ ಭಾಗವಹಿಸಲು ಅವಕಾಶವಿದೆ.

ಸಲ್ಯೂಟ್ ಇಂಡಿಯಾ ನೇರಪ್ರಸಾರದಲ್ಲಿ, ಆರ್ ಜೆ ಗಳಾದ ಶ್ವೇತಾ, ರಕ್ಷಿತಾ ಹೊಳ್ಳ, ಅರ್ಪಿತಾ, ಮಹಾಲಕ್ಷ್ಮೀ. ಪವಿತ್ರಾ ದಿನೇಶ್, ಶ್ರೀಧರ್ ಇದರಲ್ಲಿ ಭಾಗವಹಿಸಲಿದ್ದಾರೆ. ತಾಂತ್ರಿಕ ಸಂಯೋಜಕ ಶ್ರೀಕಾಂತ್ ಸಹಕಾರ ನೀಡಲಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕಥನ, ಇದರಲ್ಲಿ ಸಾಹಿತ್ಯದ ಕೊಡುಗೆ.

ರೈತರು, ವಿದ್ಯಾರ್ಥಿಗಳು, ಜನಸಾಮಾನ್ಯರ ಪಾತ್ರ ಇತ್ಯಾದಿ ವಿಶೇಷತೆಗಳನ್ನು ಇದು ಒಳಗೊಂಡಿರುತ್ತದೆ. ಇದರ ಜೊತೆಯಲ್ಲಿ ಕೇಳುಗರು ನೀಡಿದಂತಹ ದೇಶಭಕ್ತಿ ಗೀತ ಗಾಯನ, ಮಾತುಗಳೂ ಇರುತ್ತವೆ. ನೇರಪ್ರಸಾರದಲ್ಲಿ ಶಿವಮೊಗ್ಗದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದ ಬಗ್ಗೆಯೂ ಮಾಹಿತಿ ಇರುತ್ತದೆ. ಕಾರ್ಯಕ್ರಮದ ನಡುವೆ ದೇಶಭಕ್ತಿ ಗೀತೆಗಳನ್ನೂ ಕೇಳಬಹುದಾಗಿದೆ.
ಕೇಳುಗರೂ ಇದರಲ್ಲಿ ಸಕ್ರಿಯವಾಗಿ ಭಾಗವಹಿಸಬಹುದಾಗಿದೆ. ನೇರಪ್ರಸಾರ ಸಮಯದಲ್ಲಿ (ಮೊ: 96 860 96 279) ಗೆ ಕರೆ ಮಾಡಿ ಮಾತನಾಡಬಹುದು. ನಿಮ್ಮ ಸ್ವಾತಂತ್ರ್ಯೋತ್ಸವದ ನೆನಪುಗಳು, ಮರೆಯಲಾರದ ಮಹನೀಯರ ಕುರಿತು ಮಾತನಾಡಬಹುದು, ದೇಶಭಕ್ತಿ ಗೀತೆಗಳನ್ನೂ ಕೂಡಾ ಹಾಡಬಹುದಾಗಿದೆ.

ಈ ನೇರಪ್ರಸಾರದ ಆಯೋಜನೆಯಲ್ಲಿ ಕೊಡಚಾದ್ರಿ ಇಂಟಿಗ್ರೆಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ, ಪರಿಸರ ಅಧ್ಯಯನ ಕೇಂದ್ರವು ಸಹಭಾಗಿಗಳಾಗಿವೆ. ರೇಡಿಯೋ ಶಿವಮೊಗ್ಗ ಆಪ್ ಪ್ಲೇ ಸ್ಟೋರ್ ಹಾಗೂ ಆಪಲ್ ಸ್ಟೋರ್ ಗಳಲ್ಲಿ ಲಭ್ಯವಿದ್ದು, ಇದನ್ನು ಡೌನ್ ಲೋಡ್ ಮಾಡಿಕೊಂಡು ದಿನದ 24 ಗಂಟೆಯೂ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳನ್ನು ಆಲಿಸಬಹುದೆಂದು ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿರುತ್ತಾರೆ.

Radio App Link https://play.google.com/store/apps/details?id=com.atclabs.radioshivmogga
Kalahamsa Infotech private limitedನಿಮ್ಮೊಂದಿಗೆ…
ಆರ್ ಜೆ ಶ್ವೇತಾ ಪ್ರದೀಪ್
ರೇಡಿಯೋ ಶಿವಮೊಗ್ಗದ ಆರಂಭದ ದಿನದಿಂದಲೂ ಜೊತೆಯಾಗಿರುವ ಇವರು ಪ್ರಸ್ತುತ ವಿಜ್ಞಾನ, ತಂತ್ರಜ್ಞಾನದ ಕುತೂಹಲಕಾರಿ ವಿಷಯಗಳನ್ನು ತಿಳಿಸುವ ಕೌತುಕ ಕಾರ್ಯಕ್ರಮವನ್ನು ಪ್ರತಿದಿನ ಬೆಳಗ್ಗೆ 8:30ಕ್ಕೆ ನಡೆಸುತ್ತಾರೆ. ವಿದ್ಯಾರ್ಥಿಗಳು, ವಿಜ್ಞಾನ ಕುತೂಹಲಿಗಳ ಕೇಳುಗ ಬಳಗ ಇದಕ್ಕಿದೆ. ಇದರ ಜೊತೆಗೆ ಈ ಮೊದಲು ಸಿಟಿ ಸ್ಟೋರೀಸ್, ಕಲರವ, ಲರ್ನಿಂಗ್ ಕಾರ್ನರ್ ಇತ್ಯಾದಿ ಕಾರ್ಯಕ್ರಮಗಳನ್ನೂ ನಿರ್ವಹಿಸಿ, ಜನರ ಪ್ರಶಂಸೆ ಗಳಿಸಿರುತ್ತಾರೆ.

ಆರ್ ಜೆ ಶ್ರೀಧರ್
ಕಳೆದ ಎರಡೂವರೆ ವರ್ಷಗಳಿಂದಲೂ ಬಾನುಲಿಯ ಜೊತೆಯಾಗಿರುವ ಇವರು ಪ್ರಸ್ತುತ ಆಹಾರದ ಕುರಿತಾಗಿ ಕಾಳಜಿ ಮಾತುಗಳ ಊಟದ ತಾಟು ಕಾರ್ಯಕ್ರಮವನ್ನು ಪ್ರತಿದಿನ ಮಧ್ಯಾಹ್ನ 1 ಗಂಟೆಗೆ ನಡೆಸುತ್ತಾರೆ. ಇದರ ಜೊತೆಯಲ್ಲಿ ಸಾರ್ವಜನಿಕ ಕುಂದು ಕೊರತೆಗಳತ್ತ ಗಮನ ನೀಡುವ ಆಗಬೇಡಿ ಆಲಸಿ, ನಮ್ಮನ್ನೂ ಆಲಿಸಿ ಕಾರ್ಯಕ್ರಮ ಪ್ರತಿದಿನ ಸಂಜೆ 5:30ಕ್ಕೆ ನಿರ್ವಹಿಸುತ್ತಾರೆ. ಈ ಎರಡೂಕಾರ್ಯಕ್ರಮವೂ ತನ್ನದೇ ಆದ ಕೇಳುಗ ವಲಯ ಹೊಂದಿದ್ದು, ಜನಪ್ರಿಯತೆ ಪಡೆದಿದೆ.

http://kalpa.news/wp-content/uploads/2024/04/VID-20240426-WA0008.mp4

ಆರ್ ಜೆ ರಕ್ಷಿತಾ ಹೊಳ್ಳ
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಗ್ರಾಮದವರಾದ ಇವರು, ಬಾನುಲಿಯಲ್ಲಿ ಎರಡು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸಾಹಿತ್ಯ ಲೋಕದ ಅನಾವರಣವಾದ ಒಂದು ಅಧ್ಯಾಯ ಕಾರ್ಯಕ್ರಮ ಪ್ರತಿದಿನ ಬೆಳಗ್ಗೆ 9:30ಕ್ಕೆ ಪ್ರಸಾರವಾಗುತ್ತಿದೆ. ಪ್ರಾಣಿ, ಪಕ್ಷಿಗಳ ಜೀವನಶೈಲಿಯ ಕುರಿತಾದ ಕಲವರ ಕಾರ್ಯಕ್ರಮವನ್ನು ಪ್ರತಿದಿನ ಸಂಜೆ 6 ಗಂಟೆಗೆ ನಡೆಸುತ್ತಿದ್ದಾರೆ. ಎರಡೂ ವಿಭಿನ್ನ ಶೈಲಿಯ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಾ, ಉತ್ತಮ ಕೇಳುಗ ವಲಯವನ್ನು ಸೃಷ್ಟಿಸಿಕೊಂಡಿದ್ದಾರೆ.

ಆರ್ ಜೆ ಅರ್ಪಿತ ವಿ.ಎನ್.
ಬಾನುಲಿಯಲ್ಲಿ ನಡೆದ ತರಬೇತಿಯಿಂದಲೂ ಜೊತೆಗಿರುವ ಇವರು, ಮುಂಜಾನೆಯ ಸುಮಧುರ ಮಾತುಗಳೊಂದಿಗೆ ಕೇಳುಗರಿಗೆ ಜೊತೆಯಾಗಲಿದ್ದು, ಪ್ರತಿದಿನ ಬೆಳಗ್ಗೆ 6 ಗಂಟೆಗೆ ಮುಂಗೋಳಿ ಕೂಗ್ಯಾವೋ ಕಾರ್ಯಕ್ರಮ ನಡೆಸುತ್ತಾರೆ. ಶಿವಮೊಗ್ಗದ ಯಶಸ್ವಿ ಉದ್ಯಮಿಗಳನ್ನು , ಉದ್ಯಮಗಳನ್ನು ಪರಿಚಯಿಸುವ ಬ್ಯುಸಿನೆಸ್ ಬಝ್ ಕಾರ್ಯಕ್ರಮವನ್ನು ಸಂಜೆ 6:30ಕ್ಕೆ ನಿರ್ವಹಿಸುತ್ತಾರೆ. ಈ ಎರಡೂ ಕಾರ್ಯಕ್ರಮಗಳನ್ನೂ ನಿರ್ವಹಿಸುತ್ತಾ, ಕೇಳುಗರ ವಲಯದಲ್ಲಿ ಉತ್ತಮ ಹೆಸರು ಪಡೆದುಕೊಂಡಿರುತ್ತಾರೆ.
ಆರ್ ಜೆ ಮಹಾಲಕ್ಷ್ಮೀ
ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದವರಾದ ಇವರು ಪ್ರಸ್ತುತ ಶಿವಮೊಗ್ಗದಲ್ಲೇ ನೆಲೆಸಿರುತ್ತಾರೆ. ಬಾನುಲಿ ಆರಂಭದಿಂದಲೂ ರೈತಾಪಿ ಬದುಕನ್ನು ಹಸನಗೊಳಿಸುವ ಕಾರ್ಯಕ್ರಮ ಒಕ್ಕಲುತನ ಪ್ರತಿದಿನ ಸಂಜೆ 7 ಗಂಟೆಗೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಪ್ರತಿದಿನ ಬೆಳಗ್ಗೆ 9 ಗಂಟೆಗೆ ಪ್ರಸಾರವಾಗುವ ನಿಮ್ಮ ಜರ್ನಿ ನಮ್ಮ ಜೊತೆ ಕಾರ್ಯಕ್ರಮ ನಡೆಸುವ ಮುಖಾಂತರ ಪ್ರವಾಸಿ ಸ್ಥಳಗಳನ್ನು ಪರಿಚಯ ಮಾಡಿಕೊಡುತ್ತಿದ್ದಾರೆ. ಈ ಎರಡೂ ವಿಭಿನ್ನ ನೆಲೆಯ ಕಾರ್ಯಕ್ರಮಗಳ ಮುಖಾಂತರ ಜನಪ್ರಿಯತೆ ಗಳಿಸಿರುತ್ತಾರೆ.

ಆರ್ ಜೆ ಪವಿತ್ರಾ ದಿನೇಶ್
ಮೂಲತಃ ಸಾಗರ ಸಮೀಪದ ಗೌತಮಪುರದವರು. ಕೊಡಚಾದ್ರಿ ಇಂಟಿಗ್ರೆಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ, ಪರಿಸರ ಅಧ್ಯಯನ ಕೇಂದ್ರದಲ್ಲಿ ಹಲವಾರು ವರ್ಷಗಳಿಂದ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಜನಪದ ಕಾರ್ಯಕ್ರಮವನ್ನು ಆರಂಭದಿಂದಲೂ ನಡೆಸಿಕೊಂಡು ಬಂದವರು, ಪ್ರಸ್ತುತ ವಚನ ವಿಹಾರ ಕಾರ್ಯಕ್ರಮವನ್ನು ಪ್ರತಿದಿನ ಬೆಳಗ್ಗೆ 7 ಗಂಟೆಗೆ ನಡೆಸುತ್ತಿದ್ದಾರೆ. ಇದರ ಮುಖಾಂತರ ಜನಪ್ರಿಯ ವಚನಕಾರರ ಜೊತೆಗೆ ಗೌಪ್ಯ ವಚನಕಾರರನ್ನು, ವಚನಗಳ ಭಾವಾರ್ಥವನ್ನು ತಿಳಿಸುತ್ತಾ, ಮನ್ನಣೆ ಪಡೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Independence DayKannada News WebsiteLatest News KannadaRadio ShivamoggaShimogaShivamoggaShivamogga Newsಇಂಡಿಯಾಚಿಕ್ಕಮಗಳೂರುರೇಡಿಯೋ ಶಿವಮೊಗ್ಗಶಿವಮೊಗ್ಗಸ್ವಾತಂತ್ರ್ಯ ಹೋರಾಟ
Share201Tweet123Send
Previous Post

ಟೇಬಲ್ ಟೆನ್ನಿಸ್‌: ಕ್ರೈಸ್ಟ್‌ಕಿಂಗ್ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Next Post

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸಚಿವ ಶಿವರಾಜ ತಂಗಡಗಿ ಘೋಷಣೆ 

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ‌ ತಂಗಡಗಿ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸಚಿವ ಶಿವರಾಜ ತಂಗಡಗಿ ಘೋಷಣೆ 

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL