ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಕೊಮ್ಮನಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಳ್ಳಿ ಸೋಮಿನಕೊಪ್ಪದಲ್ಲಿ ಮೂರು ತಿಂಗಳುಗಳಿಂದ ಆಗಾಗ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಇಂದು ಬೆಳಗ್ಗೆ ಬಿದ್ದಿದೆ.
ಗ್ರಾಮದ ಯುವಕ ವರುಣ್ ಹೇಳುವ ಪ್ರಕಾರ ಕಳೆದ ಮೂರು ತಿಂಗಳಿಂದ ಚಿರತೆ ಆಗಾಗ ಕಾಣಿಸಿಕೊಂಡು ಹಲವು ನಾಯಿಯನ್ನು ಸಹ ಕೊಂದು ಹಾಕಿತ್ತು ಎಂದಿದ್ದಾರೆ.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಬೋನನ್ನು ಇಟ್ಟು ಸೆರೆ ಹಿಡಿಯಲು ಮುಂದಾಗಿ, ಅಂತಿಮವಾಗಿ ಚಿರತೆಯನ್ನು ಸೆರೆ ಹಿಡಿಯಲು ಯಶಸ್ವಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















