ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೆಂಗಳೂರು |
ಬೆಂಗಳೂರು-ಹುಬ್ಬಳ್ಳಿ ಹಾಗೂ ಬೆಂಗಳೂರು-ಶಿವಮೊಗ್ಗ ನಡುವಿನ ಎರಡೂ ಜನಶತಾಬ್ದಿ ಎಕ್ಸ್’ಪ್ರೆಸ್ ರೈಲುಗಳಿಗೆ #JanashatabdiExpressTrain ತಿಪಟೂರು ರೈಲು ನಿಲ್ದಾಣದಲ್ಲಿ ನಿಲುಗಡೆಯನ್ನು ಮುಂದುವರೆಸಲಾಗಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೆಎಸ್’ಆರ್ ಬೆಂಗಳೂರು – ಎಸ್’ಎಸ್’ಎಸ್ ಹುಬ್ಬಳ್ಳಿ – ಕೆಎಸ್’ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 12079/12080) ಮತ್ತು ಕೆಎಸ್’ಆರ್ ಬೆಂಗಳೂರು – ಶಿವಮೊಗ್ಗ ಟೌನ್ – ಕೆಎಸ್’ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ (12089/12090) ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ತಿಪಟೂರು ರೈಲು ನಿಲ್ದಾಣದಲ್ಲಿ ಮುಂದುವರಿಸಲು ನಿರ್ಧರಿಸಿದೆ.
ಈ ಪ್ರಾಯೋಗಿಕ ನಿಲುಗಡೆಯು ಇನ್ನೂ ಆರು ತಿಂಗಳ ಅವಧಿಗೆ, ಅಂದರೆ 2025ರ ಮೇ 16 ರಿಂದ 2025ರ ನವೆಂರ್ಬ 15ರವರೆಗೆ ಜಾರಿಯಲ್ಲಿರುತ್ತದೆ.
ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯ ಪ್ರಕಾರವೇ ಈ ರೈಲುಗಳು ತಿಪಟೂರು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post