ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಥ್ರೋಬಾಲ್ ಸಂಸ್ಥೆ ವತಿಯಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ 81ನೇ ಹುಟ್ಟುಹಬ್ಬದ ಪ್ರಯುಕ್ತ ನೆಹರೂ ಕ್ರೀಡಾಂಗಣದಲ್ಲಿ ಫೆ. 27ರಂದು ಜಿಲ್ಲಾ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿಯನ್ನು ಮಹಿಳೆಯರು ಮತ್ತು ಪುರುಷರಿಗಾಗಿ ಬಿ.ಎಸ್.ವೈ. ಕಪ್ ಥ್ರೋಬಾಲ್ ಪಂದ್ಯಾವಳಿ #Throwball Tournament ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕ ಸಂತೋಷ್ ಬಳ್ಳೇಕೆರೆ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಂದ್ಯಾವಳಿಯಲ್ಲಿ ಮಹೀಳೆಯರು ಮತ್ತು ಪುರುಷರ 15 ತಂಡಗಳು ಭಾಗವಹಿಸಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ಬಹುಮಾನ, ಟ್ರೋಫಿ ಹಾಗೂ ಪಾರಿತೋಷಕಗಳನ್ನು ನೀಡಲಾಗುವುದು ಎಂದರು.
ಪುರುಷರ ವಿಭಾಗ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 6 ಸಾವಿರ ರೂ., ದ್ವಿತೀಯ 4 ಸಾವಿರ ರೂ., ತೃತೀಯ 3 ಸಾವಿರ ರೂ., ಚತುರ್ಥ ಸ್ಥಾನಕ್ಕೆ 2 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು ಎಂದರು.
Also read: ವಿ ಗ್ರೂಪ್, ಆರ್ಬಿಐಟಿಸಿ ಸಹಭಾಗಿತ್ವದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಗಾಲ್ಫ್ ಟೂರ್ನಮೆಂಟ್
ಹಗಲು ಮತ್ತು ಹೊನಲು ಬೆಳಕಿನ ಎರಡು ಥ್ರೋಬಾಲ್ ಅಂಕಣದಲ್ಲಿ ಪಂದ್ಯ ನಡೆಯಲಿದೆ. ಜಿಲ್ಲೆಯ 20 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.
ಫೆ. 27ರಂದು ಬೆಳಗ್ಗೆ 10 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿ.ವೈ. ವಿಜಯೇಂದ್ರ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ ಇನ್ನಿತರರು ಭಾಗವಹಿಸಲಿದ್ದು, ಸಂಜೆ 6.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಇನ್ನಿತರರು ಆಗಮಿಸಲಿದ್ದು, ಈ ಎರಡೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ವಹಿಸಲಿದ್ದಾರೆ ಎಂದರು.
ಪಂದ್ಯಾವಳಿ ಉದ್ಘಾಟನೆಗೂ ಮುನ್ನ ಬೆಳಗ್ಗೆ 9.30ಕ್ಕೆ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜೇಶ್ ಕಾಮತ್, ರಾಮಚಂದ್ರಪ್ಪ ಹೆಚ್. ತಿಮ್ಮೇನಹಳ್ಳಿ, ಕೆ.ಜಿ. ಮಠಪತಿ, ದಿವಾಕರ ಶೆಟ್ಟಿ, ಹನುಮಂತಪ್ಪ, ರಾಜೇಶ್ವರಿ, ಸವಿತಾ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post