ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ಮೋದಿಯವರ #PM Modi ಭಾವಚಿತ್ರವನ್ನು ಚುನಾವಣೆಗೆ ಬಳಸಿಕೊಳ್ಳಲು ಕೆ.ಎಸ್.ಈಶ್ವರಪ್ಪ #K S Eshwarappa ಅವರು ಕೋರ್ಟ್ ಮೊರೆ ಹೋಗಿದ್ದಕ್ಕೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಪ್ರತಿಕ್ರಿಯಿಸಿ ಹೋಗಲಿ ಬಿಡಿ ಆದರೆ, ಮೋದಿಯವರ ಭಾವಚಿತ್ರ ಬಳಕೆ ಮಾಡಿಕೊಳ್ಳಲು ಎನ್ಡಿಎ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ ಎಂದು ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರು ಮೋದಿ ಭಾವಚಿತ್ರವನ್ನು ಪ್ರಚಾರದಲ್ಲಿ ಬಳಸುತ್ತಿರುವುದಕ್ಕೆ ರಾಘವೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಈಶ್ವರಪ್ಪ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಮೋದಿ ಭಾವಚಿತ್ರವನ್ನು ಬಳಸಲು ಅನುಮತಿ ಕೋರಿ ಕೋರ್ಟ್ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.
Also read: ಗ್ರಾಮೀಣ ಕೃಪಾಂಕ ನೀಡಿ ಉದ್ಯೋಗಕ್ಕೆ ದಾರಿದೀಪವಾಗಿದ್ದವರು ಬಂಗಾರಪ್ಪ: ಗೀತಾ ಶಿವರಾಜಕುಮಾರ್
ಈ ಹಿನ್ನಲೆಯಲ್ಲಿ ಸಂಸದ ರಾಘವೇಂದ್ರ ಅವರು ಮೋದಿಯವರ ಪೋಟೋ ಬಳಕೆ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈಶ್ವರಪ್ಪ ಕೂಡ ಮೋದಿ ಅವರಪ್ಪನ ಆಸ್ತಿಯೇ ಎಂದು ಕೇಳಿದ್ದರು. ಈ ಇಬ್ಬರ ವಾದಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಇದೀಗ ಈಶ್ವರಪ್ಪನವರು ಕೇವಿಯಟ್ ಅರ್ಜಿ ಸಲ್ಲಿಸಿರುವುದಕ್ಕೆ ಸಂಸದ ಈ ಪ್ರತಿಕ್ರಿಯೆ ನೀಡಿ ಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post