ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ಯಾನ್ಸರ್ನಂತಹ ಕಾಯಿಲೆಗಳ ಬಗ್ಗೆ ದೊಡ್ಡ ದೊಡ್ಡ ಆಸ್ಪತ್ರೆಗಳು ಸೇವೆ ಮತ್ತು ಕರುಣೆಯಿಂದ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗಜ್ಞಾನೇಂದ್ರ #Araga Gnanendra ಹೇಳಿದರು.
ಅವರು ಶನಿವಾರ ತೀರ್ಥಹಳ್ಳಿಯ ಅರಗ ಗೇಟ್ ಬಳಿ ಇರುವ ಎಂಐ ಆಸ್ಪತ್ರೆ ಮತ್ತು ಶಿವಮೊಗ್ಗದ ಸಾಹಸ ಮತ್ತು ಸಾಂಸ್ಕøತಿಕ ಅಕಾಡೆಮಿ, ಸಂಜೀವಿನಿ ಟ್ರಸ್ಟ್ ಮಂಗಳೂರು, ತೀರ್ಥಹಳ್ಳಿಯ ಎಂಐಓ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕ್ಯಾನ್ಸರ್ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕ್ಯಾನ್ಸರ್ #Cancer ಕೋವಿಡ್ಗಿಂತ #Covid ಕೆಟ್ಟ ಕಾಯಿಲೆ ಆಗಿದೆ. ಇದರ ಚಿಕಿತ್ಸೆ ವೆಚ್ಚವು ದುಬಾರಿಯಾಗಿದೆ. ಗ್ರಾಮೀಣ ಪ್ರದೇಶದ ರೋಗಿಗಳು ಚಿಕಿತ್ಸೆಗೆ ಪರದಾಡುವಂತಹ ಸ್ಥಿತಿ ಬಂದಿದೆ. ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಒಂದೇ ಬೇಕಾಗಿದೆ. ಆಗಾಗಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಬೇಕು. ಈ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಎಂಐಓ ಆಸ್ಪತ್ರೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅತ್ಯಂತ ಶ್ಲಾಘನೀಯ ಎಂದರು.
ಎಂಐಓ ಆಸ್ಪತ್ರೆಯಲ್ಲಿ ಇದೀಗ ಆಯುಷ್ಮಾನ್ ಸೌಲಭ್ಯವು ಕೂಡ ದೊರಕಿದೆ. ಮತ್ತು ಸಂಪೂರ್ಣ ಸುರಕ್ಷಾ ಯೋಜನೆ ಕೂಡ ಇದೆ. ಬಡವರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಮತ್ತು ಈ ಆಸ್ಪತ್ರೆಯ ವೈದ್ಯರು ಸೇವೆಯನ್ನೇ ಪ್ರಮುಖವಾಗಿಟ್ಟುಕೊಂಡಿರುವುದು ಉತ್ತಮ ಉದ್ದೇಶವಾಗಿದೆ. ಮತ್ತು ಇದೊಂದು ಪುಣ್ಯದ ಕೆಲಸವಾಗಿದೆ ಎಂದರು.
ಆಸ್ಪತ್ರೆಯ ನಿರ್ದೇಶಕ ಡಾ.ಡಿ.ಸುರೇಶ್ರಾವ್ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಆತ್ಮ ಚಿಂತನೆ ಮತ್ತು ನಿವೇದನೆ ಅವಶ್ಯಕವಾಗಿ ಬೇಕಾಗುತ್ತದೆ. ವೈದ್ಯರು ದುರಾಸೆ ಬಲಿಬಿದ್ದು ಹಣದ ಹಿಂದೆ ಹೋಗುತ್ತಿದ್ದಾರೆ. ಅದರಲ್ಲೂ ಕ್ಯಾನ್ಸರ್ ಕಾಯಿಲೆಗೆ ವೆಚ್ಚ ಜಾಸ್ತಿ 10-20 ಸಾವಿರದಲ್ಲಿ ಆಗುವ ಆಪರೇಷನ್ನಂತಹ ಚಿಕಿತ್ಸೆಗಳಿಗೆ ಕೆಲವು ದೊಡ್ಡ ಆಸ್ಪತ್ರೆಗಳು ಲಕ್ಷ ಲಕ್ಷ ಮಾಡುತ್ತಿದ್ದಾರೆ. ಇದು ತಪ್ಪಾಬೇಕು. ಅಗತ್ಯಕ್ಕೆ ತಕ್ಕಂತ ಶುಲ್ಕವಿಧಿಸಿದರೆ ಬಡವರಿಗೆ ಅನುಕೂಲವಾಗುತ್ತದೆ. ವೈದ್ಯರು ಮಾನವೀಯರಾಗಬೇಕು. ಸೇವೆಯೇ ಪ್ರಮುಖ ಎಂದು ಭಾವಿಸಬೇಕು. ನಮ್ಮ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸಂಜೀವಿನಿ ಟ್ರಸ್ಟ್ ಮೂಲಕ ಕ್ಯಾನ್ಸರ್ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ. ಹಣಗಳಿಗೆ ನಮ್ಮ ಉದೇಶವೇ ಅಲ್ಲ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ, ಸಾಹಸ ಅಕಾಡೆಮಿಯ ಅ.ನಾ.ವಿಜಯೇಂದ್ರರಾವ್ ಕ್ಯಾನ್ಸರ್ನಂತಹ ಕಾಯಿಲೆಗಳು ಬಾರದಂತೆ ನೋಡಿಕೊಳ್ಳುವುದೇ ಮುಖ್ಯ ಉದ್ದೇಶವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ಕೂಡ ಈ ಬಗ್ಗೆ ಜಾಗೃತಿ ಮೂಡಿಸಲು ಹೊರಟಿದೆ. ಶಾಲಾ ಕಾಲೇಜುಗಳ ಮೂಲಕ ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿ ನಮ್ಮ ತಂಡ ಸಿದ್ಧವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಟಿ.ಕೆ.ರಮೇಶ್ಶೆಟ್ಟಿ, ಸಾಗರದ ಎಂಎಸ್ ನಂಜುಂಡಸ್ವಾಮಿ, ಶಿವಮೊಗ್ಗದ ಸುಂದರರಾಜ್, ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post