ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಾಜಿ ಕೇಂದ್ರ ಸಚಿವ ಬಾಬುಗೌಡ ಪಾಟೀಲ್ ನಿಧನದ ಸುದ್ದಿ ಕೇಳಿ ಅಘಾತವಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ರೈತ ಹೋರಾಟದ ಮೂಲಕ ರಾಜಕೀಯ ಪ್ರವೇಶಿಸಿದ್ರು 1989ರಲ್ಲಿ ಏಕಕಾಲಕ್ಕೆ 2 ಕಡೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1989ರಲ್ಲಿ ಬೆಳಗಾವಿ ಎಂಪಿ ಕ್ಷೇತ್ರದಲ್ಲಿ ಗೆಲುವು, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದೇಶದಲ್ಲಿಯೇ ರೈತ ಸಂಘದ ಮುಂಚೂಣಿ ಹೋರಾಟಗಾರರಲ್ಲಿ ಒಬ್ಬರಾಗಿದ್ದರು. ಅವರನ್ನು ಕಳಕೊಂಡ ರಾಜ್ಯ ಬಡವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಮತ್ತು ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post