ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ BYVijayendra ಆಯ್ಕೆಯಾಗಿರುವುದಕ್ಕೆ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದ್ದಾರೆ.
ನಗರದ ಬಿಎಸ್ವೈ BSY ನಿವಾಸದ ಎದುರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಪರವಾಗಿ ಘೋಷಣೆ ಕೂಗಿದರು. ಸಂಸದ ರಾಘವೇಂದ್ರ ಅವರನ್ನು ಹೊತ್ತುಕೊಂಡು ಸಂಭ್ರಮಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೂಡ ಸಂಭ್ರಮಾಚರಿಸಲಾಯಿತು. ಬಿಜೆಪಿಯ ಕಾರ್ಯಕರ್ತರು ಮತ್ತು ನಾಯಕರು ಸಂಭ್ರಮದಿಂದ ಪಟಾಕಿ ಸಿಡಿಸಿ ಸಿಹಿ ಹಂಚಿದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರುಗಳಾದ ಬಿ.ವೈ. ರಾಘವೇಂದ್ರ, ಭಾನುಪ್ರಕಾಶ್, ಎಸ್.ಎನ್ ಚನ್ನಬಸಪ್ಪ, ಮುಂತಾದವರು ಮಾತನಾಡಿ, ಬಿಜೆಪಿಗೆ ಈಗ ಶಕ್ತಿ ಬಂದಿದೆ. ಉತ್ತಮ ನಾಯಕತ್ವ ಸಿಕ್ಕಿದೆ. ಪಕ್ಷದ ಸಂಘಟನೆಗೆ ಮತ್ತಷ್ಟು ವೇಗ ಸಿಗಲಿದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನೂ ನಾವು ಗೆಲ್ಲುತ್ತೇವೆ ಎಂದರು.
ಶುಭಮಂಗಳ ಸಮುದಾಯ ಭವನದ ಆವರಣದಲ್ಲಿರುವ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪಾಲಿಕೆ ಸದಸ್ಯ ಇ. ವಿಶ್ವಾಸ್ ನೇತೃತ್ವದಲ್ಲಿ ಬಿಜೆಪಿ ಯುವ ಮೋರ್ಚಾ ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿದರು.
Also read: ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮುಖಂಡರಾದ ಆರ್.ಕೆ. ಸಿದ್ರಾಮಣ್ಣ, ಜ್ಞಾನೇಶ್ವರ್, ಜಗದೀಶ್, ಹರಿಕೃಷ್ಣ, ನಾಗರಾಜ್, ಶ್ರೀನಾಥ್, ಡಾ. ಧನಂಜಯ ಸರ್ಜಿ, ರತ್ನಾಕರ ಶೆಣೈ, ಮಾಲತೇಶ್, ಸಂತೋಷ್ ಬಳ್ಳೇಕೆರೆ, ಸುಭಾಷ್, ಮೋಹನ್ ರೆಡ್ಡಿ, ಶಿವಕುಮಾರ್, ಸುನೀತಾ ಅಣ್ಣಪ್ಪ, ಸುವರ್ಣಾ ಶಂಕರ್, ಸುರೇಖಾ ಮುರಳೀಧರ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post