Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಏಪ್ರಿಲ್‌ 1ರಂದು ಶಿವಮೊಗ್ಗದಲ್ಲಿ ಬಿಜೆಪಿ ಬೂತ್‌ ಸಮಿತಿಯ ಕಾರ್ಯಕರ್ತರ ಸಮಾವೇಶ | ಡಾ. ಧನಂಜಯ ಸರ್ಜಿ

March 30, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿ ಶಿವಮೊಗ್ಗ ಗ್ರಾಮಾಂತರ ಘಟಕದ ವತಿಯಿಂದ ಏಪ್ರಿಲ್‌ 01 ರ ಸಂಜೆ 4 ಗಂಟೆಗೆ ಬಿ.ಎಚ್‌.ರಸ್ತೆಯ ಸೈನ್ಸ್ ಮೈದಾನದಲ್ಲಿ ಪಕ್ಷದ ಬೂತ್‌ ಸಮಿತಿಯ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಡಾ. ಧನಂಜಯ ಸರ್ಜಿ ತಿಳಿಸಿದರು.

ಅವರು ಶನಿವಾರ ಬಿಜೆಪಿ ಗ್ರಾಮಾಂತರ ಚುನಾವಣಾ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷವಾಗಿದ್ದು, ಬೂತ್‌ ಕಾರ್ಯಕರ್ತರಿಂದ ಹಿಡಿದು ರಾಜ್ಯ, ರಾಷ್ಟ್ರಮಟ್ಟದವರೆಗೆ ಎಲ್ಲರಿಗೂ ಸಮನಾದ ಗೌರವವನ್ನು ನೀಡುತ್ತಾ ಬಂದಿದೆ. ವಿಶ್ವನಾಯಕ ಶ್ರೀ ನರೇಂದ್ರ ಮೋದಿ ಜೀ ಅವರು ಕಳೆದ ಒಂದೂವರೆ ತಿಂಗಳ ಹಿಂದೆ ದೆಹಲಿಯಲ್ಲಿ ನಡೆದಂತಹ ಪ್ರಮುಖರ ಕಾರ್ಯಕಾರಿಣಿ ಸಭೆಯಲ್ಲಿ ಸುಮಾರು ಒಂದೂವರೆ ತಾಸು ಮಾತನಾಡಿದರು. ಆದರೆ, ತಮ್ಮ ನೇತೃತ್ವದ ಕೇಂದ್ರ ಸರಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಲಿಲ್ಲ, ಅಷ್ಟೂ ಹೊತ್ತು ಅವರು ಬೂತ್‌ ಕಾರ್ಯಗಳ ಕುರಿತು ಹೇಳಿದರು, ಬೂತ್‌ ಗೆದ್ದರೆ ದೇಶ ಗೆದ್ದಂತೆ, ಬೂತ್‌ ಗೆದ್ದರೆ ಬಿಜೆಪಿ ಗೆದ್ದಂತೆ ಎಂದು ಬಲವಾಗಿ ಪ್ರತಿಪಾದಿಸಿದರು. ದೊಡ್ಡ ದೊಡ್ಡ ಸಮಾವೇಶಕ್ಕಿಂತ ಕಾರ್ಯಚಟುವಟಿಕೆಗಳೆಲ್ಲವೂ ಬೂತ ಮಟ್ಟದಲ್ಲಿಯೇ ನಡೆಯಬೇಕು.
ಸಬ್‌ ಕಾ ಸಾತ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌, ಸಬ್‌ ಕಾ ಪ್ರಯಾಸ್‌ : ಸಬ್‌ ಕಾ ಸಾತ್‌ : ಜಾತಿ ಮತ ಪಂಥ ಬೇಧವಿಲ್ಲದೇ ಜೊತೆಗೂಡಿ ಕೆಲಸ ಮಾಡುವುದು, ಸಬ್‌ ಕಾ ವಿಕಾಸ್‌ : ಎಲ್ಲರ ವಿಕಾಸವಾಗಿದೆ, ವಿಕಾಸದ ಹಾದಿಯಲ್ಲಿ ಭಾರತ ನಡೆಯುತ್ತಿದೆ, ಅದು ಬಿಜೆಪಿ, ಕಾಂಗ್ರೆಸ್‌ ಅಥವಾ ಜೆಡಿಎಸ್‌ ಹೀಗೆ ಎಲ್ಲ ಮತದಾರರ ವಿಕಾಸದೊಂದಿಗೆ ವಿಕಸಿತ ಭಾರತವಾಗಿದೆ, ಸಬ್‌ ಕಾ ವಿಶ್ವಾಸ್‌ : ನಮ್ಮ ವಿಶ್ವಾಸ ಬಿಜೆಪಿಯ ಮೇಲಿದೆ, ನರೇಂದ್ರ ಮೋದಿ ಅವರ ಮೇಲಿದೆ, ಮೋದಿ ಜೀ ಮತ್ತು ಬಿಜೆಪಿಯವರಿಗೆ ಯಾರ ಮೇಲೆ ವಿಶ್ವಾಸ ಇದೆ ಎಂದರೆ, ಭಾರತದ ಅತಿ ದೊಡ್ಡ ಕಾರ್ಯಕರ್ತರಿರುವ ಪಕ್ಷವೆಂದರೆ ಅದು ಬಿಜೆಪಿ, ಅದು ಹೆಚ್ಚು ನಿಷಾವಂತ ಕಾರ್ಯಕರ್ತರನ್ನು ಹೊಂದಿದ ಪಕ್ಷವಾಗಿದೆ, ಹಾಗಾಗಿ ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿಶ್ವಾಸವಿದೆ, ಇನ್ನು ಸಬ್‌ ಕಾ ಪ್ರಯಾಸ್‌ : ನಮ್ಮ ಭಾರತ ದೇಶದ ಭದ್ರತೆ, ಗೌರವ ಹೆಚ್ಚಬೇಕೆಂದರೆ ಮತ್ತೊಮ್ಮೆ ಮೋದಿಜೀ ಪ್ರಧಾನಿ ಆಗಬೇಕು, ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಕೆಲಸವನ್ನು ಮಾಡಬೇಕು. ಮೋದಿ ಜೀಯವರು ಹೇಳಿದ್ದಾರೆ, ನಮ್ಮ ಕಾರ್ಯಕರ್ತರು ಜನರ ಬಳಿ ಹೋಗಿ ಮತ ಕೇಳಬೇಕೆಂದರೆ ತಲೆ ಎತ್ತಿ ಕೇಳಬೇಕು, ಎದೆಯುಬ್ಬಿಸಿ ಕೇಳಬೇಕು, ಅಂತಹ ಸ್ಥಿತಿಯಲ್ಲಿ ಬಿಜೆಪಿಗಿದೆ, 2 ಜಿ ಹಗರಣ ಮಾಡಲಿಲ್ಲ, ತ್ರಿ ಜಿ ಹಗರಣ ಮಾಡಲಿಲ್ಲ, ಹಾಗಾಗಿ ತಲೆ ಎತ್ತಿ ಮತ ಕೇಳುವಂತೆ ಮಾಡಿದ್ದಾರೆ. ದೇಶದಲ್ಲಿ 3 ಸಾವಿರ ಜಾತಿಗಳಿದ್ದು, 25 ಸಾವಿರ ಉಪ ಜಾತಿಗಳಿದ್ದರೂ ಮೋದಿಜೀಗೆ ನಾಲ್ಕು ಜಾತಿ ಮಾತ್ರ. ಅದುವೇ ಗರೀಬೋ ಕಾ ಕಲ್ಯಾಣ್‌, ಯುವಜನೋ ಕಾ ಉತ್ಥಾನ್‌, ಕಿಸಾನೋ ಕಾ ಸಮ್ಮಾನ್‌, ನಾರಿ ಯೋ ಕಾ ಸಶಸ್ತೀಕರಣ್‌. ಬೂತ್‌ ಮಟ್ಟದಲ್ಲಿ ಫಲಾನುವಿಗಳ ಸಭೆ, ಫಲಾನುಭವಿಗಳ ಪ್ರತಿ ಮೆನೆಗೆ ಸಂಪರ್ಕ ಸಾಧಿಸಬೇಕು,ಯುವಕರ ಸಭೆಗಳು ಆಗಬೇಕು, ರೈತರ ಸಭೆಗಳು ಆಗಬೇಕು, ಮಹಿಳೆಯರ ಸಭೆಗಳು ಬೂತ್‌ ಮಟ್ಟದಲ್ಲಿ ಆಗಬೇಕು, ಓಬಿಸಿಯ ಸಭೆಗಳು ಆಗಬೇಕು, ಕೀ ವೋಟರ್‌ರ‍ಸ ಸಂಪರ್ಕ ಬೂತ್‌ ಮಟ್ಟದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಸಜ್ಜುಗೊಳಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಮಾವೇಶದಲ್ಲಿ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಹಾಗೂ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ, ನಗರ ಶಾಸಕರಾದ ಎಸ್‌.ಎನ್‌.ಚನ್ನಬಸಪ್ಪ, ಕ್ಲಸ್ಟರ್‌, ವಿಧಾನ ಪರಿಷತ್‌ ಸದಸ್ಯರಾದ ಎಸ್‌.ರುದ್ರೇಗೌಡ್ರು, ಡಿ.ಎಸ್‌.ಅರುಣ್‌, ಮಾಜಿ ಶಾಸಕ ಎಂ.ಬಿ. ಭಾನುಪ್ರಕಾಶ್‌, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌, ಜಿಲ್ಲಾ ಚುನಾವಣಾ ಸಂಚಾಲಕರಾದ ಆರ್‌.ಕೆ.ಸಿದ್ರಾಮಣ್ಣ, ಗಿರೀಶ್ ಪಟೇಲ್,ಮಾಜಿ ಶಾಸಕರಾದ ಕೆ.ಬಿ.ಅಶೋಕ್‌ ನಾಯ್ಕ್, ಕೆ.ಜಿ.ಕುಮಾರ ಸ್ವಾಮಿ, ಪ್ರಭಾರಿಗಳಾದ ಡಾ.ಧನಂಜಯ ಸರ್ಜಿ ಭಾಗವಹಿಸುವರು. ಶಿವಮೊಗ್ಗ ಗ್ರಾಮಾಂತರ ಮಂಡಲ 156 ಮತ್ತು ಹೊಳೆಹನ್ನೂರು ಮಂಡಲದ 75 ಬೂತ್‌ಗಳಿವೆ. 13 ಜನರ ಕಾರ್ಯಕರ್ತರ ತಂಡದ ಒಟ್ಟು 231 ಬೂತ್‌ಗಳ ಕಾರ್ಯಕರ್ತರು ಸಮಾವೇಶಗೊಳ್ಳಲಿದ್ದಾರೆ. ಪ್ರತಿ ಬೂತ್‌ ಸಮಿತಿಯಲ್ಲಿ ಅಧ್ಯಕ್ಷ, ಕಾರ್ಯದರ್ಶಿ, ಮಹಿಳಾ ಪ್ರಮುಖರು, ಎಸ್‌ಸಿ,ಎಸ್‌ಟಿ, ಓಬಿಸಿ ಹಾಗೂ ಬಿಎಲ್‌ಎ-2 ಗಳ 3000 ಸಾವಿರಕ್ಕೂ ಹೆಚ್ಚು ಬೂತ್‌ ಸಮಿತಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Also read: ಶಿವಮೊಗ್ಗ | ಸೂಳೆಬೈಲಿನ ಕಲ್ಲು ಕ್ವಾರಿಯಲ್ಲಿ ಶವ ಪತ್ತೆ | ಲಾರಿ ಹರಿದು ಸಾವು?

ಗ್ರಾಮಾಂತರದಲ್ಲಿ 231 ಬೂತ್‌ಗಳಿವೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಸಿದ್ಧತೆಗಳು ನಡೆಯದೆ, ನಿರಂತರವಾಗಿ ನಡೆಯುತ್ತಿದೆ. ಈ ಸಮಾವೇಶದಲ್ಲಿ ಪಕ್ಷದ ಹಿರಿಯರು ಕಾರ್ಯಕರ್ತರಿಗೆ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಎಸ್‌.ಇ.ಸುರೇಶ್‌, ಹೊಳೆಹನ್ನೂರು ಮಂಡಲ ಅಧ್ಯಕ್ಷ ಎಂ. ಮಲ್ಲೇಶಪ್ಪ, ಸಂಚಾಲಕರಾದ ಜಿ.ಇ.ವಿರೂಪಾಕ್ಷಪ್ಪ, ಮಾಜಿ ಶಾಸಕರಾದ ಕೆ.ಬಿ.ಅಶೋಕ್‌ ನಾಯ್‌್ಕ, ಕೆ.ಜಿ.ಕುಮಾರ ಸ್ವಾಮಿ, ಗ್ರಾಮಾಂತರ ಮಂಡಲ ಪ್ರಭಾರಿ ರಮೇಶ್‌ (ರಾಮು), ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಎಂ.ಗಣೇಶ್‌, ಎಸ್‌. ಆರ್‌. ಚಂದ್ರಕುಮಾರ್‌, ಪ್ರಮುಖರಾದ ಅಣ್ಣಪ್ಪ ಆಯನೂರು, ಎಂ.ಬಿ.ಶಂಕರ ಮೂರ್ತಿ ಮತ್ತಿತರ ಪ್ರಮುಖರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ | ಸೂಳೆಬೈಲಿನ ಕಲ್ಲು ಕ್ವಾರಿಯಲ್ಲಿ ಶವ ಪತ್ತೆ | ಲಾರಿ ಹರಿದು ಸಾವು?

Next Post

ನೇತ್ರಾವತಿ ನದಿಯಲ್ಲಿ ತಾಯಿ-ಮಗುವಿನ ಮೃತದೇಹ ಪತ್ತೆ | ಆತ್ಮಹತ್ಯೆ ಶಂಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೇತ್ರಾವತಿ ನದಿಯಲ್ಲಿ ತಾಯಿ-ಮಗುವಿನ ಮೃತದೇಹ ಪತ್ತೆ | ಆತ್ಮಹತ್ಯೆ ಶಂಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!