No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪನವರ 75ನೇ ಹುಟ್ಟುಹಬ್ಬದ ಅಮೃತ ಸಂಭ್ರಮ

kalpa News by kalpa News
June 10, 2023
in ಶಿವಮೊಗ್ಗ
0
ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ಜಯಂತಿ ಆಚರಣೆ ಈಶ್ವರಪ್ಪನವರಿಗೆ ಕೇವಲ ನೆಪ ಮಾತ್ರ. ಆ ಸಂದರ್ಭವನ್ನಿಟ್ಟುಕೊಂಡು ಈಶ್ವರಪ್ಪನವರ ಕುಟುಂಬ ರಚನಾತ್ಮಕ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ KSEshwarappa 75ನೇ ಹುಟ್ಟುಹಬ್ಬದ ಅಮೃತ ಸಂಭ್ರಮ ಪ್ರಯುಕ್ತ ಶ್ರೀ ಮಾರಿಕಾಂಬಾ ಮೈಕ್ರೋ ಫೈನಾನ್ಸ್ ಪ್ರೈ.ಲಿ. ಶಿವಮೊಗ್ಗ ಇದರ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಲದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಮಹಿಳೆಯರಿಗೆ ಆರ್ಥಿಕ ಸಹಕಾರ ನೀಡಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾರಿಕಾಂಬಾ ಮೈಕ್ರೋ ಫೈನಾನ್ಸ್ ಮಾಡುತ್ತಾ ಬಂದಿದ್ದು, ದೊಡ್ಡ ಸಾಧನೆ ಮಾಡಿದೆ. ಅಲ್ಲದೆ ವಸುದೈವ ಕುಟುಂಬಕಂ ಎನ್ನುವಂತೆ ಎಲ್ಲರೂ ತಮ್ಮ ಕುಟುಂಬದ ರೀತಿಯಲ್ಲಿ ಅವರು ಅನೇಕ ರೀತಿಯ ನೆರವು ನೀಡುತ್ತಾ ಜನ್ಮದಿನದ ಸಂದರ್ಭದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಕನ್ನಡಕ ವಿತರಣೆ, ಪುಣ್ಯಕ್ಷೇತ್ರಗಳಿಗೆ ಮಹಿಳೆಯರಿಗೆ ಪ್ರವಾಸ ಈ ರೀತಿಯಾಗಿ ಅನೇಕ ಧಾರ್ಮಿಕ, ಸಾಂಸ್ಕøತಿಕ ಮತ್ತು ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಎಲ್ಲರ ಕಣ್ಮಣಿಯಾಗಿದ್ದಾರೆ ಎಂದರು.

ಮಹಿಳೆಯರಿಂದಲೇ ಅತ್ಯುತ್ತಮವಾಗಿ ಕುಟುಂಬ ನಿರ್ವಹಣೆ ಸಾಧ್ಯ. ಮನೆಯೊಡತಿ ಇದ್ದಾಗ ಮಾತ್ರ ಮನೆಗೆ ಲಕ್ಷಣ. ಒಂದು ಮನೆಯನ್ನು ಒಳಗಿರುವ ವಸ್ತುಗಳ ಮೇಲೆ ಅಳೆಯುವುದಲ್ಲ. ಆ ಮನೆಯ ಸಂಸ್ಕಾರ ಮತ್ತು ಸಂಸ್ಕøತಿಯನ್ನು ನೋಡಿ ಅಳೆಯಬೇಕು. ಎಲ್ಲವನ್ನೂ ಒಳಗೊಳ್ಳುವ ಶಕ್ತಿ ಇರುವುದು ಮಾತೆಗೆ ಮಾತ್ರ. ಅನೇಕ ಕುಟುಂಬಗಳು ಇತ್ತೀಚಿನ ದಿನಗಳಲ್ಲಿ ಮನೆಯೊಡತಿ ಇಲ್ಲದೆ ಅನಾಥವಾಗಿವೆ. ಕುಟುಂಬವನ್ನು ಸಂಸ್ಕಾರ ಸಂಸ್ಕøತಿಯಿಂದ ಮುನ್ನಡೆಸುವ ಜವಾಬ್ದಾರಿ ತಾಯಂದಿರದ್ದು. ಅನೇಕ ಪುರುಷರು ದುಶ್ಚಟ ಮತ್ತು ಅವ್ಯವಹಾರಗಳಿಗೆ ಬಲಿಯಾಗಿ ಕುಟುಂಬಕ್ಕೆ ಮಾರಕವಾಗುತ್ತಾರೆ ಈ ಸಂದರ್ಭದಲ್ಲಿಕುಟುಂಬದ ಜವಾಬ್ದಾರಿಯನ್ನು  ಹೊತ್ತು ಹೆಣ್ಣು ಮಕ್ಕಳು ಅಚ್ಚುಕಟ್ಟಾಗಿ ರೂಪಿಸುತ್ತಾರೆ. ಅವರಿಗೆ ನೀಡುವ ಆರ್ಥಿಕ ಸಹಾಯ ವ್ಯರ್ಥವಾಗುವುದಿಲ್ಲ ಎಂದರು.

https://kalpa.news/wp-content/uploads/2023/05/Jain-Public-School.mp4
ಈಶ್ವರಪ್ಪನವರಿಗೆ ದೇವರು ಇನ್ನೂ ಹೆಚ್ಚಿನ ಸಾಮಾಜಿಕ ಸೇವೆ ಮಾಡುವ ಶಕ್ತಿ ನೀಡಿ, ಉನ್ನತ ಸ್ಥಾನ ಸಿಗುವಂತಾಗಲಿ ಎಂದು ಶುಭಹಾರೈಸಿದರು.

ಚಿತ್ರನಟಿ ತಾರಾ ಅನುರಾಧ ಮಾತನಾಡಿ, ನನ್ನ ರಾಜಕೀಯ ಪ್ರವೇಶಕ್ಕೆ ಈಶ್ವರಪ್ಪನವರೇ ಕಾರಣ. ಅವರು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಹಮ್ಮಿಲ್ಲದೆ ಪ್ರೀತಿಯಿಂದ ಮಾತನಾಡಿ, ಮಾರ್ಗದರ್ಶನ ಮಾಡುವುದು ಅವರ ದೊಡ್ಡತನ. ನೂರಾರು ಸಂಘ ಸಂಸ್ಥೆಗಳಿಗೆ ಸಾಲ ನೀಡಿದರೂ ಕೂಡ ಒಂದೇ ಒಂದು ಎನ್‍ಪಿಎ ಇಲ್ಲದೆ ಸಾಲ ಮರುಪಾವತಿ ಮಾಡಿರುವುದು ಒಂದು ದೊಡ್ಡ ಸಾಧನೆ. ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿರುವುದು ಕೂಡ ಖುಷಿಪಡುವ ವಿಚಾರ. ಮಕ್ಕಳು ಸಾಧನೆ ಮಾಡಿದಾಗ ತಂದೆತಾಯಿಗಳಿಗೆ ಮೊದಲು ಅತ್ಯಂತ ಖುಷಿಯಾಗುತ್ತದೆ. ಇಂದು ಪ್ರತಿಭಾ ಪುರಸ್ಕಾರ ಪಡೆದವರನ್ನು ನೋಡಿ ಇನ್ನೂ ಹೆಚ್ಚಿನ ಮಕ್ಕಳು ಸಾಧನೆ ಮಾಡಲಿ ಎಂದು ಹಾರೈಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಪಡೆದಿರುವುದು ನನ್ನ ಸೌಭಾಗ್ಯ. ನನ್ನ ಇಡೀ ಜೀವನ ನನ್ನ ಧರ್ಮ ಮತ್ತು ನನ್ನ ದೇಶಕ್ಕಾಗಿ ಮುಡಿಪಾಗಿಡುತ್ತೇನೆ. ಪ್ರತಿಯೊಂದು ಮನೆಯಲ್ಲಿ ಕೂಡ ಮಕ್ಕಳಿಗೆ ನಮ್ಮ ಸಂಸ್ಕøತಿ ಮತ್ತು ದೇಶದ ಬಗ್ಗೆ ಒಲವು ಬೆಳೆಸಬೇಕು. ನಮ್ಮ ದೇಶದಲ್ಲಿ ಚಾರಿತ್ರ್ಯಕ್ಕೆ ಬಹಳ ಮಹತ್ವ ಇದೆ. ಸಮಾಜ ಸುಧಾರಣೆ ಆಗಬೇಕಾದರೆ ತಂದೆ-ತಾಯಿ ಗುರುಗಳನ್ನು ಗೌರವಿಸಬೇಕು. ನಮ್ಮ ಶ್ರದ್ಧಾ ಕೇಂದ್ರ ಮತ್ತು ಗೋಮಾತೆಗೆ ಗೌರವ ಕೊಡಬೇಕು. ನಿಮ್ಮ ಅಭಿಮಾನಕ್ಕೆ ನಾನು ಚಿರಋಣಿ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ಈ.ಕಾಂತೇಶ್, ಮಾರಿಕಾಂಬಾ ಮೈಕ್ರೋ ಫೈನಾನ್ಸ್ ಕೇವಲ ವ್ಯಾವಹಾರಿಕ ಸಂಸ್ಥೆಯಲ್ಲ. ಸಂಸ್ಥೆಯ ಲಾಭದ ಅರ್ಧದಷ್ಟು ಮಹಿಳೆಯರ ಮತ್ತ ಸದಸ್ಯರ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದೇವೆ. ಸುಮಾರು 70ಕೋಟಿಯಷ್ಟು ಸಾಲವನ್ನು 1200 ಮಹಿಳಾ ಸಂಘಗಳಿಗೆ ವಿತರಿಸಿದ್ದೇವೆ. 500ಕ್ಕೂ ಹೆಚ್ಚು ಅಂಕ ಪಡೆದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯ 103 ವಿದ್ಯಾರ್ಥಿಗಳಿಗೆ ಈ ಬಾರಿ ಸ್ಕಾಲರ್‍ಶಿಪ್ ನೀಡಿದ್ದೇವೆ. ಕಳೆದ ಬಾರಿ ಸುಮಾರು 9ಸಾವಿರ ಹೆಣ್ಣುಮಕ್ಕಳಿಗೆ ಸೀರೆ ಮತ್ತು ಬಾಗಿನವನ್ನು ನೀಡಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೇಯ ನಿರ್ದೇಶಕ ಶಂಕರ್ ಗನ್ನಿ, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ವಿಜಯ್‍ದೇವ್ ಮತ್ತಿತರರಿದ್ದರು.     
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKSEshwarappaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಸಚಿವ ಈಶ್ವರಪ್ಪ ಅಪರೂಪದ ರಾಜಕಾರಣಿ: ಕಾಶಿ ಪೀಠದ ಶ್ರೀಗಳು

Next Post

ನಾಲ್ಕು ತಲೆಮಾರಿನ ಕಾಂಗ್ರೆಸ್ ಆಡಳಿತಕ್ಕಿಂತ, ಮೋದಿಯವರ ಒಂಬತ್ತು ವರ್ಷಗಳ ಆಡಳಿತ ಬಡವರಿಗೆ ಹೆಚ್ಚಿನ ಒಳಿತನ್ನು ಮಾಡಿದೆ: ಅಮಿತ್ ಶಾ

kalpa News

kalpa News

Next Post
ನಾಲ್ಕು ತಲೆಮಾರಿನ ಕಾಂಗ್ರೆಸ್ ಆಡಳಿತಕ್ಕಿಂತ, ಮೋದಿಯವರ ಒಂಬತ್ತು ವರ್ಷಗಳ ಆಡಳಿತ ಬಡವರಿಗೆ ಹೆಚ್ಚಿನ ಒಳಿತನ್ನು ಮಾಡಿದೆ: ಅಮಿತ್ ಶಾ

ನಾಲ್ಕು ತಲೆಮಾರಿನ ಕಾಂಗ್ರೆಸ್ ಆಡಳಿತಕ್ಕಿಂತ, ಮೋದಿಯವರ ಒಂಬತ್ತು ವರ್ಷಗಳ ಆಡಳಿತ ಬಡವರಿಗೆ ಹೆಚ್ಚಿನ ಒಳಿತನ್ನು ಮಾಡಿದೆ: ಅಮಿತ್ ಶಾ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL