No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

150ಕ್ಕೂ ಹೆಚ್ಚು ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಶಾಸಕ ಈಶ್ವರಪ್ಪ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2022
in ಶಿವಮೊಗ್ಗ
0
ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯಬೇಕು ಎಂಬ ದುರಾಸೆಯಿಂದ ಬಿಜೆಪಿ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ಆದರೆ ಜನ ಇವರ ಮಾತನ್ನು ನಂಬುವುದಿಲ್ಲ. 150ಕ್ಕೂ ಹೆಚ್ಚು ಸ್ಥಾನ ಗಳಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಈಶ್ವರಪ್ಪ MLA Eshwarappa ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಸಿಎಂ ಸ್ಥಾನ, ಶಾಸಕ ಸ್ಥಾನ ಎಲ್ಲಾ ಹೋಯ್ತು. ಮತ್ತೆ ಮುಖ್ಯಮಂತ್ರಿ ಆಗಬೇಕು ಎನ್ನುವ ಹಂಬಲದಿಂದ ಇಂತಹ ಆಟ ಆಡುತ್ತಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಕಾಂಗ್ರೆಸ್‌ನ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಅವರು ರಾಜೀನಾಮೆ ಕೊಟ್ಟು ನಮ್ಮ ಪಕ್ಷಕ್ಕೆ ಬರುವವರಿದ್ದಾರೆ ಎಂದರು.
ಬಿಜೆಪಿ ಜನೋತ್ಸವ ಅಲ್ಲ, ಭ್ರಷ್ಟೋತ್ಸವ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ತಾನು ಮುಖ್ಯಮಂತ್ರಿ ಆಗಿದ್ದ ವೇಳೆ ಭ್ರಷ್ಟಾಚಾರ ಮಾಡಿಯೇ ಇಲ್ಲ ಎಂದು ಸಿದ್ಧರಾಮಯ್ಯ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಿದರೆ. ಬಿಜೆಪಿಯದು ಜನೋತ್ಸವ ಅಲ್ಲ ಭ್ರಷ್ಟೋತ್ಸವ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಅರ್ಕಾವತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಅವರ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಅಂತಾ ಚಾಮುಂಡೇಶ್ವರಿ ಮೇಲೆ ಆಣೆ ಮಾಡಲಿ ಎಂದು ಈಶ್ವರಪ್ಪ ಸಿದ್ದರಾಮಯ್ಯ ಅವರಿಗೆ ಸವಾಲು ಎಸೆದಿದ್ದಾರೆ.

ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯ ನೋಡಿ ಕಾಂಗ್ರೆಸ್‌ನವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಕೇಂದ್ರದಲ್ಲೂ ಅನೇಕ ಕಾಂಗ್ರೆಸ್ ಮುಖಂಡರು ಪಕ್ಷ ತೊರೆಯುತ್ತಿದ್ದಾರೆ. ರಾಜ್ಯದಲ್ಲೂ ಕೂಡಾ ಅನೇಕ ಮುಖಂಡರು ಬಿಜೆಪಿ ಸೇರುತ್ತಿದ್ದಾರೆ. ಅವರ ಪಕ್ಷವನ್ನು ಉಳಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು.ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕೆಂಪಣ್ಣ ಅವರಿಗೆ ನೇರವಾಗಿ ಹೇಳುತ್ತೇನೆ. ನೀವು ಹಿರಿಯರು, ನಿಮ್ಮ ಬಗ್ಗೆ ನನಗೆ ಗೌರವ ಇದೆ. ನೀವು ಏಕೆ ಕಾಂಗ್ರೆಸ್ ಕೈಗೊಂಬೆ ಆಗಿದ್ದೀರಾ…?

ಪ್ರತಿಯೊಬ್ಬ ಮಂತ್ರಿ ಒಂದು ಕೇಸಲ್ಲಿ 40% ಪಡೆದಿದ್ದಾರೆ ಎಂಬ ಬಗ್ಗೆ ದಾಖಲೆ ಬಿಡುಗಡೆ ಮಾಡಿ. ನೂರಾರು ದಾಖಲೆ ಇವೆ ಎಂದರೆ ಸಾಲದು, ಆ ದಾಖಲೆಗಳ ಬಿಡುಗಡೆ ಮಾಡಿ. ಒಂದು ದಾಖಲೆ ಬಿಡುಗಡೆ ಮಾಡ್ದೆ, ಕಾಂಗ್ರೆಸ್ ಏಜೆಂಟ್ ರೀತಿ ಮಾತನಾಡಿದರೆ ಜನ ಹೇಗೆ ನಂಬುತ್ತಾರೆ. ಸಿಎಂ, ಪಿಎಂ ಅವರಿಗೆ ಪತ್ರ ಬರೆದೆ ಎಂದು ಹೇಳಿದ ಮಾತ್ರಕ್ಕೆ ಅಥವಾ ಪತ್ರ ಬರೆದ ತಕ್ಷಣ ಸಮಸ್ಯೆ ಬಗೆಹರಿಯೋದಿಲ್ಲ. ಪತ್ರ ಬರೆದಿರಬಹುದು, ಎಲ್ಲಾದರೂ ದಾಖಲೆ ಬಿಡುಗಡೆ ಮಾಡಿದ್ದೀರಾ…? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿರುವ ವಿಚಾರದ ಬಗ್ಗೆ ನಿನ್ನೆ ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಅವರ ಅವಧಿಯಲ್ಲಿ ಏನೇನು ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಹೇಳುತ್ತೇವೆ. ಜೊತೆಗೆ ನಮ್ಮ ಸರ್ಕಾರದ ಅಭಿವೃದ್ಧಿ ಕೆಲಸದ ಬಗ್ಗೆಯೂ ಹೇಳುತ್ತೇವೆ. ಕೆಂಪಣ್ಣರಂತಹ ಯಜಮಾನರನ್ನು ದಯವಿಟ್ಟು ಬಿಟ್ಟುಬಿಡಿ. ಸುಮ್ಮನೆ ಅವರಿಗೆ ಕೆಟ್ಡ ಹೆಸರು ತರಬೇಡಿ. ಅವರನ್ನು ಮುಂದೆ ಬಿಟ್ಟು ಆರೋಪ ಮಾಡಿದರೆ ನಿಮ್ಮ ಮಾತನ್ನು ಯಾರು ನಂಬುತ್ತಾರೆ. ಒಂದೇ ಒಂದು ದಾಖಲೆ ಬಿಡುಗಡೆ ಮಾಡಲು ತಯಾರಿಲ್ಲ ಬರಿ ಪುಕ್ಸಟೆ ಮಾತು ಎಂದು ವ್ಯಂಗ್ಯವಾಡಿದರು.

ಬಿಜೆಪಿ ಜನೋತ್ಸವದ ಬಗ್ಗೆ ಹಾಗೂ ಏನೇನು ಅಭಿವೃದ್ಧಿ ಕಾರ್ಯಕ್ರಮ ಮಾಡಿದ್ದೇವೆ ಅಂತಾ ತೋರಿಸುತ್ತೇವೆ. ಕಾಂಗ್ರೆಸ್ ನವರ ಮಾತನ್ನು ಜನ ನಂಬುವುದಿಲ್ಲ. ಆದರೂ ಭಂಡತನದಿಂದ ನಮ್ಮ ಮೇಲೆ ಆಪಾದನೆ ಮಾಡುತ್ತಾರೆ. ಡಿಕೆಶಿ, ಸಿದ್ದರಾಮಯ್ಯ ಆರೋಪಗಳನ್ನು ಜನ ನಂಬುವುದಿಲ್ಲ ಎಂದರು.
ದಿನ ಸತ್ಯ ಹರಿಶ್ಚಂದ್ರನ ರೀತಿ ಮಾತನಾಡುವ, ಇದು ಭ್ರಷ್ಟಾಚಾರ ಸರ್ಕಾರ, 40% ಸರ್ಕಾರ ಎಂದು ಹೇಳುವ ಡಿ.ಕೆ. ಶಿವಕುಮಾರ್ ತಿಹಾರ್ ಜೈಲಿಗೆ ಯಾಕೆ ಸುಮ್ಮನೆ ಹೋಗಿದ್ದರಾ… ಬೇಲ್ ಮೇಲೆ ಯಾಕೆ ಇದ್ದಾರೆ…? ತಿಹಾರ್ ಜೈಲಿಗೆ ಸುಮ್ಮನೆ ಕಳುಹಿಸುತ್ತಾರಾ…? ಅವರ ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಹಣ ಸಿಕ್ಕಿದ್ದು ಸತ್ಯ ತಾನೇ. ಬಿಜೆಪಿ ಸರ್ಕಾರ ಭ್ರಷ್ಟಾಚಾರ ಸರ್ಕಾರ ಅಂತಾರಲ್ಲ ಜನ ಇವರ ಮಾತನ್ನು ನಂಬುತ್ತಾರಾ..? ಎಂದು ಕಟುಕಿಯಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Previous Post

ಶಿಕ್ಷಕರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಿ: ಶಾಸಕ ಈಶ್ವರಪ್ಪ

Next Post

ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಮಂಜೂರು: ಕುಂಬತ್ತಿ ಗ್ರಾಮಸ್ಥರ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಮಂಜೂರು: ಕುಂಬತ್ತಿ ಗ್ರಾಮಸ್ಥರ ಬೃಹತ್ ಪ್ರತಿಭಟನೆ

ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಮಂಜೂರು: ಕುಂಬತ್ತಿ ಗ್ರಾಮಸ್ಥರ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಕೊಲಂಬಿಯಾ | 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

March 24, 2026
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಅತ್ಯವಶ್ಯ

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಶಿಬಿರಗಳು ಅತ್ಯವಶ್ಯ

March 24, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL