No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಗರಾಭಿವೃದ್ಧಿಯ ಶೇಕಡಾವಾರು ಅನುದಾನ ಹೆಚ್ಚಳಕ್ಕೆ ಶಾಸಕ ಚನ್ನಬಸಪ್ಪ ಮನವಿ

ಮೂಲಸೌಕರ್ಯ ಹಾಗೂ ಬಡಜನರ ಕಲ್ಯಾಣಕ್ಕಾಗಿ ಏನೆಲ್ಲಾ ಯೋಜನೆಗಳಿವೆ?

kalpa News by kalpa News
July 19, 2023
in ಶಿವಮೊಗ್ಗ, ಬೆಂಗಳೂರು ನಗರ
0
ನಗರಾಭಿವೃದ್ಧಿಯ ಶೇಕಡಾವಾರು ಅನುದಾನ ಹೆಚ್ಚಳಕ್ಕೆ ಶಾಸಕ ಚನ್ನಬಸಪ್ಪ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ/ಬೆಂಗಳೂರು  |

ಬಡವರ ಕಲ್ಯಾಣ ಹಾಗೂ ನಗರಾಭಿವೃದ್ಧಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಈಗ ನೀಡಲಾಗುತ್ತಿರುವ ಶೇ.7.25ರಷ್ಟು ಅನುದಾನವನ್ನು ಶೇ.15ಕ್ಕೆ ಏರಿಕೆ ಮಾಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರಿಗೆ ಮನವಿ ಸಲ್ಲಿಸಿರುವ ಅವರು, ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಡಜನರ ಕಲ್ಯಾಣಕ್ಕಾಗಿ ಶೇ.7.25% ರಷ್ಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯಡಿಯಲ್ಲಿ ವೈದ್ಯಕೀಯ, ಶೈಕ್ಷಣಿಕ, ಸ್ವಂತ ಉದ್ಯೋಗಕ್ಕಾಗಿ ಹಾಗೂಇತರೆ ಜನಪ್ರಿಯ ಯೋಜನೆಗಳನ್ನು ಹಮ್ಮಿಕೊಂಡಿದ್ದು ನಗರ ಪ್ರದೇಶಗಳಲ್ಲಿ ಬಡತನದಲ್ಲಿರುವ ಹಲವಾರು ಕುಟುಂಬಗಳಿಗೆ ಸಾಕಷ್ಟು ಪ್ರಯೋಜನವಾಗಿದೆ. ಆದರೆ ಶೇ.7.25ರಷ್ಟು ಯೋಜನೆಗಳಿಂದ ಎಲ್ಲಾ ವರ್ಗದ ಬಡಜನರಿಗೆ ಸಮರ್ಪಕವಾಗಿ ಸೌಲಭ್ಯಗಳನ್ನು ಒದಗಿಸುವುದು ಕಷ್ಟವಾಗಿದೆ. ಆದ್ದರಿಂದ ಶೇ.7.25 ರಷ್ಟಿರುವ ಮೊತ್ತವನ್ನು ಶೇ.15ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ಜಗತ್ತಿನಾದ್ಯಂತ ನಗರೀಕರಣವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಕ್ರಿಯೆಯಾಗಿದ್ದು, ಭಾರತವು ಇದಕ್ಕೆ ಹೊರತಾಗಿಲ್ಲ. ಒಂದು ದೇಶದ ಆರ್ಥಿಕತೆ ಹಾಗೂ ನಗರೀಕರಣವು ನೇರವಾಗಿ ಅನುಪಾತದಲ್ಲಿರುತ್ತದೆ. ಅದರಂತೆ, ಭಾರತವು ಆರ್ಥಿಕವಾಗಿ ಬೆಳವಣಿಗೆ ಹೊಂದಿದಂತೆಲ್ಲ ನಗರಗಳೂ ಬೆಳವಣಿಗೆಯತ್ತ ಸಾಗಿದವು. ಇದೆಲ್ಲದಕ್ಕೂ ಕೂಡಿಕೊಂಡಂತೆ ನಗರಗಳ ಜನಸಂಖ್ಯೆಯೂ ಹೆಚ್ಚಾಯಿತು. ಹಿಂದಿನ ಜನಗಣತಿಯ ಪ್ರಕಾರ ಭಾರತದ ನಗರ ಪ್ರದೇಶಗಳಲ್ಲಿ ವಾಸಿಸುವ ಜನಸಂಖ್ಯೆ ಶೇ.11.4, 2001 ರ ಜನಗಣತಿಯ ಪ್ರಕಾರ ಈ ಎಣಿಕೆಯು ಶೇ.27.80ಕ್ಕೆ ಏರಿಕೆಯಾಗಿದ್ದು, 2011 ರ ಜನಗಣತಿಯ ಪ್ರಕಾರ ಶೇ.31.20 ದಾಟಿದೆ. ಇದಲ್ಲದೆ 2017 ರಲ್ಲಿ ಈ ಸಂಖ್ಯೆಯು ಶೇ.34ಕ್ಕೆ ಏರಿದೆ ಎಂದು ವಿಶ್ವಬ್ಯಾಂಕ್ ತಿಳಿಸಿದೆ. 2021 ರ ಜನಗಣತಿ ನಡೆಯಲಿದ್ದು ಶೇಕಡಾವಾರು ನಗರವಾಸಿಗಳ ಪ್ರಮಾಣವು ಶೇ. 40 ಕ್ಕಿಂತ ಅಧಿಕವಾಗುವ ಸಾಧ್ಯತೆ ಇರುತ್ತದೆ. ನಗರಗಳು ವ್ಯಾಪಾರ ವಹಿವಾಟುಗಳ ಕೇಂದ್ರವಾಗಿರುವುದರಿಂದಲೂ ಹಾಗೂ ನಿಚ್ಚಳ ಉದ್ಯೋಗಾವಕಾಶಗಳ ಲಭ್ಯತೆಯಿಂದಲೂ, ಸದೃಢ ಆರ್ಥಿಕತೆಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದಿದ್ದಾರೆ.

Also read: ಅಧಿಕಾರ ಲಾಲಸೆಗಾಗಿ ಸ್ವಾಭಿಮಾನಕ್ಕೆ ಘಟಶ್ರಾದ್ಧ: ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ

ಆದರೆ ತೀವ್ರಗತಿಯ ನಗರೀಕರಣದಿಂದ ಹಲವು ಸಮಸ್ಯೆಗಳೂ ಉದ್ಭವಿಸುತ್ತಿವೆ. ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮವಾಗಿ ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಕುಡಿಯುವ ನೀರು, ವಿದ್ಯುತ್, ಸಾರಿಗೆ ಸಂಪರ್ಕಗಳನ್ನೊಳಗೊಂಡಂತಹ ಹತ್ತು ಹಲವು ಅವಶ್ಯಕ ಸೇವೆಗಳ ಮೇಲೆ ಒತ್ತಡ ಉಂಟಾಗಿ ಸರ್ಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸಮಸ್ಯೆ ತಂದೊಡ್ಡುತ್ತಿದೆ ಎಂದಿದ್ದಾರೆ.

http://kalpa.news/wp-content/uploads/2023/05/Jain-Public-School.mp4

ಪ್ರಮುಖವಾಗಿ ಯೋಜಿತವಲ್ಲದ ನಗರಗಳಲ್ಲಿ ಈ ಎಲ್ಲಾ ಸಮಸ್ಯೆಗಳ ದುಷ್ಪರಿಣಾಮಗಳನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ. ಮೇಲ್ಕಂಡ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಲುವಾಗಿ, ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಡಜನರ ಕಲ್ಯಾಣಕ್ಕಾಗಿ ಶೇ.7.25 ರಷ್ಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯಡಿಯಲ್ಲಿ ವೈದ್ಯಕೀಯ, ಶೈಕ್ಷಣಿಕ, ಸ್ವಂತ ಉದ್ಯೋಗಕ್ಕಾಗಿ ಹಾಗೂ ಇತರೆ ಜನಪ್ರಿಯ ಯೋಜನೆಗಳನ್ನು ಹಮ್ಮಿಕೊಂಡಿದ್ದು ನಗರ ಪ್ರದೇಶಗಳಲ್ಲಿ ಬಡತನದಲ್ಲಿರುವ ಹಲವಾರು ಕುಟುಂಬಗಳಿಗೆ ಸಾಕಷ್ಟು ಪ್ರಯೋಜನವಾಗಿದೆ. ಆದರೆ ಶೇ.7.25%ರಷ್ಟು ಯೋಜನೆಗಳಿಂದ ಎಲ್ಲಾ ವರ್ಗದ ಬಡಜನರಿಗೆ ಸಮರ್ಪಕವಾಗಿ ಸೌಲಭ್ಯಗಳನ್ನು ಒದಗಿಸುವುದು ಕಷ್ಟವಾಗಿದೆ. ಆದ್ದರಿಂದ ಶೇ.7.25 ರಷ್ಟಿರುವ ಮೊತ್ತವನ್ನು ಶೇ.15ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಪ್ರಸ್ತುತ ಶೇ.7.25 ಮೊತ್ತವನ್ನು ನಗರ ಸ್ಥಳೀಯ ಸಂಸ್ಥೆಗಳ ಆದಾಯದಿಂದ ಹಾಗೂ ಸರ್ಕಾರದ ಎಸ್’ಎಫ್’ಸಿ ಮುಕ್ತ ನಿಧಿಯಿಂದ ಹಂಚಿಕೆಯಾಗುವ ಅನುದಾನದಿಂದ ಯೋಜನೆಗಳನ್ನು ರೂಪಿಸಿಕೊಳ್ಳಲಾಗುತ್ತಿದೆ. ಹೆಚ್ಚುವರಿ ಮೊತ್ತದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಬೀಳುವುದಿಲ್ಲ, ಬದಲಾಗಿ ಬಡಜನರು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ಕಾರಣೀಕೃತವಾಗುತ್ತದೆ ಎಂದು ವಿವರಿಸಲಾಯಿತು.
ಶಾಸಕ ಚನ್ನಬಸಪ್ಪ ಅವರ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಸಿದ ಮುಖ್ಯಮಂತ್ರಿಗಳು ತಕ್ಷಣವೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಇದನ್ನು ಪರಿಶೀಲನೆ ನಡೆಸಿ ತತಕ್ಷಣವೇ ಜಾರಿಗೆ ತರುವಂತೆ ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CM SiddaramaiahKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA ChannabasappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗ_ನ್ಯೂಸ್ಶಿವಮೊಗ್ಗ/ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕಾರ ಲಾಲಸೆಗಾಗಿ ಸ್ವಾಭಿಮಾನಕ್ಕೆ ಘಟಶ್ರಾದ್ಧ: ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ

Next Post

ಊಟಕ್ಕೆ ಕರೆದಿದ್ರು ಹೋಗಿದ್ದೆ ಅಷ್ಟೇ, ಇದರಲ್ಲಿ ತಪ್ಪೇನಿದೆ? ಸ್ಪೀಕರ್ ಖಾದರ್ ತಿರುಗೇಟು

kalpa News

kalpa News

Next Post
ಜೂ.26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌

ಊಟಕ್ಕೆ ಕರೆದಿದ್ರು ಹೋಗಿದ್ದೆ ಅಷ್ಟೇ, ಇದರಲ್ಲಿ ತಪ್ಪೇನಿದೆ? ಸ್ಪೀಕರ್ ಖಾದರ್ ತಿರುಗೇಟು

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL