ಬೆಳಗಾವಿಯ ಗ್ರಾಮಾಂತರದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ, ಶಿವಮೊಗ್ಗ ಬಿಜೆಪಿ ಮಹಿಳಾ ಮೋರ್ಚಾದಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಾವು ಯಾವ ಸಮಾಜದಲ್ಲಿ ಇದ್ದೇವೆ ಎನ್ನುವುದು ಪ್ರಶ್ನೆ ಕಾಡುತ್ತಿದೆ. ಸರ್ಕಾರ ಕೂಡಲೇ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಬೇಕಿತ್ತು. ಮುಖ್ಯಮಂತ್ರಿಗಳು ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ವಿಶೇಷ ಸಭೆ ಕರೆದು ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕಿತ್ತು. ಇಡೀ ರಾಜ್ಯದ ಜನ ತಲೆತಗ್ಗಿಸುವ ಘಟನೆ ಇದ್ದಾಗಿದ್ದು, ಕೇಂದ್ರದಿಂದ ಘಟನೆಯ ಸತ್ಯ ಪರಿಶೀಲನೆಗೆ ಸತ್ಯಶೋಧನ ತಂಡ ಬಂದಿದೆ. ಮುಖ್ಯಮಂತ್ರಿಗಳಿಗೂ ಅಕ್ಕ ತಂಗಿಯರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಏನು ಬೇಕಾದರೂ ಮಾಡಬಹುದು ಎಂಬ ಸ್ಥಿತಿಯಲ್ಲಿ ಕೀಡಿಗೇಡಿಗಳಿದ್ದಾರೆ. ಸರ್ಕಾರ ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
Also read: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸಂಸತ್ ದಾಳಿ ಪ್ರಕರಣದ ತನಿಖೆಯಾಗಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್
ಶಾಸಕ ಚೆನ್ನಬಸಪ್ಪ MLAChannabasappa ಮಾತನಾಡಿ, ಅಧಿವೇಶನ ಸಂದರ್ಭದಲ್ಲಿ ಬೆಳಗಾವಿಯ ಈ ಅಮಾನುಷ ಘಟನೆಯ ಬಗ್ಗೆ ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಲಿಲ್ಲ. ಅಲ್ಲೇ ಅಧಿವೇಶನ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದ್ದು, ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಬೇಕಿತ್ತು. ಅದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ರವರ ಕ್ಷೇತ್ರವಾಗಿದ್ದು, ಅವರಾದರೂ ಸದನದಲ್ಲಿ ಈ ವಿಚಾರವನ್ನೆತ್ತಿ ಖಂಡನೆ ವ್ಯಕ್ತಪಡಿಸಬೇಕಿತ್ತು. ಈ ಸರ್ಕಾರ ಮಹಿಳೆಯನ್ನು ಗೌರವಿಸುವುದಿಲ್ಲ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.
ಕಾಂಗ್ರೆಸ್ ಇಂತಹ ದುಷ್ಟ ಶಕ್ತಿಗಳಿಗೆ ಶಕ್ತಿಕೊಡುತ್ತ ಬಂದಿದೆ. ಮಹಿಳೆಯರ ಮೇಲೆ ಅಪಮಾನ ಯಾವುದೇ ಕಾರಣಕ್ಕೂ ಬಿಜೆಪಿ ಸಹಿಸುವುದಿಲ್ಲ. ಸಚಿವರು ಕೂಡ ಚಕಾರ ಎತ್ತಲಿಲ್ಲ. ಲಜ್ಜೆಗೆಟ್ಟ ಭಂಡ ಸರ್ಕಾರವಿದು. ಮಹಿಳೆಯರ ಮತ್ತು ಸಂಸ್ಕøತಿಯ ರಕ್ಷಣೆ ಮಾಡದ ಇಂತಹ ಸರ್ಕಾರ ಇರಬಾರದು ಎಂದರು.
ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಸುನೀತ ಅಣ್ಣಪ್ಪ, ರಶ್ಮಿ ಶ್ರೀನಿವಾಸ್, ಲಕ್ಷ್ಮೀ ಶಂಕರ್ನಾಯಕ್, ಸುವರ್ಣ ಶಂಕರ್, ಅನಿತಾ ರವಿಶಂಕರ್, ಆರತಿ ಅ.ಮಾ. ಪ್ರಕಾಶ್, ನಗರಾಧ್ಯಕ್ಷ ಜಗದೀಶ್, ಎನ್.ಡಿ. ಸತೀಶ್, ಜ್ಞಾನೇಶ್ವರ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post