ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಿಚಕ್ರ ವಾಹನ ಕಳ್ಳನನ್ನು ಬಂಧಿಸಿರುವ #Two Wheeler Thief Arrest ಭದ್ರಾವತಿಯ ನ್ಯೂ ಟೌನ್ ಠಾಣೆ ಪೊಲೀಸರು #Bhadravathi Police ಆರೋಪಿಯಿಂದ 1.10 ಲಕ್ಷ ಮೌಲ್ಯದ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಭದ್ರಾವತಿ ತಾಲ್ಲೂಕಿನ ಹೆಬ್ಬಂಡಿ ತಾಂಡಾದ ಆರ್.ರಂಗನಾಥ್ ಬಂಧಿತ ಆರೋಪಿ. ಭದ್ರಾವತಿ ಸಿದ್ಧಾಪುರ ಬೈಪಾಸ್ ನ ತಿಬ್ಬಾದೇವಿ ಎಂಜಿನಿಯರಿಂಗ್ ವರ್ಕ್ಸ್ ಮುಂದೆ ನಿಲ್ಲಿಸಿದ್ದ ತಮ್ಮ ಹೊಂಡಾ ಆಕ್ಟಿವಾ ಸ್ಕೂಟರನ್ನು ಯಾರೋ ಕಳ್ಳತನ ಮಾಡಿದ್ದಾರೆ ಎಂದು ಕಳೆದ ಜುಲೈ 16ರಂದು ತರೀಕೆರೆಯ ಬಸವನಗರದ ನವೀನ್ ಎಂಬುವವರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Also read: ಶಿವಮೊಗ್ಗ | ಪೊಲೀಸರಿಂದ 20 ಟನ್ ಮೆಟ್ರಿಕ್ ಮರಳು ವಶ
ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಠಾಣೆ ಇನ್ಸ್ಪೆಕ್ಟರ್ ಶ್ರೀಶೈಲ ಕುಮಾರ್ ಹಾಗೂ ಪಿಎಸ್ಐ ಟಿ.ರಮೇಶ್ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಅದೇ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಆಗಿದ್ದ ಮತ್ತೊಂದು ದ್ವಿಚಕ್ರ ವಾಹನವನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post