No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್

ನೈಟ್ ಲ್ಯಾಂಡಿಂಗ್ ವಿಚಾರವಾಗಿ ನಂಜಯ್ಯನಮಠ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 16, 2026
in ಶಿವಮೊಗ್ಗ
0
ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಂದಿನ ಆರೇಳು ತಿಂಗಳ ಅವಧಿಯೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ #Shivamogga Airport ರಾತ್ರಿ ವೇಳೆಯಲ್ಲಿ ವಿಮಾನಗಳು ಏರಿಳಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಫೆಬ್ರವರಿ ಮಾಸಾಂತ್ಯದೊಳಗಾಗಿ ಸುಮಾರು 6 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅ‍ಧ್ಯಕ್ಷ ನಂಜಯ್ಯನಮಠ್‌ ಅವರು ಹೇಳಿದರು.

ಅವರು ಇಂದು ನಗರದ ಹೊರವಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಹಿಂದೆ ನವೀಕರಣಗೊಳ್ಳದೆ ಬಾಕಿ ಉಳಿದಿದ್ದ ವಿಮಾನ ನಿಲ್ದಾಣದ ಪರವಾನಗಿ ನವೀಕರಣದ ಸಮಸ್ಯೆಯನ್ನು ಇತ್ಯರ್ಥಗೊಳಿಸಿ, ಆಡಳಿತಾತ್ಮಕ ಅಡತಡೆಗಳನ್ನು ನಿವಾರಿಸಿಕೊಳ್ಳಲಾಗಿದೆ. ಅಲ್ಲದೇ ಬಾಕಿ ಇದ್ದ 22.00ಲಕ್ಷ ರೂ. ದಂಡ ಪಾವತಿಸಲಾಗಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಪರವಾನಗಿ ನವೀಕರಿಸುವ ಅಗತ್ಯವಿರುವುದಿಲ್ಲ ಎಂದವರು ತಿಳಿಸಿದರು.
ಹವಾಮಾನ ವೈಪರೀತ್ಯ ಹಾಗೂ ಮತ್ತಿತರ ಹಲವು ಕಾರಣಗಳಿಗಾಗಿ ಇಳಿಯಬೇಕಾದ ವಿಮಾನಗಳು ಇಳಿಯದೇ ಹಿಂದಿರುಗಿ ಹೋಗುವುದನ್ನು ನಿಯಂತ್ರಿಸಲು, ರಾತ್ರಿ ಸಂಚಾರಕ್ಕೆ ಮತ್ತು ಸರಕು ಸಾಗಾಣಿಕೆಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅಗತ್ಯವಾಗಿರುವ ದಿಕ್ಸೂಚಿ ಯಾಂತ್ರಿಕ ವ್ಯವಸ್ಥೆ (DBOR)ಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಅಲ್ಲದೇ ವಿದ್ಯುತ್‌ ಸಂಪರ್ಕ ವ್ಯವಸ್ಥೆಯೂ ಪೂರ್ಣಗೊಂಡಿದೆ ಎಂದರು.

ನೈಟ್‌ಲ್ಯಾಂಡಿಂಗ್‌ ವ್ಯವಸ್ಥೆ ಕಲ್ಪಿಸಲು ನಿಯಮಾನುಸಾರ ಸದರಿ ಪ್ರದೇಶದಲ್ಲಿನ ಮಣ್ಣಿನ ಗುಣಮಟ್ಟದ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಇನ್ನೊಂದು ವಾರದಲ್ಲಿ ವರದಿ ಬರುವ ನಿರೀಕ್ಷೆ ಹೊಂದಲಾಗಿದೆ ಎಂದ ಅವರು, ಈ ಎಲ್ಲಾ ಕಾಮಗಾರಿಗಳ ಸಕಾಲಿಕ ಪರಿಶೀಲನೆಗಾಗಿ ತಾವು ಖುದ್ದಾಗಿ ಆಗಮಿಸಿ, ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುವುದಾಗಿ ಅವರು ತಿಳಿಸಿದರು.

ಉಡಾನ್ ಯೋಜನೆ ಮುಂದುವರಿಸಲು ಕೇಂದ್ರಕ್ಕೆ ಮನವಿ : ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಹೈದ್ರಾಬಾದ್‌, ಗೋವಾ ಸೇರಿದಂತೆ ಹಲವು ಪ್ರದೇಶಗಳಿಗೆ ನಿರಂತರವಾಗಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಪುರಸ್ಕೃತ ಹಾಗೂ ವಿಮಾನ ಪ್ರಯಾಣಕ್ಕೆ ರಿಯಾಯಿತಿ ಒದಗಿಸುವ ‘ಉಡಾನ್’ ಯೋಜನೆಯ ಅವಧಿ ಶೀ‍ಘ್ರದಲ್ಲಿ ಮುಕ್ತಾಯಗೊಳ್ಳಲಿದೆ. ಆದ್ದರಿಂದ ಪ್ರಯಾಣಿಕರಿಗೆ ಹೆಚ್ಚಿನ ಪ್ರಯಾಣದರ ಪಾವತಿಸುವ ಹೊರೆ ಬೀಳದಂತೆ ನೋಡಿಕೊಳ್ಳಲು ಸ್ಥಳೀಯ ಸಂಸದರು ಹಾಗೂ ಜನಪ್ರತಿನಿಧಿಗಳ ಸಹಕಾರವನ್ನು ಪಡೆದು, ಸದರಿ ಯೋಜನೆಯನ್ನು ಮುಂದುವರೆಸಲು ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದವರು ನುಡಿದರು.
ವಿಮಾನ ನಿಲ್ದಾಣದಲ್ಲಿ ಈಗಾಗಲೇ ಕಾಯ್ದಿರಿಸಲಾಗಿರುವ 17ಎಕರೆ ನಿವೇಶನದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಬೃಹತ್‌ ವಾಣಿಜ್ಯ ಸಂಕೀರ್ಣ ಮತ್ತು ಪಂಚತಾರಾ ಹೋಟೆಲ್‌ನ್ನು ನಿರ್ಮಿಸುವ ಕುರಿತು ಈಗಾಗಲೇ ನಿಗಮದ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲಿ ಈ ವಿಷಯದ ಕುರಿತು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಸದರಿ ವಿಮಾನ ನಿಲ್ಧಾಣದಲ್ಲಿ ಪೈಲಟ್‌ ತರಬೇತಿ ಕೇಂದ್ರ ಆರಂಭಿಸಲು ಈ ಹಿಂದೆ ಖಾಸಗಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಯಾವುದೇ ಕಂಪನಿಗಳು ಆಸಕ್ತ ವಹಿಸಿರುವುದು ಕಂಡುಬಂದಿರುವುದಿಲ್ಲ. ಆದಾಗ್ಯೂ ಪೈಲಟ್‌ ತರಬೇತಿ ಕೇಂದ್ರ ಆರಂಭಿಸಲು ಇನ್ನೊಮ್ಮೆ ಆಸಕ್ತ ತರಬೇತಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದರು.
ವಿಮಾನ ನಿಲ್ದಾಣದ ನಿರ್ಮಾಣಕ್ಕಾಗಿ ಭೂಮಿ ನೀಡಿ ಸಹಕರಿಸಿದ ರೈತರ 370 ಕುಟುಂಬಗಳಿಗೆ ಅಂದಿನ ಅಧಿಕಾರಿ-ಜನಪ್ರತಿನಿಧಿಗಳು ನೀಡಿದ ಭರವಸೆಯಂತೆ ತಲಾ ಒಂದು ನಿವೇಶನ ನೀಡಿರುವುದಿಲ್ಲ. ಈ ಬಗ್ಗೆ ಸಂತ್ರಸ್ಥರು ಅನೇಕ ಬಾರಿ ಸರ್ಕಾರದ ಗಮನ ಸೆಳೆಯುವ ಕಾರ್ಯ ಮಾಡಿದ್ದಾರೆ. ಅಲ್ಲದೇ ನ್ಯಾಯಾಲಯವೂ ಕೂಡ ಸಂತ್ರಸ್ಥರ ಪರವಾಗಿ ತೀರ್ಪು ನೀಡಿರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆಯ ಇತ್ಯರ್ಥಗೊಳಿಸಲು ಖುದ್ದಾಗಿ ಮಾನ್ಯ ಮುಖ್ಯಮಂತ್ರಿಗಳ ಗಮನಸೆಳೆದು ಅಗತ್ಯವಿರುವು ಅನುದಾನ ಬಿಡುಗಡೆಗೊಳಿಸಲು ಒತ್ತಾಯಿಸಲಾಗುವುದು ಎಂದರು.

ಸಭೆಯಲ್ಲಿ ವಿಮಾನ ನಿಲ್ದಾಣದ ಮುಖ್ಯಸ್ಥ ಶಮಂತ್‌, ವಿದ್ಯಾಧರ್‌ ಸಾಲಿಮಠ್‌, ಮುಖಂಡ ಯೋಗೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamogga AirportShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್
Share243Tweet152Send
Previous Post

ಒಳ ಮೀಸಲಾತಿಯಲ್ಲಿ ಅನ್ಯಾಯ ಆರೋಪ | ಬಂಜಾರ ಸಂಘದಿಂದ ಪ್ರತಿಭಟನೆ

Next Post

ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL