ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿ ಜೆಡಿಎಸ್ ಮುಖಂಡ ಎಸ್. ಕುಮಾರ್ ಕೆಂಚೇನಹಳ್ಳಿ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿಂದು ಬಿಜೆಪಿಗೆ ಸೇರ್ಪಡೆಗೊಂಡ ಇವರನ್ನು ಸಚಿವ ಕೆ.ಎಸ್. ಈಶ್ವರಪ್ಪ, #Minister Eshwarappa ಸಂಸದ ಬಿ.ವೈ. ರಾಘವೇಂದ್ರ, #MP Raghavendra ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, #D S Arun ಭಾನುಪ್ರಕಾಶ್, ಮೇಯರ್ ಸುನೀತಾ ಅಣ್ಣಪ್ಪ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್. ಕುಮಾರ್, ಭದ್ರಾವತಿಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಗ್ರಹಿಸಿ, ಕಾರ್ಯಕರ್ತರ ಸಂಖ್ಯೆ ಹೆಚ್ಚಳ ಮಾಡುವುದು ನಮ್ಮ ಉದ್ದೇಶವಾಗಿದೆ. ಕ್ಷೇತ್ರದಲ್ಲಿ ಬಿಜೆಪಿಯ ಕಮಲವನ್ನು ಅರಳಿಸುವುದು ನಮ್ಮ ಸಂಕಲ್ಪವಾಗಿದ್ದು, ಇದಕ್ಕಾಗಿ ಹಗಲಿರುಳು ಶ್ರಮಿಸುತ್ತೇವೆ. ಪಕ್ಷ ಕ್ಷೇತ್ರದಲ್ಲಿ ಯಾರಿಗೇ ಟಿಕೇಟ್ ನೀಡಿದರೂ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.
Also read: ಕೃಷಿ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ: 100 ಕಿಸಾನ್ ಡ್ರೋಣ್’ಗೆ ಪ್ರಧಾನಿ ಮೋದಿ ಚಾಲನೆ
ಜೆಡಿಎಸ್’ನ ಚಿಕ್ಕಗೋಪೇನಹಳ್ಳಿ ಪ್ರದೀಪ್, ಕಾಂಗ್ರೆಸ್’ನ ಸತೀಶ್ ಗೌಡ ಹೊನ್ನಟ್ಟಿ ಹೊಸೂರು, ಭದ್ರಾವತಿ ತಾಲೂಕು ಈಡಿಗರ ಸಮಾಜದ ಅಧ್ಯಕ್ಷ ನಟರಾಜ್ ಸೇರಿದಂತೆ ಹಲವು ಬಿಜೆಪಿಗೆ ಸೇರ್ಪಡೆಗೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post